Homeಮುಖಪುಟಸಿಎಜಿ ವರದಿ ಗದ್ದಲ; 21 ಜನ ಎಎಪಿ ಶಾಸಕರನ್ನು ಅಮಾನತುಗೊಳಿಸಿದ ದೆಹಲಿ ವಿಧಾನಸಭಾ ಸ್ಪೀಕರ್

ಸಿಎಜಿ ವರದಿ ಗದ್ದಲ; 21 ಜನ ಎಎಪಿ ಶಾಸಕರನ್ನು ಅಮಾನತುಗೊಳಿಸಿದ ದೆಹಲಿ ವಿಧಾನಸಭಾ ಸ್ಪೀಕರ್

- Advertisement -
- Advertisement -

ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಮಂಗಳವಾರ ವಿಧಾನಸಭೆಯಿಂದ 21 ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಮುಂದಿನ ಎರಡು ದಿನಗಳ ಕಾಲ ಅಮಾನತು ಮಾಡಿದ್ದಾರೆ. ಅಬಕಾರಿ ನೀತಿ ಮತ್ತು ಬಿ.ಆರ್. ಅಂಬೇಡ್ಕರ್ ಭಾವಚಿತ್ರದ ಕುರಿತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಯ ಬಗ್ಗೆ ಕಲಾಪಗಳು ಗದ್ದಲದಿಂದ ಕೂಡಿತ್ತು.

ಮಂಗಳವಾರ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣದ ಸಮಯದಲ್ಲಿ ಶಾಸಕರು ಘೋಷಣೆಗಳನ್ನು ಕೂಗಿದರು. ಅಮಾನತುಗೊಳಿಸುವಿಕೆಯು ಎರಡು ಭಾಗಗಳಲ್ಲಿ ನಡೆದಿದ್ದು, 12 ಶಾಸಕರನ್ನು ದಿನದ ಆರಂಭದಲ್ಲಿ, ಉಳಿದವರನ್ನು ನಂತರ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಕಚೇರಿಯಿಂದ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕುವ ಮೂಲಕ ಬಿಜೆಪಿ ಅವರಿಗೆ ಅಗೌರವ ತೋರಿದೆ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕ ಅತಿಶಿ ಸೇರಿದಂತೆ ವರದಿಯಾಗಿದೆ.

ಅತಿಶಿ ಅವರಲ್ಲದೆ, ಗೋಪಾಲ್ ರೈ, ವೀರ್ ಸಿಂಗ್ ಧಿಂಗ್ಯನ್, ಮುಖೇಶ್ ಅಹ್ಲಾವತ್, ಚೌಧರಿ ಜುಬೈರ್ ಅಹ್ಮದ್, ಅನಿಲ್ ಝಾ, ವಿಶೇಷ್ ರವಿ ಮತ್ತು ಜರ್ನೈಲ್ ಸಿಂಗ್ ಅವರನ್ನು ಸಹ ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡ ಎಎಪಿ ಶಾಸಕರು ಮಂಗಳವಾರ ವಿಧಾನಸಭೆ ಆವರಣದಲ್ಲಿ ಅಂಬೇಡ್ಕರ್ ಭಾವಚಿತ್ರಗಳೊಂದಿಗೆ ಪ್ರತಿಭಟನೆ ನಡೆಸಿ, “ಬಾಬಾಸಾಹೇಬ್‌ಗೆ ಈ ಅವಮಾನವನ್ನು ಭಾರತ ಸಹಿಸುವುದಿಲ್ಲ, ಜೈ ಭೀಮ್” ಎಂಬ ಘೋಷಣೆಗಳನ್ನು ಕೂಗಿದರು.

ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ದೆಹಲಿಯ ಬಿಜೆಪಿ ಸರ್ಕಾರ ಮಂಗಳವಾರ ದೆಹಲಿ ಅಬಕಾರಿ ನೀತಿಯ ಕುರಿತಾದ ಸಿಎಜಿ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿತು.

