Homeಮುಖಪುಟಜುಲೈ 31ರಿಂದ ವಿಧಾನಸಭೆ ಅಧಿವೇಶನ ನಡೆಸಿ: ರಾಜ್ಯಪಾಲರಿಗೆ ಹೊಸ ಪ್ರಸ್ತಾಪ ಕಳುಹಿಸಿದ ಗೆಹ್ಲೋಟ್

ಜುಲೈ 31ರಿಂದ ವಿಧಾನಸಭೆ ಅಧಿವೇಶನ ನಡೆಸಿ: ರಾಜ್ಯಪಾಲರಿಗೆ ಹೊಸ ಪ್ರಸ್ತಾಪ ಕಳುಹಿಸಿದ ಗೆಹ್ಲೋಟ್

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಹಲವು ಮಸೂದೆಗಳನ್ನು ಚರ್ಚಿಸಲು ರಾಜ್ಯ ವಿಧಾನಸಭೆಯ ಅಧಿವೇಶನ ಪ್ರಾರಂಭಿಸುವಂತೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯಪಾಲರಾದ ಕಾಳ್‌ರಾಜ್ ಮಿಶ್ರಾ ಅವರಿಗೆ ಮನವಿ ಮಾಡಿದ್ದಾರೆ.

ಆಶ್ಚರ್ಯಕರವಾಗಿ ಬಹುಮತ ಸಾಬೀತುಪಡಿಸುವ ವಿಚಾರವನ್ನು ಕೈಬಿಟ್ಟಿರುವ ಅವರು, ಜುಲೈ 31 ರಿಂದ ರಾಜ್ಯ ವಿಧಾನಸಭೆಯ ಅಧಿವೇಶನವನ್ನು ಪ್ರಾರಂಭಿಸುವಂತೆ ಹೊಸ ಪ್ರಸ್ತಾಪವನ್ನು ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರೊಡನೆ ಹಲವು ಕಾಂಗ್ರೆಸ್ ಶಾಸಕರು ಬಂಡಾಯವೆದ್ದ ನಂತರ ರಾಜಸ್ಥಾನ ಕಾಂಗ್ರೆಸ್ ಸರ್ಕಾರವು ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಕೇಂದ್ರ ಸರ್ಕಾರದ ಒತ್ತಡದಿಂದಾಗಿ ರಾಜ್ಯಪಾಲರು ಅಧಿವೇಶನ ನಡೆಸಲು ವಿಳಂಬ ಮಾಡುತ್ತಿದ್ದಾರೆ ಎಂದು ಗೆಹ್ಲೋಟ್ ಪರ ಶಾಸಕರು ಆರೋಪಿಸಿದ್ದಾರೆ.

ಸದನವನ್ನು ಕರೆಯಲು ಸಾಂವಿಧಾನಿಕ ಮಾನದಂಡಗಳನ್ನು ಅನುಸರಿಸಬೇಕು ಎಂದು ಕಾಳ್‌ರಾಜ್ ಮಿಶ್ರಾ ಈ ಆರೋಪವನ್ನು ನಿರಾಕರಿಸಿದ್ದಾರೆ.

ಅಧಿವೇಶನ ನಡೆಸುವಂತೆ ಈ ಹಿಂದೆ ಕಾಂಗ್ರೆಸ್ ಸರ್ಕಾರ ಕಳುಹಿಸಿದ ಹಲವು ಪ್ರಸ್ತಾಪಗಳನ್ನು ರಾಜ್ಯಪಾಲರು ತಿರಸ್ಕರಿಸಿದ್ದರು. ಕೊರೊನಾ ಸಾಂಕ್ರಾಮಿಕದ ವೇಳೆ ಸದನ ನಡೆಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿದ್ದರು.

ಮುಖ್ಯಮಂತ್ರಿ ಗೆಹ್ಲೋಟ್ ಅವರನ್ನು ಬೆಂಬಲಿಸುವ ಶಾಸಕರು ವಿಶೇಷ ಸಭೆಗಾಗಿ ತಮ್ಮ ಬೇಡಿಕೆಯನ್ನು ಮುಂದಿಡಲು ರಾಜ ಭವನದಲ್ಲಿ ಶುಕ್ರವಾರ ಐದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದರು.

ಸ್ಪೀಕರ್ ಸಿಪಿ ಜೋಶಿ ಅವರನ್ನು ಹೊರತುಪಡಿಸಿ ಗೆಹ್ಲೋಟ್‌ಗೆ 101 ಸದಸ್ಯರ ಬೆಂಬಲವಿದೆ. ಪೈಲಟ್‌ಗೆ 18 ಕಾಂಗ್ರೆಸ್ ಶಾಸಕರು ಮತ್ತು ಮೂವರು ಸ್ವತಂತ್ರರ ಬೆಂಬಲವಿದೆ.

ಬಿಜೆಪಿ ಮತ್ತು ರಾಷ್ಟ್ರ ಲೋಕ್ ತಾಂತ್ರಿಕ್ ಮೈತ್ರಿ ಪಕ್ಷಕ್ಕೆ 75 ಸ್ಥಾನಗಳಿವೆ. ಈ ಮೈತ್ರಿಕೂಟಕ್ಕೆ ಸಚಿನ್ ಪೈಲಟ್‌ ಜೊತೆಗಿರುವ ಶಾಸಕರ ಸಂಖ್ಯೆಯನ್ನು ಸೇರಿಸಿದರೆ, ಅದು ಅವರ ಮೈತ್ರಿ ಪಕ್ಷದ ಶಾಸಕರ ಮೊತ್ತವು 97 ಆಗುತ್ತದೆ.

ಗೆಹ್ಲೋಟ್ ಕಡೆಯಿಂದ ಪೈಲಟ್ ಕಡೆಗೆ ಅಥವಾ ಬಿಜೆಪಿಗೆ ಮೂರು ಸದಸ್ಯರ ಹಾರುವಿಕೆಯು ವಿಶ್ವಾಸ ಮತ ಪರೀಕ್ಷೆಯ ಸಂದರ್ಭದಲ್ಲಿ ಸರ್ಕಾರ ಬೀಳಲು ಕಾರಣವಾಗಬಹುದು ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಅಧಿವೇಶನ ಕರೆಯಲು ವಿಳಂಬ: ಪ್ರಧಾನಿ ನಿವಾಸಕ್ಕೆ ಮುತ್ತಿಗೆ- ಗೆಹ್ಲೋಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...