Homeಮುಖಪುಟಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

ಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

- Advertisement -
- Advertisement -

ಲಿಂಗ ಸಮಾನತೆ ಸಂದೇಶ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಚಾಕೋಲೆಟ್ ಜಾಹೀರಾತಿಗೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್‌ ಎಂದರೆ ಪುರುಷರಷ್ಟೇ ಎಂದು ಭಾವಿಸಿರುವ ಸಮಾಜದಲ್ಲಿ ಕ್ಯಾಡ್‌ಬರಿಯ ನೂತನ ಜಾಹೀರಾತು ಲಿಂಗ ಸಮಾನತೆಯ ಆಶಯವನ್ನು ಎತ್ತಿ ಹಿಡಿದಿದೆ. ಜಾಹೀರಾತು ವೀಕ್ಷಿಸಿದ ಸಹಸ್ರಾರು ಜನರು ಭಾವುಕರಾಗಿದ್ದಾರೆ. ಈ ಜಾಹೀರಾತನ್ನು ನೋಡಿ ಕಣ್ತುಂಬಿ ಬಂತು ಎಂದು ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಕಮೆಂಟ್ ಮಾಡಿದ್ದಾರೆ.

ಏನಿದು ಜಾಹೀರಾತು?

ನೆನಪುಗಳೊಂದಿಗೆ ಬೆರೆತ ನಗು-ಅಳು ಮಿಶ್ರಿತ ಭಾವ (ನಾಸ್ಟಾಲ್ಜಿಯಾ) ಸೃಷ್ಟಿಸಿರುವ ಈ ಜಾಹೀರಾತು, 90ರ ದಶಕ ಹಾಗೂ 2021ನೇ ಇಸವಿಯ ನಡುವೆ ಆಗಿರುವ ಬದಲಾವಣೆಯನ್ನು ಒಳಗೊಂಡಿದೆ. ಈಗಿನ ಜಾಹೀರಾತು ಕ್ರಿಕೆಟ್‌ನಲ್ಲಿ ಮಹಿಳೆಯರೂ ಸಾಧನೆ ಮಾಡಿರುವುದನ್ನು ಬಿಂಬಿಸುತ್ತದೆ. ಹಿಂದೆ ಕೇವಲ ಪುರುಷರಷ್ಟೇ ಕ್ರೀಡಾಂಗಣದ ಮೇಲೆ ಹಿಡಿತ ಸಾಧಿಸಿದ್ದರು. 2021ನೇ ಇಸವಿಯಲ್ಲಿ ಹೆಣ್ಣುಮಕ್ಕಳೂ ಸಾಧನೆಗೈದಿದ್ದಾರೆ ಎಂಬ ಸಮಾನತೆಯ ಸಂದೇಶವನ್ನು ಕ್ಯಾಡ್‌ಬರಿ ಕಟ್ಟಿಕೊಟ್ಟಿರುವ ರೀತಿಗೆ ಎಲ್ಲರೂ ಫಿದಾ ಆಗಿದ್ದಾರೆ.

90ರ ದಶಕದ ಹಿನ್ನೆಲೆಯ ಹಳೆಯ ಕ್ಯಾಡ್‌ಬರಿ ಜಾಹೀರಾತು ಹೀಗಿದೆ: “ಶತಕದ ಹೊಸ್ತಿಲಿನಲ್ಲಿರುವ ಬ್ಯಾಟ್‌ಮನ್‌ ಕೊನೆಯ ಎಸೆತದಲ್ಲಿ ಸಿಕ್ಸ್‌ ಹೊಡೆಯಲೇ ಬೇಕಿದೆ. ಆತ ಬ್ಯಾಟ್‌ ಬೀಸಿದಾಗ ಗಾಳಿಯಲ್ಲಿ ತೂರಿದ ಬಾಲ್‌, ಫೀಲ್ಡರ್‌ ಕೈಗೆ ಸಿಗುತ್ತದೆ ಎಂದು ಭಾವಿಸಿರುವಾಗಲೇ ಅದು ಬೌಂಡರಿ ದಾಟಿರುತ್ತದೆ. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಯುವತಿ ಕ್ಯಾಡ್‌ಬರಿ ಡೈರಿ ಮಿಲ್ಕ್ ತಿನ್ನುತ್ತಾ, ಖುಷಿಯಲ್ಲಿ ಓಡೋಡಿ ಬರುತ್ತಾಳೆ. ಮೈದಾನದೊಳಗೆ ಯುವತಿ ಬಾರದಂತೆ ತಡೆಯಲು ಸೆಕ್ಯುರಿಟಿ ಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಎಲ್ಲಾ ಪ್ರೇಕ್ಷಕರೂ ಯುವತಿಯ ಉತ್ಸಾಹವನ್ನು ನೋಡಿ ಖುಷಿ ಪಡುತ್ತಾರೆ”.

2021ರ ಕ್ಯಾಡ್‌ಬರಿ ಜಾಹೀರಾತು ಹೀಗಿದೆ: “ಶತಕದ ಹೊಸ್ತಿಲಿನಲ್ಲಿರುವ ಆಟಗಾರ್ತಿ ಕೊನೆಯ ಎಸೆತದಲ್ಲಿ ಸಿಕ್ಸ್‌ ಹೊಡೆಯಲೇ ಬೇಕಿದೆ. ಆಕೆ ಬ್ಯಾಟ್‌ ಬೀಸಿದಾಗ ಗಾಳಿಯಲ್ಲಿ ತೂರಿದ ಬಾಲ್‌, ಫೀಲ್ಡರ್‌ ಕೈಗೆ ಸಿಗುತ್ತದೆ ಎಂದು ಭಾವಿಸಿರುವಾಗಲೇ ಅದು ಬೌಂಡರಿ ದಾಟಿರುತ್ತದೆ. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಯುವಕ ಕ್ಯಾಡ್‌ಬರಿ ಡೈರಿಮಿಲ್ಕ್ ತಿನ್ನುತ್ತಾ, ಖುಷಿಯಲ್ಲಿ ಓಡೋಡಿ ಬರುತ್ತಾನೆ. ಸೆಕ್ಯುರಿಟಿ ತಡೆಯಲು ಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಎಲ್ಲಾ ಪ್ರೇಕ್ಷಕರೂ ಯುವಕನ ಖುಷಿಯನ್ನು ನೋಡಿ ತಾವೂ ಖುಷಿಪಡುತ್ತಾರೆ”

ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೊವನ್ನು ಹಂಚಿಕೊಂಡಿರುವ  ಕ್ಯಾಡ್‌ಬರಿ ಡೈರಿ ಮಿಲ್ಕ್‌ ಸಂಸ್ಥೆಯು, “ಯುವಜನರಿಗೆ ಮಾದರಿಯಾಗಿ ಹೊರಹೊಮ್ಮಿರುವ ನಮ್ಮ ಯುವತಿಯರ ಅದ್ಭುತ ಯಶಸ್ಸನ್ನು ಆಚರಿಸಲು, ಖುಷಿಪಡಲು ಕ್ಯಾಡ್‌ಬರಿ ಡೈರಿಮಿಲ್ಕ್‌‌ ಸವಿಯೋಣ” ಎಂದು ಹೇಳಿದೆ.


ಇದನ್ನೂ ಓದಿ: ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...