‘ದೆಹಲಿಯಲ್ಲಿ ಮದ್ಯದ ನಿಯಂತ್ರಣ ಮತ್ತು ಪೂರೈಕೆಯ ಕಾರ್ಯಕ್ಷಮತೆಯ ಲೆಕ್ಕಪರಿಶೋಧನೆ’ 2017-18 ರಿಂದ 2020-21 ರವರೆಗಿನ ನಾಲ್ಕು ವರ್ಷಗಳನ್ನು ಒಳಗೊಂಡಿದೆ. ಇದು ದೆಹಲಿಯಲ್ಲಿ ಭಾರತೀಯ ನಿರ್ಮಿತ ವಿದೇಶಿ ಮದ್ಯ (ಐಎಂಎಫ್‌ಎಲ್‌) ಮತ್ತು ವಿದೇಶಿ ಮದ್ಯದ ನಿಯಂತ್ರಣ ಮತ್ತು ಪೂರೈಕೆಯನ್ನು ಪರಿಶೀಲಿಸುತ್ತದೆ.

ವರದಿಯನ್ನು ಮಂಡಿಸುತ್ತಿದ್ದಂತೆ, ಬಿಜೆಪಿ ನಾಯಕರು ಆಮ್ ಆದ್ಮಿ ಪಕ್ಷವನ್ನು (ಎಎಪಿ) ತರಾಟೆಗೆ ತೆಗೆದುಕೊಂಡರು, ಫಲಿತಾಂಶಗಳ ಭಯದಿಂದ ವಿಧಾನಸಭೆಯ ಕಲಾಪವನ್ನು ಅಡ್ಡಿಪಡಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಭ್ರಷ್ಟಾಚಾರಕ್ಕೆ ಹಳೆಯ ನೀತಿಯೇ ಕಾರಣ: ಅತಿಶಿ

ಸಿಎಜಿ ವರದಿಯು ರಾಷ್ಟ್ರ ರಾಜಧಾನಿಯ ಖಜಾನೆಗೆ ₹2002 ಕೋಟಿಗೂ ಹೆಚ್ಚು ನಷ್ಟವನ್ನುಂಟುಮಾಡಿದೆ ಎಂದು ಹೇಳಿಕೊಂಡ ನಂತರ, ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಮಂಗಳವಾರ ರದ್ದಾದ ಹೊಸ ಮದ್ಯ ನೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಹಳೆಯ ಮದ್ಯ ನೀತಿಯ ಅಡಿಯಲ್ಲಿ ಭ್ರಷ್ಟಾಚಾರವನ್ನು ಆಡಿಟ್ ದಾಖಲೆಯು ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ.

ನೆರೆಯ ರಾಜ್ಯಗಳಿಂದ ಅಕ್ರಮವಾಗಿ ಮದ್ಯವನ್ನು ತರಲಾಗುತ್ತಿರುವುದರಿಂದ ದೆಹಲಿಯ ಜನರು ನಷ್ಟ ಅನುಭವಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಮಧ್ಯೆ, ಭಾರತೀಯ ಜನತಾ ಪಕ್ಷವು ವರದಿಯು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ‘ಕಪ್ಪು ಪತ್ರ’ಗಳನ್ನು ಬಹಿರಂಗಪಡಿಸಿದೆ ಎಂದು ಹೇಳಿದೆ.

ಇಂದು ದೆಹಲಿ ವಿಧಾನಸಭೆಯಲ್ಲಿ ಸಿಎಂ ರೇಖಾ ಗುಪ್ತಾ ಮಂಡಿಸಿದ ಸಿಎಜಿ ವರದಿಯಲ್ಲಿ, ಹಿಂದಿನ ಸರ್ಕಾರದ ನಿರ್ಧಾರಗಳು ಮತ್ತು ಮದ್ಯ ನೀತಿಯು ರಾಷ್ಟ್ರ ರಾಜಧಾನಿಯ ಖಜಾನೆಗೆ ₹2002 ಕೋಟಿಗೂ ಹೆಚ್ಚು ನಷ್ಟವನ್ನುಂಟು ಮಾಡಿದೆ ಎಂದು ಹೇಳಲಾಗಿದೆ.

