Homeಮುಖಪುಟಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

ಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

- Advertisement -
- Advertisement -

ಲಿಂಗ ಸಮಾನತೆ ಸಂದೇಶ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಚಾಕೋಲೆಟ್ ಜಾಹೀರಾತಿಗೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್‌ ಎಂದರೆ ಪುರುಷರಷ್ಟೇ ಎಂದು ಭಾವಿಸಿರುವ ಸಮಾಜದಲ್ಲಿ ಕ್ಯಾಡ್‌ಬರಿಯ ನೂತನ ಜಾಹೀರಾತು ಲಿಂಗ ಸಮಾನತೆಯ ಆಶಯವನ್ನು ಎತ್ತಿ ಹಿಡಿದಿದೆ. ಜಾಹೀರಾತು ವೀಕ್ಷಿಸಿದ ಸಹಸ್ರಾರು ಜನರು ಭಾವುಕರಾಗಿದ್ದಾರೆ. ಈ ಜಾಹೀರಾತನ್ನು ನೋಡಿ ಕಣ್ತುಂಬಿ ಬಂತು ಎಂದು ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಕಮೆಂಟ್ ಮಾಡಿದ್ದಾರೆ.

ಏನಿದು ಜಾಹೀರಾತು?

ನೆನಪುಗಳೊಂದಿಗೆ ಬೆರೆತ ನಗು-ಅಳು ಮಿಶ್ರಿತ ಭಾವ (ನಾಸ್ಟಾಲ್ಜಿಯಾ) ಸೃಷ್ಟಿಸಿರುವ ಈ ಜಾಹೀರಾತು, 90ರ ದಶಕ ಹಾಗೂ 2021ನೇ ಇಸವಿಯ ನಡುವೆ ಆಗಿರುವ ಬದಲಾವಣೆಯನ್ನು ಒಳಗೊಂಡಿದೆ. ಈಗಿನ ಜಾಹೀರಾತು ಕ್ರಿಕೆಟ್‌ನಲ್ಲಿ ಮಹಿಳೆಯರೂ ಸಾಧನೆ ಮಾಡಿರುವುದನ್ನು ಬಿಂಬಿಸುತ್ತದೆ. ಹಿಂದೆ ಕೇವಲ ಪುರುಷರಷ್ಟೇ ಕ್ರೀಡಾಂಗಣದ ಮೇಲೆ ಹಿಡಿತ ಸಾಧಿಸಿದ್ದರು. 2021ನೇ ಇಸವಿಯಲ್ಲಿ ಹೆಣ್ಣುಮಕ್ಕಳೂ ಸಾಧನೆಗೈದಿದ್ದಾರೆ ಎಂಬ ಸಮಾನತೆಯ ಸಂದೇಶವನ್ನು ಕ್ಯಾಡ್‌ಬರಿ ಕಟ್ಟಿಕೊಟ್ಟಿರುವ ರೀತಿಗೆ ಎಲ್ಲರೂ ಫಿದಾ ಆಗಿದ್ದಾರೆ.

90ರ ದಶಕದ ಹಿನ್ನೆಲೆಯ ಹಳೆಯ ಕ್ಯಾಡ್‌ಬರಿ ಜಾಹೀರಾತು ಹೀಗಿದೆ: “ಶತಕದ ಹೊಸ್ತಿಲಿನಲ್ಲಿರುವ ಬ್ಯಾಟ್‌ಮನ್‌ ಕೊನೆಯ ಎಸೆತದಲ್ಲಿ ಸಿಕ್ಸ್‌ ಹೊಡೆಯಲೇ ಬೇಕಿದೆ. ಆತ ಬ್ಯಾಟ್‌ ಬೀಸಿದಾಗ ಗಾಳಿಯಲ್ಲಿ ತೂರಿದ ಬಾಲ್‌, ಫೀಲ್ಡರ್‌ ಕೈಗೆ ಸಿಗುತ್ತದೆ ಎಂದು ಭಾವಿಸಿರುವಾಗಲೇ ಅದು ಬೌಂಡರಿ ದಾಟಿರುತ್ತದೆ. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಯುವತಿ ಕ್ಯಾಡ್‌ಬರಿ ಡೈರಿ ಮಿಲ್ಕ್ ತಿನ್ನುತ್ತಾ, ಖುಷಿಯಲ್ಲಿ ಓಡೋಡಿ ಬರುತ್ತಾಳೆ. ಮೈದಾನದೊಳಗೆ ಯುವತಿ ಬಾರದಂತೆ ತಡೆಯಲು ಸೆಕ್ಯುರಿಟಿ ಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಎಲ್ಲಾ ಪ್ರೇಕ್ಷಕರೂ ಯುವತಿಯ ಉತ್ಸಾಹವನ್ನು ನೋಡಿ ಖುಷಿ ಪಡುತ್ತಾರೆ”.

2021ರ ಕ್ಯಾಡ್‌ಬರಿ ಜಾಹೀರಾತು ಹೀಗಿದೆ: “ಶತಕದ ಹೊಸ್ತಿಲಿನಲ್ಲಿರುವ ಆಟಗಾರ್ತಿ ಕೊನೆಯ ಎಸೆತದಲ್ಲಿ ಸಿಕ್ಸ್‌ ಹೊಡೆಯಲೇ ಬೇಕಿದೆ. ಆಕೆ ಬ್ಯಾಟ್‌ ಬೀಸಿದಾಗ ಗಾಳಿಯಲ್ಲಿ ತೂರಿದ ಬಾಲ್‌, ಫೀಲ್ಡರ್‌ ಕೈಗೆ ಸಿಗುತ್ತದೆ ಎಂದು ಭಾವಿಸಿರುವಾಗಲೇ ಅದು ಬೌಂಡರಿ ದಾಟಿರುತ್ತದೆ. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಯುವಕ ಕ್ಯಾಡ್‌ಬರಿ ಡೈರಿಮಿಲ್ಕ್ ತಿನ್ನುತ್ತಾ, ಖುಷಿಯಲ್ಲಿ ಓಡೋಡಿ ಬರುತ್ತಾನೆ. ಸೆಕ್ಯುರಿಟಿ ತಡೆಯಲು ಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಎಲ್ಲಾ ಪ್ರೇಕ್ಷಕರೂ ಯುವಕನ ಖುಷಿಯನ್ನು ನೋಡಿ ತಾವೂ ಖುಷಿಪಡುತ್ತಾರೆ”

ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೊವನ್ನು ಹಂಚಿಕೊಂಡಿರುವ  ಕ್ಯಾಡ್‌ಬರಿ ಡೈರಿ ಮಿಲ್ಕ್‌ ಸಂಸ್ಥೆಯು, “ಯುವಜನರಿಗೆ ಮಾದರಿಯಾಗಿ ಹೊರಹೊಮ್ಮಿರುವ ನಮ್ಮ ಯುವತಿಯರ ಅದ್ಭುತ ಯಶಸ್ಸನ್ನು ಆಚರಿಸಲು, ಖುಷಿಪಡಲು ಕ್ಯಾಡ್‌ಬರಿ ಡೈರಿಮಿಲ್ಕ್‌‌ ಸವಿಯೋಣ” ಎಂದು ಹೇಳಿದೆ.


ಇದನ್ನೂ ಓದಿ: ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...