Homeಮುಖಪುಟಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

- Advertisement -
- Advertisement -

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯೆ ನೀಡುವಂತೆ ಕೋರಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಏಪ್ರಿಲ್‌ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಲಭಿಸಿದ 58,812 ಮತಗಳ ವಿರುದ್ಧ ಸುವೇಂದು ಅಧಿಕಾರಿ ಅವರು 73,917 ಮತಗಳನ್ನು ಪಡೆಯುವ ಮೂಲಕ 15,105 ಮತಗಳ ಅಂತರದಿಂದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆಯನ್ನು ಸೋಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗೌರಂಗ್ ಕಾಂತ್ ಅವರ ಪೀಠವು, ಮಮತಾ ಬ್ಯಾನರ್ಜಿ ಅವರು ಸಲ್ಲಿಸಿರುವ ಚುನಾವಣಾ ಅರ್ಜಿಯು ಪ್ರಜಾಪ್ರತಿನಿಧಿ ಕಾಯ್ದೆಯ ನಿಯಮಾವಳಿಗಳಿಗೆ ಅನುಗುಣವಾಗಿದೆ ಎಂಬುದು ಮೇಲ್ನೋಟಕ್ಕೆ ಮನವರಿಕೆಯಾಗಿದೆ ಎಂದು ತಿಳಿಸಿದೆ. ಆದ್ದರಿಂದ, ಈ ಹಂತದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 86(1) ರ ಅಡಿಯಲ್ಲಿ ಈ ಅರ್ಜಿಯನ್ನು ವಜಾಗೊಳಿಸಲು ಯಾವುದೇ ಆಧಾರಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ.

“ಪ್ರತಿವಾದಿಗಳ ಪರ ವಕೀಲರು ನಾಲ್ಕು ವಾರಗಳ ಒಳಗೆ ತಮ್ಮ ಆಕ್ಷೇಪಣಾ ಅಫಿಡವಿಟ್‌ಗಳನ್ನು ಸಲ್ಲಿಸಬೇಕು. ಅದಕ್ಕೆ ಪ್ರತಿಯಾಗಿ ಅರ್ಜಿದಾರರು ಮುಂದಿನ ನಾಲ್ಕು ವಾರಗಳಲ್ಲಿ ಉತ್ತರಿಸಬೇಕು,” ಎಂದು ಆದೇಶಿಸಿದ ನ್ಯಾಯಾಲಯವು, ಪ್ರಕರಣದ ಮುಂದಿನ ವಿಚಾರಣೆಯನ್ನು 12 ವಾರಗಳ ವರೆಗೆ ಮುಂದೂಡಿದೆ. ಇದರೊಂದಿಗೆ, ಭವಾನಿಪುರ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಬಳಸಲಾದ ಎಲೆಕ್ಟ್ರಾನಿಕ್ ಮತಯಂತ್ರಗಳು, ವಿವಿಪ್ಯಾಟ್ ಯಂತ್ರಗಳು ಹಾಗೂ ಮತ ಎಣಿಕೆ ಕೇಂದ್ರದ ಸಿಸಿಟಿವಿ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಕಾಯ್ದಿರಿಸುವಂತೆ ನ್ಯಾಯಾಲಯವು ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳ ಸ್ಪಷ್ಟನೆ:

