Homeಮುಖಪುಟಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್ ಖಾತೆಗಳನ್ನು ದೈನಂದಿನ ವೆಚ್ಚಗಳಿಗಾಗಿ ಬಳಸಲು ಕಲ್ಕತ್ತಾ ಹೈಕೋರ್ಟ್ ಗುರುವಾರ (ಜುಲೈ 9) ಅನುಮತಿ ನೀಡಿದೆ.

ಟಿಎಂಸಿ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಯಾವುದೇ ಬಲವಾದ ಆಧಾರಗಳಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಈ ಪ್ರಕರಣದ ಮುಂದಿನ ವಿಚಾರಣೆ ನಡೆಯಲಿರುವ ಸೆಪ್ಟೆಂಬರ್ 30ರವರೆಗೆ ಈ ಮೂರು ಖಾತೆಗಳನ್ನು ಬಳಸಲು ಪಕ್ಷಕ್ಕೆ ಮುಕ್ತ ಅವಕಾಶ ನೀಡಿದೆ. ಅಲ್ಲದೆ, ಈ ಖಾತೆಗಳ ನಿರ್ವಹಣೆಯನ್ನು ನಿಯಂತ್ರಿಸಲು ಕಲ್ಕತ್ತಾ ಹೈಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ಸುಬ್ರತಾ ತಾಲೂಕ್ದಾರ್ ಅವರನ್ನು ವಿಶೇಷ ಅಧಿಕಾರಿಯನ್ನಾಗಿ ನೇಮಿಸಿದೆ.

ಇದೇ ವೇಳೆ, ಬಂಡಾಯ ಟಿಎಂಸಿ ಶಾಸಕರು ನೀಡಿದ ದೂರಿನ ಆಧಾರದ ಮೇಲೆ ತರಾತುರಿಯಲ್ಲಿ ಕ್ರಮ ಕೈಗೊಂಡಿದ್ದಕ್ಕಾಗಿ ಪಶ್ಚಿಮ ಬಂಗಾಳ ಪೊಲೀಸರನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. “ಈ ದೂರನ್ನು ಜೂನ್ 18 ರಂದು ದಾಖಲಿಸಲಾಗಿದೆ ಮತ್ತು ಮರುದಿನವೇ ಅಂದರೆ ಜೂನ್ 19 ರಂದು ಖಾತೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬೆಳವಣಿಗೆಗಳನ್ನು ನೋಡಿದಾಗ ದೂರು ದಾಖಲಿಸಿದ್ದೇ ಈ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಎಂಬಂತಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ಜೂನ್ 18ರಂದು ನಿಮ್ಮ ಬಳಿ ಇದ್ದ ಸಾಕ್ಷ್ಯಗಳಾದರೂ ಏನು? ಎಲ್ಲವೂ ಇಷ್ಟು ಮಿಂಚಿನ ವೇಗದಲ್ಲಿ ಏಕೆ ನಡೆಯುತ್ತಿದೆ? ಒಬ್ಬ ಬಡ ನಾಗರಿಕ ಪೊಲೀಸ್ ಠಾಣೆಗೆ ಹೋದಾಗ ಪೊಲೀಸರು ಇಷ್ಟು ವೇಗವಾಗಿ ಕ್ರಮ ಕೈಗೊಳ್ಳುವುದು ಅಪರೂಪ, ಆದರೆ ಈ ಪ್ರಕರಣದಲ್ಲಿ ದೂರು ದಾಖಲಾದ ತಕ್ಷಣ ಖಾತೆಗಳನ್ನು ಫ್ರೀಜ್ ಮಾಡಲಾಗಿದೆಯೇ?” ಎಂದು ನ್ಯಾಯಮೂರ್ತಿ ಸೌಗತ ಭಟಾಚಾರ್ಯ ಪ್ರಶ್ನಿಸಿದರು.

