Homeಮುಖಪುಟಪಶ್ಚಿಮ ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು ರದ್ದು: ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು ರದ್ದು: ಹೈಕೋರ್ಟ್ ಆದೇಶ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪ್ರಮಾಣಪತ್ರಗಳನ್ನು ಕಲ್ಕತ್ತಾ ಹೈಕೋರ್ಟ್ ಬುಧವಾರ (ಮೇ 22) ರದ್ದುಗೊಳಿಸಿದೆ.

ಒಬಿಸಿ ಕಾಯಿದೆಯ ಅಡಿ ಉದ್ಯೋಗವನ್ನು ಪಡೆದಿರುವ ಮತ್ತು ಒಬಿಸಿ ಮೀಸಲಾತಿಯಿಂದಾಗಿ ಈಗಾಗಲೇ ಸೇವೆಯಲ್ಲಿರುವವರಿಗೆ ಈ ಆದೇಶದಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ತಪಬ್ರತ ಚಕ್ರವರ್ತಿ ಮತ್ತು ರಾಜಶೇಖರ್ ಮಂಥ ಅವರ ವಿಭಾಗೀಯ ಪೀಠವು ರಾಜ್ಯದಲ್ಲಿ ಒಬಿಸಿ ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಸಂಬಂಧ ತೀರ್ಪು ನೀಡಿದೆ. ಈ ತೀರ್ಪು 5 ಲಕ್ಷ ಒಬಿಸಿ ಪ್ರಮಾಣಪತ್ರಗಳ ಮೇಲೆ ಪರಿಣಾಮ ಬೀರಲಿದೆ.

ಹಿಂದುಳಿದ ವರ್ಗಗಳ ಆಯೋಗವು 1993ರ ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆಯ ಆಧಾರದ ಮೇಲೆ ಒಬಿಸಿಗಳ ಹೊಸ ಪಟ್ಟಿಯನ್ನು ತಯಾರಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ.

ನ್ಯಾಯಾಲಯದ ಆದೇಶದಿಂದ 2011ರಲ್ಲಿ ಅಧಿಕಾರಕ್ಕೆ ಬಂದ ಆಡಳಿತರೂಡ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಗೆ ಒಂದು ರೀತಿಯಲ್ಲಿ ಹಿನ್ನಡೆಯಾಗಿದೆ. ಏಕೆಂದರೆ, ಟಿಎಂಸಿಯ ಅಧಿಕಾರವಧಿಯ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಒಬಿಸಿ ವರ್ಗದವರಿಗೆ ಸಾರ್ವಜನಿಕ ಸೇವೆಗಳಲ್ಲಿ ಮೀಸಲಾತಿ ನೀಡುವ ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಹೊರತಾಗಿ) ಸೇವೆಗಳು ಮತ್ತು ಹುದ್ದೆಗಳ ಮೀಸಲಾತಿ ಕಾಯಿದೆ- 2012ರ ಕೆಲ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.

ನ್ಯಾಯಾಲಯ ತನ್ನ ಆದೇಶದಲ್ಲಿ ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ) ಸೇವೆಗಳು ಮತ್ತು ಹುದ್ದೆಗಳ ಮೀಸಲಾತಿ ಕಾಯಿದೆ- 2012ರ ಅಡಿಯಲ್ಲಿ 37 ವರ್ಗಗಳನ್ನು ಒಬಿಸಿ ಎಂದು ಗುರುತಿಸಿರುವುದನ್ನೂ ರದ್ದುಗೊಳಿಸಿದೆ.

2010ಕ್ಕಿಂತ ಮೊದಲು ಒಬಿಸಿ ಕಾಯ್ದೆಯಡಿ ವರ್ಗೀಕರಿಸಿದ 66 ಸಮುದಾಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಏಕೆಂದರೆ, ಅರ್ಜಿದಾರರು ಅವುಗಳ ಬಗ್ಗೆ ಚಕಾರವೆತ್ತಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ತಾನು ಹೈಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯ ಆದೇಶವನ್ನು ನಾವು ಒಪ್ಪುವುದಿಲ್ಲ. ಮೀಸಲಾತಿ ಮುಂದುವರಿಯಲಿದೆ. ಒಬಿಸಿ ಮೀಸಲಾತಿ ಜಾರಿಗೊಳಿಸುವ ಮುನ್ನ ಸಮೀಕ್ಷೆಗಳನ್ನು ನಡೆಸಲಾಗಿತ್ತು. ಈ ಹಿಂದೆಯೂ ಈ ಸಂಬಂಧ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಆದರೆ, ಅದರಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿನ ನೀತಿಗಳ ಬಗ್ಗೆ ಅವರು ಏಕೆ ಮಾತನಾಡುವುದಿಲ್ಲ? ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಕಡಿಮೆ ಗುಣಮಟ್ಟದ ಕಲ್ಲಿದ್ದಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅದಾನಿಯಿಂದ ವಂಚನೆ?: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...