“ಅಬಕಾರಿ ಲೆಕ್ಕಪರಿಶೋಧನಾ ವರದಿಯನ್ನು ಇಂದು ದೆಹಲಿ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಇದರ ಏಳು ಅಧ್ಯಾಯಗಳು 2017-21ರ ಅಬಕಾರಿ ನೀತಿಯ ಬಗ್ಗೆ, ಒಂದು ಅಧ್ಯಾಯವು ಹೊಸ ಅಬಕಾರಿ ನೀತಿಯ ಬಗ್ಗೆ ಇದೆ. ದೆಹಲಿ ಸರ್ಕಾರವು ಹಳೆಯ ಅಬಕಾರಿ ನೀತಿಯ ದೋಷಗಳು ಮತ್ತು ಭ್ರಷ್ಟಾಚಾರವನ್ನು ದೆಹಲಿ ಜನರಿಗೆ ಬಹಿರಂಗಪಡಿಸಿತ್ತು. ಆ ನೀತಿಯಡಿಯಲ್ಲಿ, ಹರಿಯಾಣ ಮತ್ತು ಯುಪಿಯಿಂದ ಅಕ್ರಮವಾಗಿ ಮದ್ಯವನ್ನು ತರಲಾಯಿತು. ಹಳೆಯ ನೀತಿಯಿಂದಾಗಿ ದೆಹಲಿಯ ಜನರು ನಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ನಾವು ಹೇಳಿದ ವಿಷಯವನ್ನು ಈ ವರದಿಯು ಪುನರಾವರ್ತಿಸುತ್ತಿದೆ” ಎಂದು ತಿಳೀದುಬಂದಿದೆ.

“ಈ ವರದಿಯು ನಮ್ಮ ವಾದವನ್ನು ದೃಢಪಡಿಸಿದೆ. ಎಷ್ಟು ಮದ್ಯ ಮಾರಾಟವಾಗುತ್ತಿದೆ ಎಂಬುದರಲ್ಲಿ ಭ್ರಷ್ಟಾಚಾರವಿದೆ. ಈ ವರದಿಯು ಶೇಕಡಾ 28 ಕ್ಕಿಂತ ಹೆಚ್ಚು ಭ್ರಷ್ಟಾಚಾರವನ್ನು ಗುತ್ತಿಗೆದಾರರು ಮಾಡುತ್ತಿದ್ದರು. ಹಣವು ದಲ್ಲಾಳಿಗಳ ಜೇಬಿಗೆ ಹೋಗುತ್ತಿತ್ತು ಎಂದು ತೋರಿಸುತ್ತದೆ. ಈ ವರದಿಯು ಮದ್ಯದ ಬ್ಲಾಕ್‌ ಮಾರ್ಕೆಟ್ ನಡೆಯುತ್ತಿತ್ತು. ಯಾವ ಪಕ್ಷದ ಜನರು ಮದ್ಯದ ಒಪ್ಪಂದಗಳನ್ನು ಹೊಂದಿದ್ದರು ಎಂಬುದು ಎಲ್ಲರಿಗೂ ತಿಳಿದಿದೆ. ಮದ್ಯದ ಗುತ್ತಿಗೆದಾರರು ವೆಚ್ಚದ ತಪ್ಪಾದ ಲೆಕ್ಕಾಚಾರದ ಮೂಲಕ ಲಾಭ ಗಳಿಸಿದರು” ಎಂದು ಅವರು ಹೇಳಿದರು.

ಕರ್ನಾಟಕಕ್ಕೆ ಸಂಚರಿಸುವ ಬಸ್‌ಗಳಲ್ಲಿ ಪೊಲೀಸ್‌ ನಿಯೋಜನೆಗೆ ಮುಂದಾದ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...