Homeಮುಖಪುಟ‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ' ಎಂದ ಮಮತಾ ಬ್ಯಾನರ್ಜಿ ವಿರುದ್ಧ ಕ್ರಮಕ್ಕೆ ವಕೀಲರ ಗುಂಪು ಆಗ್ರಹ

‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ’ ಎಂದ ಮಮತಾ ಬ್ಯಾನರ್ಜಿ ವಿರುದ್ಧ ಕ್ರಮಕ್ಕೆ ವಕೀಲರ ಗುಂಪು ಆಗ್ರಹ

- Advertisement -
- Advertisement -

‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ’ ಎಂದು ಹೈಕೋರ್ಟ್‌ ವಿರುದ್ಧ ಟೀಕೆಯನ್ನು ಮಾಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಬೇಕೆಂದು ವಕೀಲರ ಗುಂಪು ಗುರುವಾರ ಕಲ್ಕತ್ತಾ ಹೈಕೋರ್ಟ್‌ಗೆ ಒತ್ತಾಯಿಸಿದೆ.

ಶಾಲಾ ಉದ್ಯೋಗಿಗಳ ನೇಮಾಕಾತಿಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ 24,000 ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟಿನ ತೀರ್ಪಿನ ಹಿನ್ನೆಲೆಯಲ್ಲಿ ಈ ಟೀಕೆಯನ್ನು ಮಮತಾ ಬ್ಯಾನರ್ಜಿ ಅವರು ಮಾಡಿದ್ದಾರೆ.

ಹಿರಿಯ ವಕೀಲ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ನಾಯಕ ಬಿಕಾಶ್ ರಂಜನ್ ಭಟ್ಟಾಚಾರ್ಯ ಅವರು ಇಂದು ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯ್ ಭಟ್ಟಾಚಾರ್ಯ ಅವರಲ್ಲಿ “ಅವಹೇಳನಕಾರಿ” ಹೇಳಿಕೆಗಳಿಗಾಗಿ ಮುಖ್ಯಮಂತ್ರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಾನು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ತೆಗೆದುಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ. ಈ ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಿ, ಇಲ್ಲವಾದರೆ, ಪ್ರತಿ ನ್ಯಾಯಾಲಯವು ನಮ್ಮನ್ನು ನೋಡಿ ನಗುತ್ತಿದೆ ಎಂದು ಹೇಳಿದ್ದರು.

ಸಾರ್ವಜನಿಕರ ದೃಷ್ಟಿಯಲ್ಲಿ ನ್ಯಾಯಾಲಯದ ಘನತೆಯನ್ನು ಕುಗ್ಗಿಸಲು ಮುಖ್ಯಮಂತ್ರಿ ಬ್ಯಾನರ್ಜಿ ಅವರು ನಿರಂತರವಾಗಿ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ. ಈ ವಿಷಯದಲ್ಲಿ ದಾಖಲೆಯ ಜೊತೆ ಅರ್ಜಿ ಸಲ್ಲಿಸಬಹುದೇ ಎಂದು ನ್ಯಾಯಾಲಯ ಕೇಳಿದೆ. ಮುಖ್ಯಮಂತ್ರಿಯವರ ಹೇಳಿಕೆಗಳ ವರದಿಗಳೊಂದಿಗೆ ಅಫಿಡವಿಟ್ ಸಲ್ಲಿಸುವುದಾಗಿ ಭಟ್ಟಾಚಾರ್ಯ ಈ ವೇಳೆ ಹೇಳಿದ್ದಾರೆ.

ಇದಲ್ಲದೆ ಇತರ ಇಬ್ಬರು ವಕೀಲರು ಈ ವಿಷಯದಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ದುರುದ್ದೇಶಪೂರಿತ ಮತ್ತು ಮಾನಹಾನಿಕರ ಹೇಳಿಕೆಗಳಿಗಾಗಿ ಮುಖ್ಯಮಂತ್ರಿ ಬ್ಯಾನರ್ಜಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮತ್ತೋರ್ವ ವಕೀಲರು ಹೈಕೋರ್ಟ್‌ಗೆ ಆಗ್ರಹಿಸಿದ್ದಾರೆ. ಮಧ್ಯಾಹ್ನದ ನಂತರ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಅರ್ಜಿಗಳನ್ನು ಸಲ್ಲಿಸಲು ಅನುಮತಿ ನೀಡಿದೆ ಮತ್ತು ಮುಖ್ಯಮಂತ್ರಿಯವರ ವಿವಾದಾತ್ಮಕ ಹೇಳಿಕೆಗಳ ಕುರಿತು ಭಟ್ಟಾಚಾರ್ಯ ಅವರು ಸಲ್ಲಿಸಿದ ಮಾಧ್ಯಮ ವರದಿಗಳನ್ನು ದಾಖಲಿಸಿದೆ.

ಈ ವಾರದ ಆರಂಭದಲ್ಲಿ, ಹೈಕೋರ್ಟ್‌ನ ವಿಭಾಗೀಯ ಪೀಠವು 2016ರಲ್ಲಿ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (WBSSC) ಮಾಡಿದ ಸುಮಾರು 24,000 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಗಳನ್ನು ರದ್ದುಗೊಳಿಸಿತ್ತು. ನೇಮಕಾತಿಯನ್ನು ಅಸಿಂಧುಗೊಳಿಸಿದ ಹೈಕೋರ್ಟ್, 24,000 ಅಭ್ಯರ್ಥಿಗಳಿಗೆ “ಕಾನೂನುಬಾಹಿರವಾಗಿ” ನೇಮಕಗೊಂಡ ನಂತರ ಪಡೆದ ಸಂಬಳವನ್ನು ಹಿಂದಿರುಗಿಸುವಂತೆ ಆದೇಶಿಸಿದೆ. ಪಶ್ಚಿಮ ಬಂಗಾಳ ಸರ್ಕಾರವು ಈ ಏಪ್ರಿಲ್ 22ರ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿದೆ.

ಇದನ್ನು ಓದಿ: ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’ ಮಾಡಿಕೊಂಡ ಬಿಜೆಪಿ: ಆದರೆ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...