Homeಮುಖಪುಟಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಜಾರಿಗೆ ಕಲ್ಕತ್ತಾ ಹೈಕೋರ್ಟ್ ತಡೆ

ಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಜಾರಿಗೆ ಕಲ್ಕತ್ತಾ ಹೈಕೋರ್ಟ್ ತಡೆ

- Advertisement -
- Advertisement -

ಪಶ್ಚಿಮ ಬಂಗಾಳ ಸರ್ಕಾರವು 140 ಸಮುದಾಯಗಳನ್ನು ಇತರ ಹಿಂದುಳಿದ ವರ್ಗಗಳೆಂದು ವರ್ಗೀಕರಿಸುವ ಅಧಿಸೂಚನೆಯ ಅನುಷ್ಠಾನಕ್ಕೆ ಕಲ್ಕತ್ತಾ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ ಎಂದು ಬಾರ್ ಆಂಡ್ ಬೆಂಚ್‌ ವರದಿ ಮಾಡಿದೆ. ಪಶ್ಚಿಮ ಬಂಗಾಳದ ಹೊಸ

ನ್ಯಾಯಮೂರ್ತಿಗಳಾದ ತಪಬ್ರತ ಚಕ್ರವರ್ತಿ ಮತ್ತು ರಾಜಶೇಖರ್ ಮಾಂಥ ಅವರನ್ನೊಳಗೊಂಡ ಪೀಠವು, ಪ್ರಕರಣದ ಮುಂದಿನ ವಿಚಾರಣೆ ನಡೆಯಲಿರುವ ಜುಲೈ 31 ರವರೆಗೆ ಪಟ್ಟಿಯ ಆಧಾರದ ಮೇಲೆ ಕ್ರಮಗಳನ್ನು ತೆಗೆದುಕೊಳ್ಳದಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

ಪಶ್ಚಿಮ ಬಂಗಾಳ ಸರ್ಕಾರವು ಈ ತಿಂಗಳ ಆರಂಭದಲ್ಲಿ 76 ಉಪಜಾತಿಗಳನ್ನು ಇತರ ಹಿಂದುಳಿದ ವರ್ಗಗಳ ವರ್ಗಕ್ಕೆ ಸೇರಿಸುವ ಅಧಿಸೂಚನೆಯನ್ನು ಹೊರಡಿಸಿತ್ತು. ಇದರಿಂದಾಗಿ ಗುಂಪಿನಲ್ಲಿರುವ ಒಟ್ಟು ಸಮುದಾಯಗಳ ಸಂಖ್ಯೆ 140 ಕ್ಕೆ ತಲುಪಿದೆ.

140ರಲ್ಲಿ 80 ಸಮುದಾಯಗಳು ಮುಸ್ಲಿಮರಿಗೆ ಸೇರಿದವುಗಳಾಗಿದ್ದು, ಉಳಿದ 60 ಮುಸ್ಲಿಮೇತರರಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮುಸ್ಲಿಮರು ಒಬಿಸಿ ವರ್ಗದಲ್ಲಿ ಸೇರಿಸಲಾದ ಜನಸಂಖ್ಯೆಯ 57.1% ರಷ್ಟಿದ್ದಾರೆ.

ರಾಜ್ಯ ಸರ್ಕಾರದ ಹಿಂದಿನ ಒಬಿಸಿಗಳ ಪಟ್ಟಿಯಲ್ಲಿ 113 ಉಪಗುಂಪುಗಳಿದ್ದವು, ಅದರಲ್ಲಿ 77 ಮುಸ್ಲಿಮರು ಮತ್ತು 36 ಮುಸ್ಲಿಮೇತರರಿದ್ದರು. ಆದಾಗ್ಯೂ, ಹೈಕೋರ್ಟ್ ಮೇ 2024 ರಲ್ಲಿ ಪಟ್ಟಿಯನ್ನು ರದ್ದುಗೊಳಿಸಿ, OBC ಮೀಸಲಾತಿಯನ್ನು 17% ರಿಂದ 7% ಕ್ಕೆ ಇಳಿಸಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಹೊಸ ಪಟ್ಟಿಯು ರಾಜ್ಯ ಸರ್ಕಾರಕ್ಕೆ OBC ಮೀಸಲಾತಿಯನ್ನು 17% ಗೆ ಪುನಃಸ್ಥಾಪಿಸಲು ಅವಕಾಶ ನೀಡುತ್ತದೆ.

ಹೈಕೋರ್ಟ್‌ನ ಮೇ 2024 ರ ನಿರ್ಧಾರವು ಸುಮಾರು ಐದು ಲಕ್ಷ ಪ್ರಮಾಣಪತ್ರಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ನಿರೀಕ್ಷಿಸಲಾಗಿತ್ತು. ತೀರ್ಪಿನ ವಿರುದ್ಧ ರಾಜ್ಯ ಸರ್ಕಾರದ ಅರ್ಜಿ ಸುಪ್ರೀಂಕೋರ್ಟ್ ಮುಂದೆ ಬಾಕಿ ಇದೆ.

ಸರ್ಕಾರ ಸಿದ್ಧಪಡಿಸಿದ ಹೊಸ ಪಟ್ಟಿಯು ನ್ಯಾಯಾಂಗ ನಿಂದನೆಗೆ ಸಮ ಎಂದು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿಕೊಂಡಿದ್ದಾರೆ. “ತೃಣಮೂಲ ಕಾಂಗ್ರೆಸ್ ಸರ್ಕಾರವು ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಪ್ರಯತ್ನಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

2010 ರ ಮೊದಲು, OBC ಪಟ್ಟಿಯಲ್ಲಿ 66 ಸಮುದಾಯಗಳಿದ್ದವು, ಅದರಲ್ಲಿ ಕೇವಲ 11 ಸಮುದಾಯಗಳು ಮುಸ್ಲಿಮರದ್ದಾಗಿತ್ತು ಎಂದು ಅವರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದಾಗ್ಯೂ, OBC ಪಟ್ಟಿಯಲ್ಲಿ ಈ ಗುಂಪುಗಳನ್ನು ಧರ್ಮದ ಕಾರಣಕ್ಕೆ ಸೇರಿಸಿಲ್ಲ, ಬದಲಾಗಿ ಆ ಸಮುದಾಯವು ಹಿಂದುಳಿದಿರುವಿಕೆಯನ್ನು ಮಾನದಂಡವಾಗಿಸಿ ಇದನ್ನು ಮಾಡಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಬಿಜೆಪಿಯು ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟಲು ಪ್ರಯತ್ನಿಸುತ್ತಿದ್ದು, “ಒಡೆದು ಆಳುವ” ನೀತಿಯನ್ನು ಅನುಸರಿಸುತ್ತಿದೆ ಎಂದು ಅದು ಆರೋಪಿಸಿದೆ. ಪಶ್ಚಿಮ ಬಂಗಾಳದ ಹೊಸ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ‘ಭಯೋತ್ಪಾದಕರು’ ಎಂದು ಘೋಷಿಸಿ: ಕೆನಡಾ ಪ್ರಾಂತ್ಯದ ಮುಖ್ಯಸ್ಥ ಒತ್ತಾಯ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ‘ಭಯೋತ್ಪಾದಕರು’ ಎಂದು ಘೋಷಿಸಿ: ಕೆನಡಾ ಪ್ರಾಂತ್ಯದ ಮುಖ್ಯಸ್ಥ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...