Homeಮುಖಪುಟಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

- Advertisement -
- Advertisement -

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯೆ ನೀಡುವಂತೆ ಕೋರಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಏಪ್ರಿಲ್‌ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಲಭಿಸಿದ 58,812 ಮತಗಳ ವಿರುದ್ಧ ಸುವೇಂದು ಅಧಿಕಾರಿ ಅವರು 73,917 ಮತಗಳನ್ನು ಪಡೆಯುವ ಮೂಲಕ 15,105 ಮತಗಳ ಅಂತರದಿಂದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆಯನ್ನು ಸೋಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗೌರಂಗ್ ಕಾಂತ್ ಅವರ ಪೀಠವು, ಮಮತಾ ಬ್ಯಾನರ್ಜಿ ಅವರು ಸಲ್ಲಿಸಿರುವ ಚುನಾವಣಾ ಅರ್ಜಿಯು ಪ್ರಜಾಪ್ರತಿನಿಧಿ ಕಾಯ್ದೆಯ ನಿಯಮಾವಳಿಗಳಿಗೆ ಅನುಗುಣವಾಗಿದೆ ಎಂಬುದು ಮೇಲ್ನೋಟಕ್ಕೆ ಮನವರಿಕೆಯಾಗಿದೆ ಎಂದು ತಿಳಿಸಿದೆ. ಆದ್ದರಿಂದ, ಈ ಹಂತದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 86(1) ರ ಅಡಿಯಲ್ಲಿ ಈ ಅರ್ಜಿಯನ್ನು ವಜಾಗೊಳಿಸಲು ಯಾವುದೇ ಆಧಾರಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ.

“ಪ್ರತಿವಾದಿಗಳ ಪರ ವಕೀಲರು ನಾಲ್ಕು ವಾರಗಳ ಒಳಗೆ ತಮ್ಮ ಆಕ್ಷೇಪಣಾ ಅಫಿಡವಿಟ್‌ಗಳನ್ನು ಸಲ್ಲಿಸಬೇಕು. ಅದಕ್ಕೆ ಪ್ರತಿಯಾಗಿ ಅರ್ಜಿದಾರರು ಮುಂದಿನ ನಾಲ್ಕು ವಾರಗಳಲ್ಲಿ ಉತ್ತರಿಸಬೇಕು,” ಎಂದು ಆದೇಶಿಸಿದ ನ್ಯಾಯಾಲಯವು, ಪ್ರಕರಣದ ಮುಂದಿನ ವಿಚಾರಣೆಯನ್ನು 12 ವಾರಗಳ ವರೆಗೆ ಮುಂದೂಡಿದೆ. ಇದರೊಂದಿಗೆ, ಭವಾನಿಪುರ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಬಳಸಲಾದ ಎಲೆಕ್ಟ್ರಾನಿಕ್ ಮತಯಂತ್ರಗಳು, ವಿವಿಪ್ಯಾಟ್ ಯಂತ್ರಗಳು ಹಾಗೂ ಮತ ಎಣಿಕೆ ಕೇಂದ್ರದ ಸಿಸಿಟಿವಿ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಕಾಯ್ದಿರಿಸುವಂತೆ ನ್ಯಾಯಾಲಯವು ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳ ಸ್ಪಷ್ಟನೆ:

