Homeಮುಖಪುಟಜುಲೈ 31ರಿಂದ ವಿಧಾನಸಭೆ ಅಧಿವೇಶನ ನಡೆಸಿ: ರಾಜ್ಯಪಾಲರಿಗೆ ಹೊಸ ಪ್ರಸ್ತಾಪ ಕಳುಹಿಸಿದ ಗೆಹ್ಲೋಟ್

ಜುಲೈ 31ರಿಂದ ವಿಧಾನಸಭೆ ಅಧಿವೇಶನ ನಡೆಸಿ: ರಾಜ್ಯಪಾಲರಿಗೆ ಹೊಸ ಪ್ರಸ್ತಾಪ ಕಳುಹಿಸಿದ ಗೆಹ್ಲೋಟ್

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಹಲವು ಮಸೂದೆಗಳನ್ನು ಚರ್ಚಿಸಲು ರಾಜ್ಯ ವಿಧಾನಸಭೆಯ ಅಧಿವೇಶನ ಪ್ರಾರಂಭಿಸುವಂತೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯಪಾಲರಾದ ಕಾಳ್‌ರಾಜ್ ಮಿಶ್ರಾ ಅವರಿಗೆ ಮನವಿ ಮಾಡಿದ್ದಾರೆ.

ಆಶ್ಚರ್ಯಕರವಾಗಿ ಬಹುಮತ ಸಾಬೀತುಪಡಿಸುವ ವಿಚಾರವನ್ನು ಕೈಬಿಟ್ಟಿರುವ ಅವರು, ಜುಲೈ 31 ರಿಂದ ರಾಜ್ಯ ವಿಧಾನಸಭೆಯ ಅಧಿವೇಶನವನ್ನು ಪ್ರಾರಂಭಿಸುವಂತೆ ಹೊಸ ಪ್ರಸ್ತಾಪವನ್ನು ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರೊಡನೆ ಹಲವು ಕಾಂಗ್ರೆಸ್ ಶಾಸಕರು ಬಂಡಾಯವೆದ್ದ ನಂತರ ರಾಜಸ್ಥಾನ ಕಾಂಗ್ರೆಸ್ ಸರ್ಕಾರವು ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಕೇಂದ್ರ ಸರ್ಕಾರದ ಒತ್ತಡದಿಂದಾಗಿ ರಾಜ್ಯಪಾಲರು ಅಧಿವೇಶನ ನಡೆಸಲು ವಿಳಂಬ ಮಾಡುತ್ತಿದ್ದಾರೆ ಎಂದು ಗೆಹ್ಲೋಟ್ ಪರ ಶಾಸಕರು ಆರೋಪಿಸಿದ್ದಾರೆ.

ಸದನವನ್ನು ಕರೆಯಲು ಸಾಂವಿಧಾನಿಕ ಮಾನದಂಡಗಳನ್ನು ಅನುಸರಿಸಬೇಕು ಎಂದು ಕಾಳ್‌ರಾಜ್ ಮಿಶ್ರಾ ಈ ಆರೋಪವನ್ನು ನಿರಾಕರಿಸಿದ್ದಾರೆ.

ಅಧಿವೇಶನ ನಡೆಸುವಂತೆ ಈ ಹಿಂದೆ ಕಾಂಗ್ರೆಸ್ ಸರ್ಕಾರ ಕಳುಹಿಸಿದ ಹಲವು ಪ್ರಸ್ತಾಪಗಳನ್ನು ರಾಜ್ಯಪಾಲರು ತಿರಸ್ಕರಿಸಿದ್ದರು. ಕೊರೊನಾ ಸಾಂಕ್ರಾಮಿಕದ ವೇಳೆ ಸದನ ನಡೆಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿದ್ದರು.

ಮುಖ್ಯಮಂತ್ರಿ ಗೆಹ್ಲೋಟ್ ಅವರನ್ನು ಬೆಂಬಲಿಸುವ ಶಾಸಕರು ವಿಶೇಷ ಸಭೆಗಾಗಿ ತಮ್ಮ ಬೇಡಿಕೆಯನ್ನು ಮುಂದಿಡಲು ರಾಜ ಭವನದಲ್ಲಿ ಶುಕ್ರವಾರ ಐದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದರು.

ಸ್ಪೀಕರ್ ಸಿಪಿ ಜೋಶಿ ಅವರನ್ನು ಹೊರತುಪಡಿಸಿ ಗೆಹ್ಲೋಟ್‌ಗೆ 101 ಸದಸ್ಯರ ಬೆಂಬಲವಿದೆ. ಪೈಲಟ್‌ಗೆ 18 ಕಾಂಗ್ರೆಸ್ ಶಾಸಕರು ಮತ್ತು ಮೂವರು ಸ್ವತಂತ್ರರ ಬೆಂಬಲವಿದೆ.

ಬಿಜೆಪಿ ಮತ್ತು ರಾಷ್ಟ್ರ ಲೋಕ್ ತಾಂತ್ರಿಕ್ ಮೈತ್ರಿ ಪಕ್ಷಕ್ಕೆ 75 ಸ್ಥಾನಗಳಿವೆ. ಈ ಮೈತ್ರಿಕೂಟಕ್ಕೆ ಸಚಿನ್ ಪೈಲಟ್‌ ಜೊತೆಗಿರುವ ಶಾಸಕರ ಸಂಖ್ಯೆಯನ್ನು ಸೇರಿಸಿದರೆ, ಅದು ಅವರ ಮೈತ್ರಿ ಪಕ್ಷದ ಶಾಸಕರ ಮೊತ್ತವು 97 ಆಗುತ್ತದೆ.

ಗೆಹ್ಲೋಟ್ ಕಡೆಯಿಂದ ಪೈಲಟ್ ಕಡೆಗೆ ಅಥವಾ ಬಿಜೆಪಿಗೆ ಮೂರು ಸದಸ್ಯರ ಹಾರುವಿಕೆಯು ವಿಶ್ವಾಸ ಮತ ಪರೀಕ್ಷೆಯ ಸಂದರ್ಭದಲ್ಲಿ ಸರ್ಕಾರ ಬೀಳಲು ಕಾರಣವಾಗಬಹುದು ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಅಧಿವೇಶನ ಕರೆಯಲು ವಿಳಂಬ: ಪ್ರಧಾನಿ ನಿವಾಸಕ್ಕೆ ಮುತ್ತಿಗೆ- ಗೆಹ್ಲೋಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...