Homeಮುಖಪುಟಪಶ್ಚಿಮ ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು ರದ್ದು: ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು ರದ್ದು: ಹೈಕೋರ್ಟ್ ಆದೇಶ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪ್ರಮಾಣಪತ್ರಗಳನ್ನು ಕಲ್ಕತ್ತಾ ಹೈಕೋರ್ಟ್ ಬುಧವಾರ (ಮೇ 22) ರದ್ದುಗೊಳಿಸಿದೆ.

ಒಬಿಸಿ ಕಾಯಿದೆಯ ಅಡಿ ಉದ್ಯೋಗವನ್ನು ಪಡೆದಿರುವ ಮತ್ತು ಒಬಿಸಿ ಮೀಸಲಾತಿಯಿಂದಾಗಿ ಈಗಾಗಲೇ ಸೇವೆಯಲ್ಲಿರುವವರಿಗೆ ಈ ಆದೇಶದಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ತಪಬ್ರತ ಚಕ್ರವರ್ತಿ ಮತ್ತು ರಾಜಶೇಖರ್ ಮಂಥ ಅವರ ವಿಭಾಗೀಯ ಪೀಠವು ರಾಜ್ಯದಲ್ಲಿ ಒಬಿಸಿ ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಸಂಬಂಧ ತೀರ್ಪು ನೀಡಿದೆ. ಈ ತೀರ್ಪು 5 ಲಕ್ಷ ಒಬಿಸಿ ಪ್ರಮಾಣಪತ್ರಗಳ ಮೇಲೆ ಪರಿಣಾಮ ಬೀರಲಿದೆ.

ಹಿಂದುಳಿದ ವರ್ಗಗಳ ಆಯೋಗವು 1993ರ ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆಯ ಆಧಾರದ ಮೇಲೆ ಒಬಿಸಿಗಳ ಹೊಸ ಪಟ್ಟಿಯನ್ನು ತಯಾರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ.

ನ್ಯಾಯಾಲಯದ ಆದೇಶದಿಂದ 2011ರಲ್ಲಿ ಅಧಿಕಾರಕ್ಕೆ ಬಂದ ಆಡಳಿತರೂಡ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಗೆ ಒಂದು ರೀತಿಯಲ್ಲಿ ಹಿನ್ನಡೆಯಾಗಿದೆ. ಏಕೆಂದರೆ, ಟಿಎಂಸಿಯ ಅಧಿಕಾರವಧಿಯ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಒಬಿಸಿ ವರ್ಗದವರಿಗೆ ಸಾರ್ವಜನಿಕ ಸೇವೆಗಳಲ್ಲಿ ಮೀಸಲಾತಿ ನೀಡುವ ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಹೊರತಾಗಿ) ಸೇವೆಗಳು ಮತ್ತು ಹುದ್ದೆಗಳ ಮೀಸಲಾತಿ ಕಾಯಿದೆ- 2012ರ ಕೆಲ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.

ನ್ಯಾಯಾಲಯ ತನ್ನ ಆದೇಶದಲ್ಲಿ ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ) ಸೇವೆಗಳು ಮತ್ತು ಹುದ್ದೆಗಳ ಮೀಸಲಾತಿ ಕಾಯಿದೆ- 2012ರ ಅಡಿಯಲ್ಲಿ 37 ವರ್ಗಗಳನ್ನು ಒಬಿಸಿ ಎಂದು ಗುರುತಿಸಿರುವುದನ್ನೂ ರದ್ದುಗೊಳಿಸಿದೆ.

2010ಕ್ಕಿಂತ ಮೊದಲು ಒಬಿಸಿ ಕಾಯ್ದೆಯಡಿ ವರ್ಗೀಕರಿಸಿದ 66 ಸಮುದಾಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಏಕೆಂದರೆ, ಅರ್ಜಿದಾರರು ಅವುಗಳ ಬಗ್ಗೆ ಚಕಾರವೆತ್ತಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ತಾನು ಹೈಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯ ಆದೇಶವನ್ನು ನಾವು ಒಪ್ಪುವುದಿಲ್ಲ. ಮೀಸಲಾತಿ ಮುಂದುವರಿಯಲಿದೆ. ಒಬಿಸಿ ಮೀಸಲಾತಿ ಜಾರಿಗೊಳಿಸುವ ಮುನ್ನ ಸಮೀಕ್ಷೆಗಳನ್ನು ನಡೆಸಲಾಗಿತ್ತು. ಈ ಹಿಂದೆಯೂ ಈ ಸಂಬಂಧ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಆದರೆ, ಅದರಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿನ ನೀತಿಗಳ ಬಗ್ಗೆ ಅವರು ಏಕೆ ಮಾತನಾಡುವುದಿಲ್ಲ? ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಕಡಿಮೆ ಗುಣಮಟ್ಟದ ಕಲ್ಲಿದ್ದಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅದಾನಿಯಿಂದ ವಂಚನೆ?: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...