ಪ್ರಕರಣದಲ್ಲಿ ದೂರುದಾರರಾಗಿರುವ ಬಂಡಾಯ ಟಿಎಂಸಿ ಶಾಸಕರ ನಡವಳಿಕೆಯನ್ನೂ ನ್ಯಾಯಾಲಯ ಪ್ರಶ್ನಿಸಿದೆ. ಮೇ 4 ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲು, ಇದೇ ದೂರುದಾರರು ಟಿಎಂಸಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದಾಗ ಇದೇ ಖಾತೆಗಳ ಹಣವನ್ನು ಬಳಸಿದ್ದರು. ಆದರೆ ತಾವು ಮತ್ತೊಂದು ಬಣ ಸೇರಿದ ನಂತರವೇ ಈ ಖಾತೆಗಳಿಗೆ ಅಕ್ರಮ ಹಣ ಜಮೆಯಾಗಿದೆ ಎಂದು ಆರೋಪಿಸುತ್ತಿರುವುದನ್ನು ಕೋರ್ಟ್ ಗಮನಿಸಿತು.

ರಾಜ್ಯ ಪೊಲೀಸರ ಕ್ರಮವನ್ನು ಸಮರ್ಥಿಸಿಕೊಳ್ಳಲು ಅಟಾರ್ನಿ ಜನರಲ್ ತುಷಾರ್ ಮೆಹ್ತಾ ಹೊಸ ದೆಹಲಿಯಿಂದ ಆಗಮಿಸಿದ್ದರೆ, ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಟಿಎಂಸಿ ಪರವಾಗಿ ವಾದ ಮಂಡಿಸಿದರು.

“ರಾಜಕೀಯ ಪಕ್ಷವೊಂದನ್ನು ಈ ರೀತಿ ಆರ್ಥಿಕವಾಗಿ ಹತ್ತಿಕ್ಕಿದರೆ, ಅದು ಪ್ರಜಾಪ್ರಭುತ್ವದ ಸಮಾನ ಅವಕಾಶದ (level playing field) ತತ್ವವನ್ನು ನಾಶಪಡಿಸುತ್ತದೆ” ಎಂದು ಸಿಂಘ್ವಿ ವಾದಿಸಿದರು. ಪೊಲೀಸರ ಆತುರದ ಕ್ರಮವನ್ನು ಉಲ್ಲೇಖಿಸಿ ಲೇವಡಿ ಮಾಡಿದ ಅವರು, “ನಮ್ಮ ದೇಶದಲ್ಲಿ ಎಲ್ಲಾ ಪ್ರಕರಣಗಳೂ ಇಷ್ಟೇ ವೇಗವಾಗಿ ನಡೆದರೆ ಎಷ್ಟು ಚೆನ್ನಾಗಿರುತ್ತಿತ್ತು ಎಂದರು. ಪೊಲೀಸರಿಗೆ ನೀಡಲಾದ ದೂರು ಯಾವುದೇ ನಿರ್ದಿಷ್ಟ ಆರೋಪಗಳಿಲ್ಲದೆ “ಅಸ್ಪಷ್ಟ”ವಾಗಿತ್ತು ಮತ್ತು ಬ್ಯಾಂಕ್ ಖಾತೆಗಳನ್ನು ಬಳಸದಂತೆ ತಡೆದಿರುವುದು ಒಂದು ಮಾನ್ಯತೆ ಪಡೆದ ರಾಜಕೀಯ ಪಕ್ಷದ ದೈನಂದಿನ ಕಾರ್ಯನಿರ್ವಹಣೆಯನ್ನೇ ಸ್ಥಗಿತಗೊಳಿಸಿದೆ ಎಂದು ಅವರು ಪ್ರತಿಪಾದಿಸಿದರು.

