Homeಮುಖಪುಟಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

ಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

- Advertisement -
- Advertisement -

ಲಿಂಗ ಸಮಾನತೆ ಸಂದೇಶ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಚಾಕೋಲೆಟ್ ಜಾಹೀರಾತಿಗೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್‌ ಎಂದರೆ ಪುರುಷರಷ್ಟೇ ಎಂದು ಭಾವಿಸಿರುವ ಸಮಾಜದಲ್ಲಿ ಕ್ಯಾಡ್‌ಬರಿಯ ನೂತನ ಜಾಹೀರಾತು ಲಿಂಗ ಸಮಾನತೆಯ ಆಶಯವನ್ನು ಎತ್ತಿ ಹಿಡಿದಿದೆ. ಜಾಹೀರಾತು ವೀಕ್ಷಿಸಿದ ಸಹಸ್ರಾರು ಜನರು ಭಾವುಕರಾಗಿದ್ದಾರೆ. ಈ ಜಾಹೀರಾತನ್ನು ನೋಡಿ ಕಣ್ತುಂಬಿ ಬಂತು ಎಂದು ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಕಮೆಂಟ್ ಮಾಡಿದ್ದಾರೆ.

ಏನಿದು ಜಾಹೀರಾತು?

ನೆನಪುಗಳೊಂದಿಗೆ ಬೆರೆತ ನಗು-ಅಳು ಮಿಶ್ರಿತ ಭಾವ (ನಾಸ್ಟಾಲ್ಜಿಯಾ) ಸೃಷ್ಟಿಸಿರುವ ಈ ಜಾಹೀರಾತು, 90ರ ದಶಕ ಹಾಗೂ 2021ನೇ ಇಸವಿಯ ನಡುವೆ ಆಗಿರುವ ಬದಲಾವಣೆಯನ್ನು ಒಳಗೊಂಡಿದೆ. ಈಗಿನ ಜಾಹೀರಾತು ಕ್ರಿಕೆಟ್‌ನಲ್ಲಿ ಮಹಿಳೆಯರೂ ಸಾಧನೆ ಮಾಡಿರುವುದನ್ನು ಬಿಂಬಿಸುತ್ತದೆ. ಹಿಂದೆ ಕೇವಲ ಪುರುಷರಷ್ಟೇ ಕ್ರೀಡಾಂಗಣದ ಮೇಲೆ ಹಿಡಿತ ಸಾಧಿಸಿದ್ದರು. 2021ನೇ ಇಸವಿಯಲ್ಲಿ ಹೆಣ್ಣುಮಕ್ಕಳೂ ಸಾಧನೆಗೈದಿದ್ದಾರೆ ಎಂಬ ಸಮಾನತೆಯ ಸಂದೇಶವನ್ನು ಕ್ಯಾಡ್‌ಬರಿ ಕಟ್ಟಿಕೊಟ್ಟಿರುವ ರೀತಿಗೆ ಎಲ್ಲರೂ ಫಿದಾ ಆಗಿದ್ದಾರೆ.

90ರ ದಶಕದ ಹಿನ್ನೆಲೆಯ ಹಳೆಯ ಕ್ಯಾಡ್‌ಬರಿ ಜಾಹೀರಾತು ಹೀಗಿದೆ: “ಶತಕದ ಹೊಸ್ತಿಲಿನಲ್ಲಿರುವ ಬ್ಯಾಟ್‌ಮನ್‌ ಕೊನೆಯ ಎಸೆತದಲ್ಲಿ ಸಿಕ್ಸ್‌ ಹೊಡೆಯಲೇ ಬೇಕಿದೆ. ಆತ ಬ್ಯಾಟ್‌ ಬೀಸಿದಾಗ ಗಾಳಿಯಲ್ಲಿ ತೂರಿದ ಬಾಲ್‌, ಫೀಲ್ಡರ್‌ ಕೈಗೆ ಸಿಗುತ್ತದೆ ಎಂದು ಭಾವಿಸಿರುವಾಗಲೇ ಅದು ಬೌಂಡರಿ ದಾಟಿರುತ್ತದೆ. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಯುವತಿ ಕ್ಯಾಡ್‌ಬರಿ ಡೈರಿ ಮಿಲ್ಕ್ ತಿನ್ನುತ್ತಾ, ಖುಷಿಯಲ್ಲಿ ಓಡೋಡಿ ಬರುತ್ತಾಳೆ. ಮೈದಾನದೊಳಗೆ ಯುವತಿ ಬಾರದಂತೆ ತಡೆಯಲು ಸೆಕ್ಯುರಿಟಿ ಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಎಲ್ಲಾ ಪ್ರೇಕ್ಷಕರೂ ಯುವತಿಯ ಉತ್ಸಾಹವನ್ನು ನೋಡಿ ಖುಷಿ ಪಡುತ್ತಾರೆ”.

2021ರ ಕ್ಯಾಡ್‌ಬರಿ ಜಾಹೀರಾತು ಹೀಗಿದೆ: “ಶತಕದ ಹೊಸ್ತಿಲಿನಲ್ಲಿರುವ ಆಟಗಾರ್ತಿ ಕೊನೆಯ ಎಸೆತದಲ್ಲಿ ಸಿಕ್ಸ್‌ ಹೊಡೆಯಲೇ ಬೇಕಿದೆ. ಆಕೆ ಬ್ಯಾಟ್‌ ಬೀಸಿದಾಗ ಗಾಳಿಯಲ್ಲಿ ತೂರಿದ ಬಾಲ್‌, ಫೀಲ್ಡರ್‌ ಕೈಗೆ ಸಿಗುತ್ತದೆ ಎಂದು ಭಾವಿಸಿರುವಾಗಲೇ ಅದು ಬೌಂಡರಿ ದಾಟಿರುತ್ತದೆ. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಯುವಕ ಕ್ಯಾಡ್‌ಬರಿ ಡೈರಿಮಿಲ್ಕ್ ತಿನ್ನುತ್ತಾ, ಖುಷಿಯಲ್ಲಿ ಓಡೋಡಿ ಬರುತ್ತಾನೆ. ಸೆಕ್ಯುರಿಟಿ ತಡೆಯಲು ಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಎಲ್ಲಾ ಪ್ರೇಕ್ಷಕರೂ ಯುವಕನ ಖುಷಿಯನ್ನು ನೋಡಿ ತಾವೂ ಖುಷಿಪಡುತ್ತಾರೆ”

ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೊವನ್ನು ಹಂಚಿಕೊಂಡಿರುವ  ಕ್ಯಾಡ್‌ಬರಿ ಡೈರಿ ಮಿಲ್ಕ್‌ ಸಂಸ್ಥೆಯು, “ಯುವಜನರಿಗೆ ಮಾದರಿಯಾಗಿ ಹೊರಹೊಮ್ಮಿರುವ ನಮ್ಮ ಯುವತಿಯರ ಅದ್ಭುತ ಯಶಸ್ಸನ್ನು ಆಚರಿಸಲು, ಖುಷಿಪಡಲು ಕ್ಯಾಡ್‌ಬರಿ ಡೈರಿಮಿಲ್ಕ್‌‌ ಸವಿಯೋಣ” ಎಂದು ಹೇಳಿದೆ.


ಇದನ್ನೂ ಓದಿ: ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...