Homeಮುಖಪುಟಜುಲೈ 31ರಿಂದ ವಿಧಾನಸಭೆ ಅಧಿವೇಶನ ನಡೆಸಿ: ರಾಜ್ಯಪಾಲರಿಗೆ ಹೊಸ ಪ್ರಸ್ತಾಪ ಕಳುಹಿಸಿದ ಗೆಹ್ಲೋಟ್

ಜುಲೈ 31ರಿಂದ ವಿಧಾನಸಭೆ ಅಧಿವೇಶನ ನಡೆಸಿ: ರಾಜ್ಯಪಾಲರಿಗೆ ಹೊಸ ಪ್ರಸ್ತಾಪ ಕಳುಹಿಸಿದ ಗೆಹ್ಲೋಟ್

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಹಲವು ಮಸೂದೆಗಳನ್ನು ಚರ್ಚಿಸಲು ರಾಜ್ಯ ವಿಧಾನಸಭೆಯ ಅಧಿವೇಶನ ಪ್ರಾರಂಭಿಸುವಂತೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯಪಾಲರಾದ ಕಾಳ್‌ರಾಜ್ ಮಿಶ್ರಾ ಅವರಿಗೆ ಮನವಿ ಮಾಡಿದ್ದಾರೆ.

ಆಶ್ಚರ್ಯಕರವಾಗಿ ಬಹುಮತ ಸಾಬೀತುಪಡಿಸುವ ವಿಚಾರವನ್ನು ಕೈಬಿಟ್ಟಿರುವ ಅವರು, ಜುಲೈ 31 ರಿಂದ ರಾಜ್ಯ ವಿಧಾನಸಭೆಯ ಅಧಿವೇಶನವನ್ನು ಪ್ರಾರಂಭಿಸುವಂತೆ ಹೊಸ ಪ್ರಸ್ತಾಪವನ್ನು ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರೊಡನೆ ಹಲವು ಕಾಂಗ್ರೆಸ್ ಶಾಸಕರು ಬಂಡಾಯವೆದ್ದ ನಂತರ ರಾಜಸ್ಥಾನ ಕಾಂಗ್ರೆಸ್ ಸರ್ಕಾರವು ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಕೇಂದ್ರ ಸರ್ಕಾರದ ಒತ್ತಡದಿಂದಾಗಿ ರಾಜ್ಯಪಾಲರು ಅಧಿವೇಶನ ನಡೆಸಲು ವಿಳಂಬ ಮಾಡುತ್ತಿದ್ದಾರೆ ಎಂದು ಗೆಹ್ಲೋಟ್ ಪರ ಶಾಸಕರು ಆರೋಪಿಸಿದ್ದಾರೆ.

ಸದನವನ್ನು ಕರೆಯಲು ಸಾಂವಿಧಾನಿಕ ಮಾನದಂಡಗಳನ್ನು ಅನುಸರಿಸಬೇಕು ಎಂದು ಕಾಳ್‌ರಾಜ್ ಮಿಶ್ರಾ ಈ ಆರೋಪವನ್ನು ನಿರಾಕರಿಸಿದ್ದಾರೆ.

ಅಧಿವೇಶನ ನಡೆಸುವಂತೆ ಈ ಹಿಂದೆ ಕಾಂಗ್ರೆಸ್ ಸರ್ಕಾರ ಕಳುಹಿಸಿದ ಹಲವು ಪ್ರಸ್ತಾಪಗಳನ್ನು ರಾಜ್ಯಪಾಲರು ತಿರಸ್ಕರಿಸಿದ್ದರು. ಕೊರೊನಾ ಸಾಂಕ್ರಾಮಿಕದ ವೇಳೆ ಸದನ ನಡೆಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿದ್ದರು.

ಮುಖ್ಯಮಂತ್ರಿ ಗೆಹ್ಲೋಟ್ ಅವರನ್ನು ಬೆಂಬಲಿಸುವ ಶಾಸಕರು ವಿಶೇಷ ಸಭೆಗಾಗಿ ತಮ್ಮ ಬೇಡಿಕೆಯನ್ನು ಮುಂದಿಡಲು ರಾಜ ಭವನದಲ್ಲಿ ಶುಕ್ರವಾರ ಐದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದರು.

ಸ್ಪೀಕರ್ ಸಿಪಿ ಜೋಶಿ ಅವರನ್ನು ಹೊರತುಪಡಿಸಿ ಗೆಹ್ಲೋಟ್‌ಗೆ 101 ಸದಸ್ಯರ ಬೆಂಬಲವಿದೆ. ಪೈಲಟ್‌ಗೆ 18 ಕಾಂಗ್ರೆಸ್ ಶಾಸಕರು ಮತ್ತು ಮೂವರು ಸ್ವತಂತ್ರರ ಬೆಂಬಲವಿದೆ.

ಬಿಜೆಪಿ ಮತ್ತು ರಾಷ್ಟ್ರ ಲೋಕ್ ತಾಂತ್ರಿಕ್ ಮೈತ್ರಿ ಪಕ್ಷಕ್ಕೆ 75 ಸ್ಥಾನಗಳಿವೆ. ಈ ಮೈತ್ರಿಕೂಟಕ್ಕೆ ಸಚಿನ್ ಪೈಲಟ್‌ ಜೊತೆಗಿರುವ ಶಾಸಕರ ಸಂಖ್ಯೆಯನ್ನು ಸೇರಿಸಿದರೆ, ಅದು ಅವರ ಮೈತ್ರಿ ಪಕ್ಷದ ಶಾಸಕರ ಮೊತ್ತವು 97 ಆಗುತ್ತದೆ.

ಗೆಹ್ಲೋಟ್ ಕಡೆಯಿಂದ ಪೈಲಟ್ ಕಡೆಗೆ ಅಥವಾ ಬಿಜೆಪಿಗೆ ಮೂರು ಸದಸ್ಯರ ಹಾರುವಿಕೆಯು ವಿಶ್ವಾಸ ಮತ ಪರೀಕ್ಷೆಯ ಸಂದರ್ಭದಲ್ಲಿ ಸರ್ಕಾರ ಬೀಳಲು ಕಾರಣವಾಗಬಹುದು ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಅಧಿವೇಶನ ಕರೆಯಲು ವಿಳಂಬ: ಪ್ರಧಾನಿ ನಿವಾಸಕ್ಕೆ ಮುತ್ತಿಗೆ- ಗೆಹ್ಲೋಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...