Homeಮುಖಪುಟಜಾತಿ-ವಿರೋಧಿ ಮಸೂದೆ ಅಂಗೀಕರಿಸಿದ ಕ್ಯಾಲಿಫೋರ್ನಿಯಾ ಅಸೆಂಬ್ಲಿ

ಜಾತಿ-ವಿರೋಧಿ ಮಸೂದೆ ಅಂಗೀಕರಿಸಿದ ಕ್ಯಾಲಿಫೋರ್ನಿಯಾ ಅಸೆಂಬ್ಲಿ

- Advertisement -
- Advertisement -

ಜಾತಿ ತಾರತಮ್ಯವನ್ನು ಕಾನೂನುಬಾಹಿರಗೊಳಿಸುವ ಮಸೂದೆಯನ್ನು ಕ್ಯಾಲಿಫೋರ್ನಿಯಾ ಸ್ಟೇಟ್ ಅಸೆಂಬ್ಲಿ ಸೋಮವಾರದಂದು (ಆಗಸ್ಟ್ 28) ಅಂಗೀಕರಿಸಿತು. ರಾಜ್ಯ ಅಸೆಂಬ್ಲಿಯಲ್ಲಿ ಅಂಗೀಕಾರ ಪಡೆಯುವ ಮೂಲಕ ಜಾತಿ ತಾರತಮ್ಯವನ್ನು ನಿಷೇಧಿಸುವ ಮೊದಲ ಅಮೆರಿಕದ ರಾಜ್ಯ ಕ್ಯಾಲಿಫೋರ್ನಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಮಸೂದೆ ಪರವಾಗಿ 50 ಮತಗಳು ಮತ್ತು ಅದರ ವಿರುದ್ಧ ಕೇವಲ ಮೂರು ಮತಗಳು ಬಂದಿವೆ. ಇದನ್ನು ಮೊದಲು ಈ ವರ್ಷದ ಮೇ ತಿಂಗಳಲ್ಲಿ ರಾಜ್ಯದ ಸೆನೆಟ್ ಅಂಗೀಕರಿಸಿತು. ಈಗ ಅದಕ್ಕೆ ಒಪ್ಪಿಗೆ ಪಡೆಯಲು ರಾಜ್ಯ ಸೆನೆಟ್‌ಗೆ ಕಳುಹಿಸಲಾಗುತ್ತದೆ. ಮಸೂದೆಯನ್ನು ಸೆನೆಟ್ ಅನುಮೋದಿಸಿದ ನಂತರ, ಗವರ್ನರ್ ಗೇವಿನ್ ನ್ಯೂಸಮ್ ಅವರಿಗೆ ಕಳುಹಿಸಲಾಗುತ್ತದೆ. ನ್ಯೂಸಮ್ ಸಹಿ ಮಾಡಿದ ನಂತರ ಮಸೂದೆ ಕಾನೂನಾಗಿ ಜಾರಿಯಾಗುತ್ತದೆ.

ಡೆಮಾಕ್ರಟಿಕ್ ಪಕ್ಷದ ಶಾಸಕರಾದ ಸೆನೆಟರ್ ಆಯಿಷಾ ವಹಾಬ್ ಅವರು SB-403 ಬಿಲ್ ಅನ್ನು ರಚಿಸಿ ಮಾರ್ಚ್ 23ರಂದು, ಕ್ಯಾಲಿಫೋರ್ನಿಯಾ ಅಸೆಂಬ್ಲಿಯಲ್ಲಿ ಮಸೂದೆಯನ್ನು ಮಂಡಿಸಿದ್ದರು. ವಹಾಬ್ ರಾಜ್ಯ ಶಾಸಕಾಂಗಕ್ಕೆ ಆಯ್ಕೆಯಾದ ಮೊದಲ ಮುಸ್ಲಿಂ ಮತ್ತು ಅಫ್ಘಾನ್-ಅಮೆರಿಕನ್ ಆಗಿದ್ದಾರೆ. ”ಜಾತಿ ತಾರತಮ್ಯವು ಸಾಮಾಜಿಕ ನ್ಯಾಯ ಮತ್ತು ನಾಗರಿಕ ಹಕ್ಕುಗಳನ್ನು ನಿರಾಕರಿಸುವ ವಿಷಯವಾಗಿದೆ” ಎಂದು ವಿಧೇಯಕವನ್ನು ಮಂಡಿಸುವಾಗ ವಹಾಬ್ ಹೇಳಿದ್ದರು.

ಈ ಬಗ್ಗೆ ಮಾತನಾಡಿರುವ ಈಕ್ವಾಲಿಟಿ ಲ್ಯಾಬ್ಸ್ ಸಂಸ್ಥಾಪಕಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ತೇನ್ಮೋಳಿ ಸೌಂದರರಾಜನ್  ಅವರು, ”ಅಸೆಂಬ್ಲಿ ಮತವು ಯುಗಗಳ ಗೆಲುವಾಗಿದೆ. ಇಡೀ ಕ್ಯಾಲಿಫೋರ್ನಿಯಾ ರಾಜ್ಯದಾದ್ಯಂತ 700ಕ್ಕೂ ಹೆಚ್ಚು ವಕೀಲರು ಸಭೆಗಳನ್ನು ನಡೆಸಿದ ನಂತರ, ಜನರು ಜಾತಿ ಸಮಾನತೆಯ ರಕ್ಷಣೆಗಾಗಿ ಹೋರಾಟಗಳನ್ನು ಮಾಡಿದರು. ನನ್ನ ಇಡೀ ಜೀವನದಲ್ಲಿ ಜಾತಿಯತೆಯನ್ನು ಸಹಿಸಿಕೊಂಡ ಬಂದಿದ್ದೇನೆ. ಜಾತಿ-ದಮನಿತ ಕ್ಯಾಲಿಫೋರ್ನಿಯಾದವರು ಎದುರಿಸಿದ ಅನ್ಯಾಯ ಮತ್ತು ಸಂಕಷ್ಟಗಳನ್ನು ನಾನು ನೋಡಿದ್ದೇನೆ. ಇದರ ವಿರುದ್ಧ ಇಪ್ಪತ್ತು ವರ್ಷಗಳಿಂದ ಜಾತಿ-ದಮನಿತರು ಸಂಘಟಿತರಾಗಿದ್ದಾರೆ, ಆದ್ದರಿಂದ ನಾವು ಹಿಂಸಾತ್ಮಕ ದಾಳಿ ಮತ್ತು ತಾರತಮ್ಯದಿಂದ ಮುಕ್ತವಾಗಿ ಬದುಕಬಹುದು. ಈಗ , ಕ್ಯಾಲಿಫೋರ್ನಿಯಾ ಅಸೆಂಬ್ಲಿ ನಮ್ಮನ್ನು ಗೆಲುವಿನ ಹತ್ತಿರಕ್ಕೆ ತರಲು ನಿರ್ಣಾಯಕವಾಗಿ ಮತ ಹಾಕಿದೆ” ಎಂದು ತೇನ್ಮೋಳಿ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...