Homeಮುಖಪುಟಹೈಕೋರ್ಟ್ ಜಡ್ಜ್‌ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ?

ಹೈಕೋರ್ಟ್ ಜಡ್ಜ್‌ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ?

- Advertisement -
- Advertisement -

ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ತಮ್ಮ ಕೆಲವು ತೀರ್ಪುಗಳು ಮತ್ತು ಅವಲೋಕನಗಳಿಗಾಗಿ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನಿಂದ ತೀವ್ರ ಟೀಕೆಗಳನ್ನು ಎದುರಿಸಿದ್ದ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ರಾಜೀನಾಮೆಯನ್ನು ನೇರವಾಗಿ ಭಾರತದ ರಾಷ್ಟ್ರಪತಿಗಳಿಗೆ ಕಳುಹಿಸಿದ್ದು, ಸಂವಿಧಾನದ 217 (1) (ಎ) ವಿಧಿಯ ಅಡಿಯಲ್ಲಿ ರಾಜೀನಾಮೆ ಜಾರಿಗೆ ಬಂದಿದೆ ಎನ್ನಲಾಗಿದೆ.

ನ್ಯಾಯಾಧೀಶನಾಗಿ ನನ್ನ ಅಧಿಕಾರಾವಧಿ ಮುಗಿದಿದೆ ಮತ್ತು ಇದು ದೊಡ್ಡ ಕ್ಷೇತ್ರವನ್ನು ಪ್ರವೇಶಿಸಲು ಮತ್ತು ಜನರ ಸೇವೆ ಮಾಡಲು ಸೂಕ್ತ ಸಮಯವಾಗಿದೆ ಎಂದು ನನ್ನ ಆತ್ಮ ಹೇಳುತ್ತದೆ. ನಾನು ಮಂಗಳವಾರ ರಾಜೀನಾಮೆ ನೀಡುತ್ತೇನೆ ಎಂದು ಅವರು ಈ ಮೊದಲು ಮಾಧ್ಯಮಗಳಿಗೆ ತಿಳಿಸಿದ್ದರು. ನ್ಯಾಯಾಧೀಶರ ಯಾವ ಪಕ್ಷಕ್ಕೆ ಸೇರತ್ತೇನೆ ಎಂದು ಸ್ಪಷ್ಟಪಡಿಸದಿದ್ದರೂ, ಗಂಗೋಪಾಧ್ಯಾಯ ಅವರು ಕೆಲವೇ ದಿನಗಳಲ್ಲಿ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕರೊಬ್ಬರು ಹಿಂದೂಸ್ತಾನ್‌ ಟೈಮ್ಸ್‌ಗೆ ಮಾಹಿತಿ ನೀಡಿದ್ದಾರೆ.

2018ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಹೈಕೋರ್ಟ್‌ಗೆ ನೇಮಕಗೊಂಡಿದ್ದ 62 ವರ್ಷದ ಗಂಗೋಪಾಧ್ಯಾಯ ಜುಲೈ 2020ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು, ಅವರು ಜುಲೈನಲ್ಲಿ ನಿವೃತ್ತಿ ಪಡೆಯಲಿದ್ದರು. ಅವರು ಪಶ್ಚಿಮ ಬಂಗಾಳ ಸಿವಿಲ್ ಸರ್ವಿಸ್ ಅಧಿಕಾರಿಯಾಗಿದ್ದರು ಆದರೆ ವಕೀಲರಾಗಲು 10 ವರ್ಷಗಳ ಹಿಂದೆ ತಮ್ಮ ಸಿವಿಲ್‌ ಸರ್ವಿಸ್‌ ಹುದ್ದೆಯನ್ನು ತೊರೆದಿದ್ದರು.

ಏಪ್ರಿಲ್ 2023ರಲ್ಲಿ, ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾ. ಗಂಗೋಪಾಧ್ಯಾಯ ಅವರು, ಈ ಹಗರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪಾತ್ರದ ಬಗ್ಗೆ ಸ್ಥಳೀಯ ಬಂಗಾಳಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಟಿವಿ ಚಾನೆಲ್‌ಗಳಿಗೆ ಸಂದರ್ಶನ ನೀಡುವುದು ಹಾಲಿ ನ್ಯಾಯಮೂರ್ತಿಗಳ ಕೆಲಸವಲ್ಲ ಎಂದಿತ್ತು.ನ್ಯಾ. ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಕಲ್ಕತ್ತಾ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಅವರಿಂದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ವರದಿ ಕೇಳಿತ್ತು.

ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದು ನಿಜವಾಗಿದ್ದರೆ, ಅರ್ಜಿಗಳ ವಿಚಾರಣೆ ಮುಂದುವರಿಸಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಅಲ್ಲದೆ, ಪ್ರಕರಣವನ್ನು ಮತ್ತೊಂದು ಪೀಠಕ್ಕೆ ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರಿಗೆ ಸಿಜೆಐ ಆದೇಶಿಸಿದ್ದರು. ಸುಪ್ರೀಂ ಕೋರ್ಟ್ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ, ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಬಂಗಾಳಿ ಮಾಧ್ಯಮಗಳಿಗೆ ನೀಡಿದ ಸಂದರ್ಶನದ ವರದಿ ಮತ್ತು ಅಧಿಕೃತ ಅನುವಾದವನ್ನು ತಮ್ಮೆದುರು ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿತ್ತು.

ಇದನ್ನು ಓದಿ: ಮೋದಿ ರ್‍ಯಾಲಿಯಲ್ಲಿ ಭಾಗವಹಿಸುವಂತೆ ಸರಕಾರಿ ಉದ್ಯೋಗಿಗಳಿಗೆ ಸೂಚಿಸಿದ ಜಮ್ಮು-ಕಾಶ್ಮೀರ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...