Homeಮುಖಪುಟಜಾತಿ-ವಿರೋಧಿ ಮಸೂದೆ ಅಂಗೀಕರಿಸಿದ ಕ್ಯಾಲಿಫೋರ್ನಿಯಾ ಅಸೆಂಬ್ಲಿ

ಜಾತಿ-ವಿರೋಧಿ ಮಸೂದೆ ಅಂಗೀಕರಿಸಿದ ಕ್ಯಾಲಿಫೋರ್ನಿಯಾ ಅಸೆಂಬ್ಲಿ

- Advertisement -
- Advertisement -

ಜಾತಿ ತಾರತಮ್ಯವನ್ನು ಕಾನೂನುಬಾಹಿರಗೊಳಿಸುವ ಮಸೂದೆಯನ್ನು ಕ್ಯಾಲಿಫೋರ್ನಿಯಾ ಸ್ಟೇಟ್ ಅಸೆಂಬ್ಲಿ ಸೋಮವಾರದಂದು (ಆಗಸ್ಟ್ 28) ಅಂಗೀಕರಿಸಿತು. ರಾಜ್ಯ ಅಸೆಂಬ್ಲಿಯಲ್ಲಿ ಅಂಗೀಕಾರ ಪಡೆಯುವ ಮೂಲಕ ಜಾತಿ ತಾರತಮ್ಯವನ್ನು ನಿಷೇಧಿಸುವ ಮೊದಲ ಅಮೆರಿಕದ ರಾಜ್ಯ ಕ್ಯಾಲಿಫೋರ್ನಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಮಸೂದೆ ಪರವಾಗಿ 50 ಮತಗಳು ಮತ್ತು ಅದರ ವಿರುದ್ಧ ಕೇವಲ ಮೂರು ಮತಗಳು ಬಂದಿವೆ. ಇದನ್ನು ಮೊದಲು ಈ ವರ್ಷದ ಮೇ ತಿಂಗಳಲ್ಲಿ ರಾಜ್ಯದ ಸೆನೆಟ್ ಅಂಗೀಕರಿಸಿತು. ಈಗ ಅದಕ್ಕೆ ಒಪ್ಪಿಗೆ ಪಡೆಯಲು ರಾಜ್ಯ ಸೆನೆಟ್‌ಗೆ ಕಳುಹಿಸಲಾಗುತ್ತದೆ. ಮಸೂದೆಯನ್ನು ಸೆನೆಟ್ ಅನುಮೋದಿಸಿದ ನಂತರ, ಗವರ್ನರ್ ಗೇವಿನ್ ನ್ಯೂಸಮ್ ಅವರಿಗೆ ಕಳುಹಿಸಲಾಗುತ್ತದೆ. ನ್ಯೂಸಮ್ ಸಹಿ ಮಾಡಿದ ನಂತರ ಮಸೂದೆ ಕಾನೂನಾಗಿ ಜಾರಿಯಾಗುತ್ತದೆ.

ಡೆಮಾಕ್ರಟಿಕ್ ಪಕ್ಷದ ಶಾಸಕರಾದ ಸೆನೆಟರ್ ಆಯಿಷಾ ವಹಾಬ್ ಅವರು SB-403 ಬಿಲ್ ಅನ್ನು ರಚಿಸಿ ಮಾರ್ಚ್ 23ರಂದು, ಕ್ಯಾಲಿಫೋರ್ನಿಯಾ ಅಸೆಂಬ್ಲಿಯಲ್ಲಿ ಮಸೂದೆಯನ್ನು ಮಂಡಿಸಿದ್ದರು. ವಹಾಬ್ ರಾಜ್ಯ ಶಾಸಕಾಂಗಕ್ಕೆ ಆಯ್ಕೆಯಾದ ಮೊದಲ ಮುಸ್ಲಿಂ ಮತ್ತು ಅಫ್ಘಾನ್-ಅಮೆರಿಕನ್ ಆಗಿದ್ದಾರೆ. ”ಜಾತಿ ತಾರತಮ್ಯವು ಸಾಮಾಜಿಕ ನ್ಯಾಯ ಮತ್ತು ನಾಗರಿಕ ಹಕ್ಕುಗಳನ್ನು ನಿರಾಕರಿಸುವ ವಿಷಯವಾಗಿದೆ” ಎಂದು ವಿಧೇಯಕವನ್ನು ಮಂಡಿಸುವಾಗ ವಹಾಬ್ ಹೇಳಿದ್ದರು.

ಈ ಬಗ್ಗೆ ಮಾತನಾಡಿರುವ ಈಕ್ವಾಲಿಟಿ ಲ್ಯಾಬ್ಸ್ ಸಂಸ್ಥಾಪಕಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ತೇನ್ಮೋಳಿ ಸೌಂದರರಾಜನ್  ಅವರು, ”ಅಸೆಂಬ್ಲಿ ಮತವು ಯುಗಗಳ ಗೆಲುವಾಗಿದೆ. ಇಡೀ ಕ್ಯಾಲಿಫೋರ್ನಿಯಾ ರಾಜ್ಯದಾದ್ಯಂತ 700ಕ್ಕೂ ಹೆಚ್ಚು ವಕೀಲರು ಸಭೆಗಳನ್ನು ನಡೆಸಿದ ನಂತರ, ಜನರು ಜಾತಿ ಸಮಾನತೆಯ ರಕ್ಷಣೆಗಾಗಿ ಹೋರಾಟಗಳನ್ನು ಮಾಡಿದರು. ನನ್ನ ಇಡೀ ಜೀವನದಲ್ಲಿ ಜಾತಿಯತೆಯನ್ನು ಸಹಿಸಿಕೊಂಡ ಬಂದಿದ್ದೇನೆ. ಜಾತಿ-ದಮನಿತ ಕ್ಯಾಲಿಫೋರ್ನಿಯಾದವರು ಎದುರಿಸಿದ ಅನ್ಯಾಯ ಮತ್ತು ಸಂಕಷ್ಟಗಳನ್ನು ನಾನು ನೋಡಿದ್ದೇನೆ. ಇದರ ವಿರುದ್ಧ ಇಪ್ಪತ್ತು ವರ್ಷಗಳಿಂದ ಜಾತಿ-ದಮನಿತರು ಸಂಘಟಿತರಾಗಿದ್ದಾರೆ, ಆದ್ದರಿಂದ ನಾವು ಹಿಂಸಾತ್ಮಕ ದಾಳಿ ಮತ್ತು ತಾರತಮ್ಯದಿಂದ ಮುಕ್ತವಾಗಿ ಬದುಕಬಹುದು. ಈಗ , ಕ್ಯಾಲಿಫೋರ್ನಿಯಾ ಅಸೆಂಬ್ಲಿ ನಮ್ಮನ್ನು ಗೆಲುವಿನ ಹತ್ತಿರಕ್ಕೆ ತರಲು ನಿರ್ಣಾಯಕವಾಗಿ ಮತ ಹಾಕಿದೆ” ಎಂದು ತೇನ್ಮೋಳಿ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...