Homeಮುಖಪುಟರಾಜೀನಾಮೆ ಘೋಷಿಸಿದ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ: ರಾಜಕೀಯ ಪಕ್ಷ ಸೇರ್ಪಡೆ ಸಾಧ್ಯತೆ

ರಾಜೀನಾಮೆ ಘೋಷಿಸಿದ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ: ರಾಜಕೀಯ ಪಕ್ಷ ಸೇರ್ಪಡೆ ಸಾಧ್ಯತೆ

- Advertisement -
- Advertisement -

ಶೀಘ್ರದಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಬಂಗಾಳಿ ಸುದ್ದಿವಾಹಿನಿ ಎಬಿಪಿ ಆನಂದ್‌ಗೆ ತಿಳಿಸಿದ್ದಾರೆ.

ಮಾರ್ಚ್ 5ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಳಿಕ ತಮ್ಮ ರಾಜೀನಾಮೆ ನಿರ್ಧಾರದ ಹಿಂದಿನ ಕಾರಣಗಳನ್ನು ಬಹಿರಂಗಪಡಿಸುವುದಾಗಿ ಸುದ್ದಿವಾಹಿನಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಅನೇಕ ವಿವಾದಗಳಿಂದಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಗೆ ಗ್ರಾಸವಾಗಿದ್ದರು.

ವಿಭಾಗೀಯ ಪೀಠದ ಮುಖ್ಯಸ್ಥರಾಗಿರುವ ನ್ಯಾಯಮೂರ್ತಿ ಸೌಮೆನ್ ಸೇನ್ ಅವರು ರಾಜ್ಯದ ರಾಜಕೀಯ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

ನಕಲಿ ಜಾತಿ ಪ್ರಮಾಣಪತ್ರ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಿಬಿಐಗೆ ಹಸ್ತಾಂತರಿಸುವಂತೆ ಪಶ್ಚಿಮ ಬಂಗಾಳ ಪೊಲೀಸರಿಗೆ ನಿರ್ದೇಶನ ನೀಡಿದ ನ್ಯಾ. ಗಂಗೋಪಾಧ್ಯಾಯ ಅವರ ಆದೇಶವನ್ನು ವಿಭಾಗೀಯ ಪೀಠದ ಭಾಗವಾಗಿದ್ದ ನ್ಯಾ. ಸೇನ್ ತಡೆಹಿಡಿದ ನಂತರ ಈ ಬೆಳವಣಿಗೆ ಸಂಭವಿಸಿತ್ತು.

ನಂತರ ಅದೇ ದಿನ ಪ್ರಕರಣವನ್ನು ಮತ್ತೆ ಕೈಗೆತ್ತಿಕೊಂಡಿದ್ದ ನ್ಯಾ. ಗಂಗೋಪಾಧ್ಯಾಯ ಪ್ರಕರಣದ ದಾಖಲೆಗಳನ್ನು ಸಿಬಿಐಗೆ ಹಸ್ತಾಂತರಿಸುವಂತೆ ಎಜಿಗೆ ಆದೇಶಿಸಿದ್ದರು. ಜೊತೆಗೆ ವಿಭಾಗೀಯ ಪೀಠ ಹೊರಡಿಸಿದ ತಡೆಯಾಜ್ಞೆಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದಿದ್ದರು.

ವಿಶೇಷವೆಂದರೆ ಅರ್ಜಿಯಲ್ಲಿ ಸಿಬಿಐ ತನಿಖೆಗೆ ಯಾವುದೇ ನಿರ್ದೇಶನ ಕೋರಿರಲಿಲ್ಲವಾದರೂ ಅವರು ಸಿಬಿಐ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಆದೇಶಿಸಿದ್ದರು.

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಭಾಗಿಯಾಗಿರುವ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ನ್ಯಾ. ಅಮೃತಾ ಸಿನ್ಹಾ ಅವರನ್ನು ನ್ಯಾ. ಸೇನ್ ತಮ್ಮ ಕೊಠಡಿಗೆ ಕರೆದು ಅಭಿಷೇಕ್ ಬ್ಯಾನರ್ಜಿಗೆ ರಾಜಕೀಯ ಭವಿಷ್ಯವಿದ್ದು ಅವರಿಗೆ ತೊಂದರೆಯಾಗಬಾರದು ಎಂದು ಹೇಳಿದ್ದರು ಎಂಬುದಾಗಿ ನ್ಯಾ. ಗಂಗೋಪಾಧ್ಯಾಯ ತಮ್ಮ ಆದೇಶದಲ್ಲಿ ಆರೋಪಿಸಿದ್ದರು.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ನಡೆಯುತ್ತಿದ್ದ ಸಂಬಂಧಿತ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ತನಗೆ ವರ್ಗಾಯಿಸಿಕೊಂಡಿತ್ತು.