ವಿಶೇಷವೆಂದರೆ, ಪ್ರಕರಣದ ವಿಚಾರಣೆ ಆರಂಭಿಸುವ ಮುನ್ನ ನ್ಯಾಯಮೂರ್ತಿ ಗೌರಂಗ್ ಕಾಂತ್ ಅವರು ತಮ್ಮ ಸಹೋದರ ಭಾರತೀಯ ಜನತಾ ಪಾರ್ಟಿಯ (BJP) ರಾಷ್ಟ್ರೀಯ ವಕ್ತಾರರಾಗಿದ್ದಾರೆ ಎಂಬ ವಿಷಯವನ್ನು ಬಹಿರಂಗಪಡಿಸಿದರು. “ನನ್ನ ಹಿರಿಯ ಸಹೋದರ ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿದ್ದಾರೆ. ಈ ಅರ್ಜಿಗೆ ಸಂಬಂಧಿಸಿದಂತೆ ಅದು ನಿಮ್ಮ ಆತಂಕಕ್ಕೆ ಕಾರಣವಾಗಬಹುದು. ಆದ್ದರಿಂದ, ಈ ವಿಷಯವನ್ನು ಸಂಪೂರ್ಣವಾಗಿ ಮುಂಚಿತವಾಗಿಯೇ ಬಹಿರಂಗಪಡಿಸುತ್ತಿದ್ದೇನೆ, ಇದರಿಂದ ನಿಮಗೆ ಮುಂದೆ ಯಾವುದೇ ಸಮಸ್ಯೆಯಾಗಬಾರದು. ನಿಮ್ಮ ಒಪ್ಪಿಗೆಯ ನಂತರವೇ ನಾನು ಇದರ ವಿಚಾರಣೆ ನಡೆಸುತ್ತೇನೆ,” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಮಮತಾ ಬ್ಯಾನರ್ಜಿ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಲ್ಯಾಣ್ ಬಂಡೋಪಾಧ್ಯಾಯ ಅವರು, ತಮಗೆ ನ್ಯಾಯಮೂರ್ತಿ ಕಾಂತ್ ಅವರ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ಅವರು ಪ್ರಕರಣದ ವಿಚಾರಣೆ ನಡೆಸುವುದಕ್ಕೆ ತಮ್ಮದೇನೂ ಅಭ್ಯಂತರವಿಲ್ಲ ಎಂದು ಸ್ಪಷ್ಟಪಡಿಸಿದರು.

ತದನಂತರ ವಾದ ಮುಂದುವರಿಸಿದ ಕಲ್ಯಾಣ್ ಬಂಡೋಪಾಧ್ಯಾಯ, “ಮತ ಎಣಿಕೆಯಲ್ಲಿ ದೊಡ್ಡ ಮಟ್ಟದ ಅಕ್ರಮಗಳು ನಡೆದಿವೆ. ಆ ಅಧಿಕಾರಿಯಿಂದ ಪಕ್ಷಪಾತವಾಗುವ ಸಾಧ್ಯತೆ ಇದೆ ಎಂಬ ಆಕ್ಷೇಪಗಳಿದ್ದರೂ ಭವಾನಿಪುರ ಕ್ಷೇತ್ರಕ್ಕೆ ಅವರನ್ನೇ ಜವಾಬ್ದಾರರನ್ನಾಗಿ ಮಾಡಲಾಗಿತ್ತು. ಈಗ ಅವರನ್ನು ಮುಖ್ಯಮಂತ್ರಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ,” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

“ನಮ್ಮ ಎರಡನೇ ಪ್ರಮುಖ ಆಕ್ಷೇಪಣೆಯೆಂದರೆ ಪಕ್ಷಪಾತ ಧೋರಣೆ. ಇದೇ ಚುನಾವಣಾಧಿಕಾರಿ (RO) 2021 ರ ನಂದಿಗ್ರಾಮ ಚುನಾವಣೆಯಲ್ಲೂ ಕಾರ್ಯನಿರ್ವಹಿಸಿದ್ದರು. ಆ ಬಾರಿಯೂ ನನ್ನ ಕಕ್ಷಿದಾರರು (ಮಮತಾ ಬ್ಯಾನರ್ಜಿ) ಸೋಲನ್ನು ಅನುಭವಿಸಿದ್ದರು. ಈ ಅಧಿಕಾರಿಯ ವಿರುದ್ಧ ಹಲವು ದೂರುಗಳಿವೆ,” ಎಂದು ಬಂಡೋಪಾಧ್ಯಾಯ ವಾದಿಸಿದರು.

ಇಂದು ಹೊರಡಿಸಲಾದ ಆದೇಶದಲ್ಲಿ ನ್ಯಾಯಾಲಯವು ಮತ್ತೊಂದು ಅಂಶವನ್ನು ದಾಖಲಿಸಿಕೊಂಡಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಅವಧಿಯಲ್ಲಿ ಗಣನೀಯ ಸಂಖ್ಯೆಯ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕಾನೂನುಬಾಹಿರವಾಗಿ ಕೈಬಿಡಲಾಗಿದೆ ಎಂಬ ಮಮತಾ ಬ್ಯಾನರ್ಜಿ ಅವರ ವಾದವನ್ನೂ ಪರಿಗಣಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...