ರಾಜ್ಯ ಪೊಲೀಸರ ಪರವಾಗಿ ಹಾಜರಾದ ತುಷಾರ್ ಮೆಹ್ತಾ ಅವರು ಕ್ರಮವನ್ನು ಸಮರ್ಥಿಸಿಕೊಂಡರು ಮತ್ತು ತನಿಖೆಯ ಸಂದರ್ಭದಲ್ಲಿ ಆಸ್ತಿಯನ್ನು ವಶಪಡಿಸಿಕೊಳ್ಳಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್ಎಸ್) ಸೆಕ್ಷನ್ 106 ಪೊಲೀಸರಿಗೆ ಅಧಿಕಾರ ನೀಡುತ್ತದೆ ಎಂದು ವಾದಿಸಿದರು. ಅಪರಾಧದ ಹಣ ದುರ್ಬಳಕೆಯಾಗುವುದನ್ನು ತಡೆಯಲು ಖಾತೆಗಳನ್ನು ಫ್ರೀಜ್ ಮಾಡುವುದು ಅಗತ್ಯವಾಗಿತ್ತು. ಒಂದು ವೇಳೆ ಕೋರ್ಟ್ ಯಾವುದಾದರೂ ಒಂದು ಬಣಕ್ಕೆ ಖಾತೆ ನಿರ್ವಹಿಸಲು ಅನುಮತಿ ನೀಡಿದರೆ, ಅದು ಆ ಬಣವನ್ನೇ ಅಸಲಿ ಟಿಎಂಸಿ ಎಂದು ಮನ್ನಣೆ ನೀಡಿದಂತಾಗುತ್ತದೆ ಎಂದು ಅವರು ವಾದಿಸಿದರು.

ಆದರೆ ನ್ಯಾಯಾಲಯವು ಈ ವಾದವನ್ನು ನಿರಾಕರಿಸಿ, “ನೀವು ಟಿಎಂಸಿ ಸದಸ್ಯರಾಗಿದ್ದೀರಿ, ಚುನಾವಣೆಯಲ್ಲಿ ಸ್ಪರ್ಧಿಸಿದ್ದೀರಿ, ಈ ಸಮಯ ಮತ್ತು ನಿಮ್ಮ ನಡವಳಿಕೆ ಪ್ರಸ್ತುತ ಹಂತದಲ್ಲಿ ನಂಬಿಕೆ ಹುಟ್ಟಿಸುವಂತಿಲ್ಲ” ಎಂದು ಕೋರ್ಟ್ ಕಠಿಣವಾಗಿ ಹೇಳಿತು. ಮುಂದುವರಿದು, ರಾಜಕೀಯ ಪಕ್ಷವೊಂದಕ್ಕೆ ಮನ್ನಣೆ ನೀಡುವುದು ಭಾರತೀಯ ಚುನಾವಣಾ ಆಯೋಗದ (ಇಸಿಐ) ಕೆಲಸ ಎಂದು ಹೈಕೋರ್ಟ್ ಹೇಳಿದೆ. ಚುನಾವಣಾ ಆಯೋಗವು ತನ್ನ ತೀರ್ಪನ್ನು ನೀಡಿದ ನಂತರ, ಅರ್ಜಿದಾರರು ಕೋರ್ಟ್ ಆದೇಶದ ಮಾರ್ಪಾಡಿಗೆ ಮನವಿ ಮಾಡಲು ಸ್ವತಂತ್ರರು ಎಂದು ಸ್ಪಷ್ಟಪಡಿಸಿತು.

ಪಕ್ಷದ ಖಾತೆಗಳಿಗೆ “ಅಕ್ರಮ ಹಣ” ಹರಿದುಬಂದಿರುವ ಸಾಕ್ಷ್ಯಗಳನ್ನು ಹುಡುಕಲು ಇಡಿ ದಾಳಿ ನಡೆಸಿದ ಬೆನ್ನಲ್ಲೇ, ಬುಧವಾರದಂದು ಟಿಎಂಸಿಯ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿತ್ತು. ಜಾರಿ ನಿರ್ದೇಶನಾಲಯವು ರಾಜಕೀಯ ಪಕ್ಷವೊಂದರ ನಿಧಿಯ ಬಗ್ಗೆ ತನಿಖೆ ನಡೆಸುತ್ತಿರುವುದು ಇದೇ ಮೊದಲು. ಈ ಹಿಂದೆ ಆಮ್ ಆದ್ಮಿ ಪಕ್ಷದ (ಆಪ್) ಖಾತೆಗಳು ಇಡಿಯ ಪರಿಶೀಲನೆಗೆ ಒಳಪಟ್ಟಿದ್ದರೂ, ಆ ತನಿಖೆಯು ದೆಹಲಿ ಮದ್ಯ ನೀತಿ ಹಗರಣದ ತನಿಖೆಯ ಭಾಗವಾಗಿತ್ತು.

