Homeಮುಖಪುಟಜಾತಿ-ವಿರೋಧಿ ಮಸೂದೆ ಅಂಗೀಕರಿಸಿದ ಕ್ಯಾಲಿಫೋರ್ನಿಯಾ ಅಸೆಂಬ್ಲಿ

ಜಾತಿ-ವಿರೋಧಿ ಮಸೂದೆ ಅಂಗೀಕರಿಸಿದ ಕ್ಯಾಲಿಫೋರ್ನಿಯಾ ಅಸೆಂಬ್ಲಿ

- Advertisement -
- Advertisement -

ಜಾತಿ ತಾರತಮ್ಯವನ್ನು ಕಾನೂನುಬಾಹಿರಗೊಳಿಸುವ ಮಸೂದೆಯನ್ನು ಕ್ಯಾಲಿಫೋರ್ನಿಯಾ ಸ್ಟೇಟ್ ಅಸೆಂಬ್ಲಿ ಸೋಮವಾರದಂದು (ಆಗಸ್ಟ್ 28) ಅಂಗೀಕರಿಸಿತು. ರಾಜ್ಯ ಅಸೆಂಬ್ಲಿಯಲ್ಲಿ ಅಂಗೀಕಾರ ಪಡೆಯುವ ಮೂಲಕ ಜಾತಿ ತಾರತಮ್ಯವನ್ನು ನಿಷೇಧಿಸುವ ಮೊದಲ ಅಮೆರಿಕದ ರಾಜ್ಯ ಕ್ಯಾಲಿಫೋರ್ನಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಮಸೂದೆ ಪರವಾಗಿ 50 ಮತಗಳು ಮತ್ತು ಅದರ ವಿರುದ್ಧ ಕೇವಲ ಮೂರು ಮತಗಳು ಬಂದಿವೆ. ಇದನ್ನು ಮೊದಲು ಈ ವರ್ಷದ ಮೇ ತಿಂಗಳಲ್ಲಿ ರಾಜ್ಯದ ಸೆನೆಟ್ ಅಂಗೀಕರಿಸಿತು. ಈಗ ಅದಕ್ಕೆ ಒಪ್ಪಿಗೆ ಪಡೆಯಲು ರಾಜ್ಯ ಸೆನೆಟ್‌ಗೆ ಕಳುಹಿಸಲಾಗುತ್ತದೆ. ಮಸೂದೆಯನ್ನು ಸೆನೆಟ್ ಅನುಮೋದಿಸಿದ ನಂತರ, ಗವರ್ನರ್ ಗೇವಿನ್ ನ್ಯೂಸಮ್ ಅವರಿಗೆ ಕಳುಹಿಸಲಾಗುತ್ತದೆ. ನ್ಯೂಸಮ್ ಸಹಿ ಮಾಡಿದ ನಂತರ ಮಸೂದೆ ಕಾನೂನಾಗಿ ಜಾರಿಯಾಗುತ್ತದೆ.

ಡೆಮಾಕ್ರಟಿಕ್ ಪಕ್ಷದ ಶಾಸಕರಾದ ಸೆನೆಟರ್ ಆಯಿಷಾ ವಹಾಬ್ ಅವರು SB-403 ಬಿಲ್ ಅನ್ನು ರಚಿಸಿ ಮಾರ್ಚ್ 23ರಂದು, ಕ್ಯಾಲಿಫೋರ್ನಿಯಾ ಅಸೆಂಬ್ಲಿಯಲ್ಲಿ ಮಸೂದೆಯನ್ನು ಮಂಡಿಸಿದ್ದರು. ವಹಾಬ್ ರಾಜ್ಯ ಶಾಸಕಾಂಗಕ್ಕೆ ಆಯ್ಕೆಯಾದ ಮೊದಲ ಮುಸ್ಲಿಂ ಮತ್ತು ಅಫ್ಘಾನ್-ಅಮೆರಿಕನ್ ಆಗಿದ್ದಾರೆ. ”ಜಾತಿ ತಾರತಮ್ಯವು ಸಾಮಾಜಿಕ ನ್ಯಾಯ ಮತ್ತು ನಾಗರಿಕ ಹಕ್ಕುಗಳನ್ನು ನಿರಾಕರಿಸುವ ವಿಷಯವಾಗಿದೆ” ಎಂದು ವಿಧೇಯಕವನ್ನು ಮಂಡಿಸುವಾಗ ವಹಾಬ್ ಹೇಳಿದ್ದರು.

ಈ ಬಗ್ಗೆ ಮಾತನಾಡಿರುವ ಈಕ್ವಾಲಿಟಿ ಲ್ಯಾಬ್ಸ್ ಸಂಸ್ಥಾಪಕಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ತೇನ್ಮೋಳಿ ಸೌಂದರರಾಜನ್  ಅವರು, ”ಅಸೆಂಬ್ಲಿ ಮತವು ಯುಗಗಳ ಗೆಲುವಾಗಿದೆ. ಇಡೀ ಕ್ಯಾಲಿಫೋರ್ನಿಯಾ ರಾಜ್ಯದಾದ್ಯಂತ 700ಕ್ಕೂ ಹೆಚ್ಚು ವಕೀಲರು ಸಭೆಗಳನ್ನು ನಡೆಸಿದ ನಂತರ, ಜನರು ಜಾತಿ ಸಮಾನತೆಯ ರಕ್ಷಣೆಗಾಗಿ ಹೋರಾಟಗಳನ್ನು ಮಾಡಿದರು. ನನ್ನ ಇಡೀ ಜೀವನದಲ್ಲಿ ಜಾತಿಯತೆಯನ್ನು ಸಹಿಸಿಕೊಂಡ ಬಂದಿದ್ದೇನೆ. ಜಾತಿ-ದಮನಿತ ಕ್ಯಾಲಿಫೋರ್ನಿಯಾದವರು ಎದುರಿಸಿದ ಅನ್ಯಾಯ ಮತ್ತು ಸಂಕಷ್ಟಗಳನ್ನು ನಾನು ನೋಡಿದ್ದೇನೆ. ಇದರ ವಿರುದ್ಧ ಇಪ್ಪತ್ತು ವರ್ಷಗಳಿಂದ ಜಾತಿ-ದಮನಿತರು ಸಂಘಟಿತರಾಗಿದ್ದಾರೆ, ಆದ್ದರಿಂದ ನಾವು ಹಿಂಸಾತ್ಮಕ ದಾಳಿ ಮತ್ತು ತಾರತಮ್ಯದಿಂದ ಮುಕ್ತವಾಗಿ ಬದುಕಬಹುದು. ಈಗ , ಕ್ಯಾಲಿಫೋರ್ನಿಯಾ ಅಸೆಂಬ್ಲಿ ನಮ್ಮನ್ನು ಗೆಲುವಿನ ಹತ್ತಿರಕ್ಕೆ ತರಲು ನಿರ್ಣಾಯಕವಾಗಿ ಮತ ಹಾಕಿದೆ” ಎಂದು ತೇನ್ಮೋಳಿ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...