Homeಮುಖಪುಟಪಶ್ಚಿಮ ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು ರದ್ದು: ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು ರದ್ದು: ಹೈಕೋರ್ಟ್ ಆದೇಶ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪ್ರಮಾಣಪತ್ರಗಳನ್ನು ಕಲ್ಕತ್ತಾ ಹೈಕೋರ್ಟ್ ಬುಧವಾರ (ಮೇ 22) ರದ್ದುಗೊಳಿಸಿದೆ.

ಒಬಿಸಿ ಕಾಯಿದೆಯ ಅಡಿ ಉದ್ಯೋಗವನ್ನು ಪಡೆದಿರುವ ಮತ್ತು ಒಬಿಸಿ ಮೀಸಲಾತಿಯಿಂದಾಗಿ ಈಗಾಗಲೇ ಸೇವೆಯಲ್ಲಿರುವವರಿಗೆ ಈ ಆದೇಶದಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ತಪಬ್ರತ ಚಕ್ರವರ್ತಿ ಮತ್ತು ರಾಜಶೇಖರ್ ಮಂಥ ಅವರ ವಿಭಾಗೀಯ ಪೀಠವು ರಾಜ್ಯದಲ್ಲಿ ಒಬಿಸಿ ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಸಂಬಂಧ ತೀರ್ಪು ನೀಡಿದೆ. ಈ ತೀರ್ಪು 5 ಲಕ್ಷ ಒಬಿಸಿ ಪ್ರಮಾಣಪತ್ರಗಳ ಮೇಲೆ ಪರಿಣಾಮ ಬೀರಲಿದೆ.

ಹಿಂದುಳಿದ ವರ್ಗಗಳ ಆಯೋಗವು 1993ರ ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆಯ ಆಧಾರದ ಮೇಲೆ ಒಬಿಸಿಗಳ ಹೊಸ ಪಟ್ಟಿಯನ್ನು ತಯಾರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ.

ನ್ಯಾಯಾಲಯದ ಆದೇಶದಿಂದ 2011ರಲ್ಲಿ ಅಧಿಕಾರಕ್ಕೆ ಬಂದ ಆಡಳಿತರೂಡ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಗೆ ಒಂದು ರೀತಿಯಲ್ಲಿ ಹಿನ್ನಡೆಯಾಗಿದೆ. ಏಕೆಂದರೆ, ಟಿಎಂಸಿಯ ಅಧಿಕಾರವಧಿಯ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಒಬಿಸಿ ವರ್ಗದವರಿಗೆ ಸಾರ್ವಜನಿಕ ಸೇವೆಗಳಲ್ಲಿ ಮೀಸಲಾತಿ ನೀಡುವ ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಹೊರತಾಗಿ) ಸೇವೆಗಳು ಮತ್ತು ಹುದ್ದೆಗಳ ಮೀಸಲಾತಿ ಕಾಯಿದೆ- 2012ರ ಕೆಲ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.

ನ್ಯಾಯಾಲಯ ತನ್ನ ಆದೇಶದಲ್ಲಿ ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ) ಸೇವೆಗಳು ಮತ್ತು ಹುದ್ದೆಗಳ ಮೀಸಲಾತಿ ಕಾಯಿದೆ- 2012ರ ಅಡಿಯಲ್ಲಿ 37 ವರ್ಗಗಳನ್ನು ಒಬಿಸಿ ಎಂದು ಗುರುತಿಸಿರುವುದನ್ನೂ ರದ್ದುಗೊಳಿಸಿದೆ.

2010ಕ್ಕಿಂತ ಮೊದಲು ಒಬಿಸಿ ಕಾಯ್ದೆಯಡಿ ವರ್ಗೀಕರಿಸಿದ 66 ಸಮುದಾಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಏಕೆಂದರೆ, ಅರ್ಜಿದಾರರು ಅವುಗಳ ಬಗ್ಗೆ ಚಕಾರವೆತ್ತಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ತಾನು ಹೈಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯ ಆದೇಶವನ್ನು ನಾವು ಒಪ್ಪುವುದಿಲ್ಲ. ಮೀಸಲಾತಿ ಮುಂದುವರಿಯಲಿದೆ. ಒಬಿಸಿ ಮೀಸಲಾತಿ ಜಾರಿಗೊಳಿಸುವ ಮುನ್ನ ಸಮೀಕ್ಷೆಗಳನ್ನು ನಡೆಸಲಾಗಿತ್ತು. ಈ ಹಿಂದೆಯೂ ಈ ಸಂಬಂಧ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಆದರೆ, ಅದರಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿನ ನೀತಿಗಳ ಬಗ್ಗೆ ಅವರು ಏಕೆ ಮಾತನಾಡುವುದಿಲ್ಲ? ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಕಡಿಮೆ ಗುಣಮಟ್ಟದ ಕಲ್ಲಿದ್ದಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅದಾನಿಯಿಂದ ವಂಚನೆ?: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...