Homeಮುಖಪುಟ‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ' ಎಂದ ಮಮತಾ ಬ್ಯಾನರ್ಜಿ ವಿರುದ್ಧ ಕ್ರಮಕ್ಕೆ ವಕೀಲರ ಗುಂಪು ಆಗ್ರಹ

‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ’ ಎಂದ ಮಮತಾ ಬ್ಯಾನರ್ಜಿ ವಿರುದ್ಧ ಕ್ರಮಕ್ಕೆ ವಕೀಲರ ಗುಂಪು ಆಗ್ರಹ

- Advertisement -
- Advertisement -

‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ’ ಎಂದು ಹೈಕೋರ್ಟ್‌ ವಿರುದ್ಧ ಟೀಕೆಯನ್ನು ಮಾಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಬೇಕೆಂದು ವಕೀಲರ ಗುಂಪು ಗುರುವಾರ ಕಲ್ಕತ್ತಾ ಹೈಕೋರ್ಟ್‌ಗೆ ಒತ್ತಾಯಿಸಿದೆ.

ಶಾಲಾ ಉದ್ಯೋಗಿಗಳ ನೇಮಾಕಾತಿಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ 24,000 ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟಿನ ತೀರ್ಪಿನ ಹಿನ್ನೆಲೆಯಲ್ಲಿ ಈ ಟೀಕೆಯನ್ನು ಮಮತಾ ಬ್ಯಾನರ್ಜಿ ಅವರು ಮಾಡಿದ್ದಾರೆ.

ಹಿರಿಯ ವಕೀಲ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ನಾಯಕ ಬಿಕಾಶ್ ರಂಜನ್ ಭಟ್ಟಾಚಾರ್ಯ ಅವರು ಇಂದು ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯ್ ಭಟ್ಟಾಚಾರ್ಯ ಅವರಲ್ಲಿ “ಅವಹೇಳನಕಾರಿ” ಹೇಳಿಕೆಗಳಿಗಾಗಿ ಮುಖ್ಯಮಂತ್ರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಾನು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ತೆಗೆದುಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ. ಈ ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಿ, ಇಲ್ಲವಾದರೆ, ಪ್ರತಿ ನ್ಯಾಯಾಲಯವು ನಮ್ಮನ್ನು ನೋಡಿ ನಗುತ್ತಿದೆ ಎಂದು ಹೇಳಿದ್ದರು.

ಸಾರ್ವಜನಿಕರ ದೃಷ್ಟಿಯಲ್ಲಿ ನ್ಯಾಯಾಲಯದ ಘನತೆಯನ್ನು ಕುಗ್ಗಿಸಲು ಮುಖ್ಯಮಂತ್ರಿ ಬ್ಯಾನರ್ಜಿ ಅವರು ನಿರಂತರವಾಗಿ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ. ಈ ವಿಷಯದಲ್ಲಿ ದಾಖಲೆಯ ಜೊತೆ ಅರ್ಜಿ ಸಲ್ಲಿಸಬಹುದೇ ಎಂದು ನ್ಯಾಯಾಲಯ ಕೇಳಿದೆ. ಮುಖ್ಯಮಂತ್ರಿಯವರ ಹೇಳಿಕೆಗಳ ವರದಿಗಳೊಂದಿಗೆ ಅಫಿಡವಿಟ್ ಸಲ್ಲಿಸುವುದಾಗಿ ಭಟ್ಟಾಚಾರ್ಯ ಈ ವೇಳೆ ಹೇಳಿದ್ದಾರೆ.

ಇದಲ್ಲದೆ ಇತರ ಇಬ್ಬರು ವಕೀಲರು ಈ ವಿಷಯದಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ದುರುದ್ದೇಶಪೂರಿತ ಮತ್ತು ಮಾನಹಾನಿಕರ ಹೇಳಿಕೆಗಳಿಗಾಗಿ ಮುಖ್ಯಮಂತ್ರಿ ಬ್ಯಾನರ್ಜಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮತ್ತೋರ್ವ ವಕೀಲರು ಹೈಕೋರ್ಟ್‌ಗೆ ಆಗ್ರಹಿಸಿದ್ದಾರೆ. ಮಧ್ಯಾಹ್ನದ ನಂತರ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಅರ್ಜಿಗಳನ್ನು ಸಲ್ಲಿಸಲು ಅನುಮತಿ ನೀಡಿದೆ ಮತ್ತು ಮುಖ್ಯಮಂತ್ರಿಯವರ ವಿವಾದಾತ್ಮಕ ಹೇಳಿಕೆಗಳ ಕುರಿತು ಭಟ್ಟಾಚಾರ್ಯ ಅವರು ಸಲ್ಲಿಸಿದ ಮಾಧ್ಯಮ ವರದಿಗಳನ್ನು ದಾಖಲಿಸಿದೆ.

ಈ ವಾರದ ಆರಂಭದಲ್ಲಿ, ಹೈಕೋರ್ಟ್‌ನ ವಿಭಾಗೀಯ ಪೀಠವು 2016ರಲ್ಲಿ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (WBSSC) ಮಾಡಿದ ಸುಮಾರು 24,000 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಗಳನ್ನು ರದ್ದುಗೊಳಿಸಿತ್ತು. ನೇಮಕಾತಿಯನ್ನು ಅಸಿಂಧುಗೊಳಿಸಿದ ಹೈಕೋರ್ಟ್, 24,000 ಅಭ್ಯರ್ಥಿಗಳಿಗೆ “ಕಾನೂನುಬಾಹಿರವಾಗಿ” ನೇಮಕಗೊಂಡ ನಂತರ ಪಡೆದ ಸಂಬಳವನ್ನು ಹಿಂದಿರುಗಿಸುವಂತೆ ಆದೇಶಿಸಿದೆ. ಪಶ್ಚಿಮ ಬಂಗಾಳ ಸರ್ಕಾರವು ಈ ಏಪ್ರಿಲ್ 22ರ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿದೆ.

ಇದನ್ನು ಓದಿ: ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’ ಮಾಡಿಕೊಂಡ ಬಿಜೆಪಿ: ಆದರೆ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...