ಮೇ 2018ರಿಂದ ಹೈಕೋರ್ಟ್ ನ್ಯಾಯಮೂರ್ತಿಯಾಗಿರುವ ಗಂಗೋಪಾಧ್ಯಾಯ ಅವರು, ವಿಸ್ತೃತ ಪೀಠದ ಆದೇಶಗಳ ನಿರ್ಲಕ್ಷ್ಯ, ರಾಜಕೀಯ ವಿಷಯಗಳ ಬಗ್ಗೆ ಸುದ್ದಿವಾಹಿನಿಗಳ ಜೊತೆ ಚರ್ಚೆ ಮಾತ್ರವಲ್ಲದೆ, ಸುಪ್ರೀಂ ಕೋರ್ಟ್ ರಿಜಿಸ್ಟ್ರಿಗೇ ಆದೇಶ ನೀಡುವ ಮೂಲಕ ನ್ಯಾಯಾಂಗ ಶಿಸ್ತಿನ ಮಾನದಂಡಗಳನ್ನು ಪದೇ ಪದೇ ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದಾರೆ.

ಏಪ್ರಿಲ್ 2023ರಲ್ಲಿ, ‘ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾ. ಗಂಗೋಪಾಧ್ಯಾಯ ಅವರು, ಈ ಹಗರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪಾತ್ರದ ಬಗ್ಗೆ ಸ್ಥಳೀಯ ಬಂಗಾಳಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಟಿವಿ ಚಾನೆಲ್‌ಗಳಿಗೆ ಸಂದರ್ಶನ ನೀಡುವುದು ಹಾಲಿ ನ್ಯಾಯಮೂರ್ತಿಗಳ ಕೆಲಸವಲ್ಲ ಎಂದಿತ್ತು.

ನ್ಯಾ. ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಕಲ್ಕತ್ತಾ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಅವರಿಂದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ವರದಿ ಕೇಳಿತ್ತು.

ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದು ನಿಜವಾಗಿದ್ದರೆ, ಅರ್ಜಿಗಳ ವಿಚಾರಣೆ ಮುಂದುವರಿಸಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಅಲ್ಲದೆ, ಪ್ರಕರಣವನ್ನು ಮತ್ತೊಂದು ಪೀಠಕ್ಕೆ ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರಿಗೆ ಸಿಜೆಐ ಆದೇಶಿಸಿದ್ದರು.

ಸುಪ್ರೀಂ ಕೋರ್ಟ್ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ, ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಬಂಗಾಳಿ ಮಾಧ್ಯಮಗಳಿಗೆ ನೀಡಿದ ಸಂದರ್ಶನದ ವರದಿ ಮತ್ತು ಅಧಿಕೃತ ಅನುವಾದವನ್ನು ತಮ್ಮೆದುರು ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದರು.

ಪರಿಣಾಮ ಅದೇ ದಿನ ಸಂಜೆ ವಿಶೇಷ ಅಧಿವೇಶನ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರಿದ್ದ ವಿಭಾಗೀಯ ಪೀಠ, ಇಂತಹ ಆದೇಶ ‘ನ್ಯಾಯಾಂಗ ಶಿಸ್ತಿಗೆ ವಿರುದ್ಧ ಎಂದಿತ್ತು.

ಎಬಿಪಿ ಆನಂದ್‌ಗೆ ನೀಡಿದ ಸಂದರ್ಶನದಲ್ಲಿ, ಆಡಳಿತರೂಢ ಟಿಎಂಸಿ ನಾಯಕರು ಹಲವಾರು ರಾಜಕೀಯ ಕ್ಷೇತ್ರದಲ್ಲಿ ಬಾರಿ ಬಂದು ಸ್ಪರ್ಧಿಸಿ ಎಂದು ನನಗೆ ಸವಾಲು ಹಾಕಿದ್ದಾರೆ. ಹಾಗಾಗಿ, ಅದು ಏಕೆ ಮಾಡಬಾರದು? ಎಂದು ನಾನು ಯೋಚಿಸಿದ್ದೇನೆ ಎಂದು ನ್ಯಾಯಮೂರ್ತಿ ಗಂಗೋಪಾಧ್ಯಾಯ ಹೇಳಿದ್ದಾರೆ. ಈ ಮೂಲಕ ರಾಜಕೀಯಕ್ಕೆ ಧುಮುಕುವ ಕುರಿತು ಸುಳಿವು ನೀಡಿದ್ದಾರೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...