ವಿಶೇಷವೆಂದರೆ, ಪ್ರಕರಣದ ವಿಚಾರಣೆ ಆರಂಭಿಸುವ ಮುನ್ನ ನ್ಯಾಯಮೂರ್ತಿ ಗೌರಂಗ್ ಕಾಂತ್ ಅವರು ತಮ್ಮ ಸಹೋದರ ಭಾರತೀಯ ಜನತಾ ಪಾರ್ಟಿಯ (BJP) ರಾಷ್ಟ್ರೀಯ ವಕ್ತಾರರಾಗಿದ್ದಾರೆ ಎಂಬ ವಿಷಯವನ್ನು ಬಹಿರಂಗಪಡಿಸಿದರು. “ನನ್ನ ಹಿರಿಯ ಸಹೋದರ ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿದ್ದಾರೆ. ಈ ಅರ್ಜಿಗೆ ಸಂಬಂಧಿಸಿದಂತೆ ಅದು ನಿಮ್ಮ ಆತಂಕಕ್ಕೆ ಕಾರಣವಾಗಬಹುದು. ಆದ್ದರಿಂದ, ಈ ವಿಷಯವನ್ನು ಸಂಪೂರ್ಣವಾಗಿ ಮುಂಚಿತವಾಗಿಯೇ ಬಹಿರಂಗಪಡಿಸುತ್ತಿದ್ದೇನೆ, ಇದರಿಂದ ನಿಮಗೆ ಮುಂದೆ ಯಾವುದೇ ಸಮಸ್ಯೆಯಾಗಬಾರದು. ನಿಮ್ಮ ಒಪ್ಪಿಗೆಯ ನಂತರವೇ ನಾನು ಇದರ ವಿಚಾರಣೆ ನಡೆಸುತ್ತೇನೆ,” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಮಮತಾ ಬ್ಯಾನರ್ಜಿ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಲ್ಯಾಣ್ ಬಂಡೋಪಾಧ್ಯಾಯ ಅವರು, ತಮಗೆ ನ್ಯಾಯಮೂರ್ತಿ ಕಾಂತ್ ಅವರ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ಅವರು ಪ್ರಕರಣದ ವಿಚಾರಣೆ ನಡೆಸುವುದಕ್ಕೆ ತಮ್ಮದೇನೂ ಅಭ್ಯಂತರವಿಲ್ಲ ಎಂದು ಸ್ಪಷ್ಟಪಡಿಸಿದರು.

ತದನಂತರ ವಾದ ಮುಂದುವರಿಸಿದ ಕಲ್ಯಾಣ್ ಬಂಡೋಪಾಧ್ಯಾಯ, “ಮತ ಎಣಿಕೆಯಲ್ಲಿ ದೊಡ್ಡ ಮಟ್ಟದ ಅಕ್ರಮಗಳು ನಡೆದಿವೆ. ಆ ಅಧಿಕಾರಿಯಿಂದ ಪಕ್ಷಪಾತವಾಗುವ ಸಾಧ್ಯತೆ ಇದೆ ಎಂಬ ಆಕ್ಷೇಪಗಳಿದ್ದರೂ ಭವಾನಿಪುರ ಕ್ಷೇತ್ರಕ್ಕೆ ಅವರನ್ನೇ ಜವಾಬ್ದಾರರನ್ನಾಗಿ ಮಾಡಲಾಗಿತ್ತು. ಈಗ ಅವರನ್ನು ಮುಖ್ಯಮಂತ್ರಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ,” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

“ನಮ್ಮ ಎರಡನೇ ಪ್ರಮುಖ ಆಕ್ಷೇಪಣೆಯೆಂದರೆ ಪಕ್ಷಪಾತ ಧೋರಣೆ. ಇದೇ ಚುನಾವಣಾಧಿಕಾರಿ (RO) 2021 ರ ನಂದಿಗ್ರಾಮ ಚುನಾವಣೆಯಲ್ಲೂ ಕಾರ್ಯನಿರ್ವಹಿಸಿದ್ದರು. ಆ ಬಾರಿಯೂ ನನ್ನ ಕಕ್ಷಿದಾರರು (ಮಮತಾ ಬ್ಯಾನರ್ಜಿ) ಸೋಲನ್ನು ಅನುಭವಿಸಿದ್ದರು. ಈ ಅಧಿಕಾರಿಯ ವಿರುದ್ಧ ಹಲವು ದೂರುಗಳಿವೆ,” ಎಂದು ಬಂಡೋಪಾಧ್ಯಾಯ ವಾದಿಸಿದರು.

ಇಂದು ಹೊರಡಿಸಲಾದ ಆದೇಶದಲ್ಲಿ ನ್ಯಾಯಾಲಯವು ಮತ್ತೊಂದು ಅಂಶವನ್ನು ದಾಖಲಿಸಿಕೊಂಡಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಅವಧಿಯಲ್ಲಿ ಗಣನೀಯ ಸಂಖ್ಯೆಯ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕಾನೂನುಬಾಹಿರವಾಗಿ ಕೈಬಿಡಲಾಗಿದೆ ಎಂಬ ಮಮತಾ ಬ್ಯಾನರ್ಜಿ ಅವರ ವಾದವನ್ನೂ ಪರಿಗಣಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...