ಈ ಕುರಿತು ಈ ಹಿಂದೆ ಹೇಳಿಕೆ ನೀಡಿದ್ದ ಟಿಎಂಸಿ, ‘ಪಕ್ಷದ ಬ್ಯಾಂಕ್ ಖಾತೆಗಳಲ್ಲಿರುವ ಎಲ್ಲಾ ಹಣವನ್ನು ಸಂಪೂರ್ಣವಾಗಿ ಮತ್ತು ಪಾರದರ್ಶಕವಾಗಿ ಬಹಿರಂಗಪಡಿಸಲಾಗಿದೆ. ಪಕ್ಷವು ಎಲ್ಲಾ ದೇಣಿಗೆ ವ್ಯವಹಾರಗಳನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು ಆದಾಯ ತೆರಿಗೆ ಇಲಾಖೆಗೆ ನಿಯಮಿತವಾಗಿ ವರದಿ ಮಾಡಿದೆ. ಈ ವಿವರಗಳನ್ನು ಪ್ರತಿವರ್ಷ ಇಸಿಐ ವೆಬ್‌ಸೈಟ್‌ನಲ್ಲಿ ಸಾರ್ವಜನಿಕವಾಗಿ ಪ್ರಕಟಿಸಲಾಗುತ್ತದೆ. ಎಲೆಕ್ಟೋರಲ್ ಬಾಂಡ್‌ಗಳಿಗೆ ಸಂಬಂಧಿಸಿದ ವಿವರಗಳು ಈಗಾಗಲೇ ಭಾರತ ಸರ್ಕಾರದ ಬಳಿ ಇವೆ, ಏಕೆಂದರೆ ಈ ಬಾಂಡ್‌ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿತರಿಸಿದ್ದು, ನಂತರ ಅದನ್ನು ಗೌರವಾನ್ವಿತ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ’ ಎಂದು ತಿಳಿಸಿತ್ತು.

ಜಾರಿ ನಿರ್ದೇಶಾಲಯದ ಈ ಕ್ರಮವನ್ನು ರಾಜಕೀಯ ಪ್ರೇರಿತ ಮತ್ತು ಕಾನೂನುಬಾಹಿರ ಎಂದು ಖಂಡಿಸಿರುವ ಟಿಎಂಸಿ, ಇದು ಬಹುಪಕ್ಷೀಯ ವ್ಯವಸ್ಥೆಯ ಮೇಲಿನ ದಾಳಿ ಮತ್ತು ಪ್ರಜಾಪ್ರಭುತ್ವಕ್ಕೆ ಅಗತ್ಯವಿರುವ ಸಮಾನ ಅವಕಾಶದ ತತ್ವಕ್ಕೆ ಧಕ್ಕೆ ತರುವ ಪ್ರಯತ್ನವಾಗಿದೆ ಎಂದು ಹೇಳಿದೆ. ಅಲ್ಲದೆ, ಇಡಿ ಇದೇ ನಿಯಮಗಳನ್ನು ಅನುಸರಿಸಿ ಬಿಜೆಪಿಯ ನಿಧಿಯನ್ನೂ ತನಿಖೆಗೊಳಪಡಿಸುತ್ತದೆಯೇ? ಎಂಬ ‘ಅಲಿಖಿತ ಪ್ರಶ್ನೆ’ಯನ್ನು ಪಕ್ಷವು ಮುಂದಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...