Homeಮುಖಪುಟಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಆಡಳಿತಾಧಿಕಾರಿಯ ನಿರ್ಧಾರಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು #SaveLakshadweep ಅಭಿಯಾನವು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ.

- Advertisement -
- Advertisement -

ಕೇರಳ ವಿಧಾನಸಭೆಯು ಸೋಮವಾರ ಲಕ್ಷದ್ವೀಪ ದ ಜನರನ್ನು ಬೆಂಬಲಿಸಿ ಉಭಯಪಕ್ಷೀಯ ನಿರ್ಣಯವನ್ನು ಅಂಗೀಕರಿಸಿತು. ಸ್ಥಳೀಯ ಭಾವನೆಗಳನ್ನು ಘಾಸಿಗೊಳಿಸಿ ಕೆಲವು ವಿವಾದಾತ್ಮಕ ಪ್ರಸ್ತಾಪಗಳನ್ನು ಮುಂದಿಡುತ್ತಿರುವ ಆಡಳಿತಾಧಿಕಾರಿ ಪ್ರಫುಲ್ ಕೆ ಪಟೇಲ್ ಅವರನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿದೆ.

ಕೆಲವು ತಿದ್ದುಪಡಿಗಳನ್ನು ಮಂಡಿಸಿದರೂ, ಆಡಳಿತ ಪಕ್ಷದ ಶಾಸಕರೊಂದಿಗೆ ವಿರೋಧ ಪಕ್ಷದ ಶಾಸಕರು ನಿರ್ಣಯದ ಪರವಾಗಿ ಮತ ಚಲಾಯಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯಗಳನ್ನು ಮಂಡಿಸಿದ್ದು, ಲಕ್ಷದ್ವೀಪದ ಆಡಳಿತವು ತನ್ನ ಕೆಲವು ನಿರ್ಧಾರಗಳ ಮೂಲಕ ಸಂಘಪರಿವಾರದ ಕಾರ್ಯಸೂಚಿ ಮತ್ತು ಸಾಂಸ್ಥಿಕ ಹಿತಾಸಕ್ತಿಗಳನ್ನು ಹೇರುವ ಪ್ರಯತ್ನಗಳನ್ನು ನಿರ್ಣಯವು ಖಂಡಿಸಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

“ಇದು ತೆಂಗಿನ ಮರಗಳ ಮೇಲೆ ಕೇಸರಿ ಬಣ್ಣವನ್ನು ಹಚ್ಚುವುದರೊಂದಿಗೆ ಪ್ರಾರಂಭವಾಯಿತು. ಅದು ಈಗ ದ್ವೀಪವಾಸಿಗಳ ಆವಾಸಸ್ಥಾನ, ಜೀವನ ಮತ್ತು ನೈಸರ್ಗಿಕ ಸಂಬಂಧಗಳನ್ನು ನಾಶಪಡಿಸುವ ಮಟ್ಟಿಗೆ ಬೆಳೆದಿದೆ. ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ದ್ವೀಪದಲ್ಲಿ ಹಾಕಿದ ಬ್ಯಾನರ್‌ಗಳನ್ನು ತೆಗೆದುಹಾಕಲಾಯಿತು ಮತ್ತು ಅದನ್ನು ಬರೆದವರನ್ನು ಲಕ್ಷದ್ವೀಪದಲ್ಲಿ ಬಂಧಿಸಲಾಗಿದೆ” ಎಂದು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.

ಕಡಿಮೆ ಪ್ರಮಾಣದಲ್ಲಿ ಅಪರಾಧ ದಾಖಲಾಗುವ ಸ್ಥಳದಲ್ಲಿ ಗೂಂಡಾ ಕಾಯ್ದೆಯನ್ನು ತರುವ ನಿರ್ಧಾರವನ್ನು ಅವರು ಟೀಕಿಸಿದರು. “ದ್ವೀಪದ ಮೀನುಗಾರರು ತಮ್ಮ ದೋಣಿ ಮತ್ತು ಬಲೆಗಳನ್ನು ಸಂಗ್ರಹಿಸಲು ಬಳಸಿದ ಶೆಡ್‌ಗಳನ್ನು ನಾಶಪಡಿಸಲಾಯಿತು. ಗೋಹತ್ಯೆಯನ್ನು ನಿಷೇಧಿಸುವ ‘ಸಂಘ ಪರಿವಾರದ ಕಾರ್ಯಸೂಚಿಯನ್ನು’ ಜಾರಿಗೆ ತಂದರು. ಅಸ್ತಿತ್ವದಲ್ಲಿರುವ ಎಲ್ಲಾ ಪ್ರಜಾಪ್ರಭುತ್ವವನ್ನು ವ್ಯವಸ್ಥೆಯನ್ನಯನ್ನು ರದ್ದುಪಡಿಸಿದರು” ಎಂದು ಹೇಳಿದ್ದಾರೆ.

“ಆಡಳಿತವು ಚುನಾವಣೆಗೆ ಸಂಬಂಧಿಸಿದ ವಿಲಕ್ಷಣ ಆದೇಶವನ್ನೂ ಹೊರತಂದಿದ್ದಾರೆ. ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳಿರುವವರು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿಯಮ ನಮ್ಮ ದೇಶದಲ್ಲಿ ಎಲ್ಲೂ ಇಲ್ಲ. ದ್ವೀಪದಲ್ಲಿ ಅದನ್ನೂ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಪರಿಣಾಮವಾಗಿ, ಬಹುಪಾಲು ದ್ವೀಪವಾಸಿಗಳು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆ” ಎಂದು ಸಿಎಂ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ಸಂಪೂರ್ಣ ಗೋಹತ್ಯೆ ತಡೆಗೆ ಕೇಂದ್ರ ಸರ್ಕಾರದ ಪ್ರಸ್ತಾಪ

ಕೇರಳ ಮತ್ತು ಲಕ್ಷದ್ವೀಪ ದ್ವೀಪಗಳ ನಡುವಿನ ಐತಿಹಾಸಿಕ ಸುದೀರ್ಘ ಸಂಬಂಧವನ್ನು ಮುರಿಯಲು ಆಡಳಿತಾಧಿಕಾರಿ ಮಾಡುತ್ತಿರುವ ಪ್ರಯತ್ನಗಳನ್ನು ಅವರು ಬಲವಾಗಿ ಖಂಡಿಸಿದರು.

“ಇಂದು ಲಕ್ಷದ್ವೀಪದಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಸಂಘ ಪರಿವಾರದ ಕಾರ್ಯಸೂಚಿಯ ಪ್ರಾಯೋಗಿಕ ಪ್ರಯೋಗಾಲಯನ್ನಾಗಿ ಮಾಡುತ್ತಿರುವುದನ್ನು ಗಮನಿಸಬೇಕು. ಅವರು ಜನರ ಸಂಸ್ಕೃತಿ, ಭಾಷೆ, ಜೀವನ ವಿಧಾನ ಮತ್ತು ಆಹಾರವನ್ನು ತಮಗೆ ತಕ್ಕಂತೆ ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಪಿಣರಾಯಿ ಹೇಳಿದ್ದಾರೆ.

ಪ್ರತಿಪಕ್ಷದ ನಾಯಕ ವಿ.ಡಿ.ಸತೀಸನ್ ಮಾತನಾಡಿ, “ನಾವು ಯಾವ ಆಹಾರವನ್ನು ಸೇವಿಸಬಹುದು ಎಂಬುದನ್ನು ಅವರು ನಿರ್ಧರಿಸುವುದು ಸೊಕ್ಕಿನ ನಿಲುವಾಗಿದೆ. ದ್ವೀಪಗಳು ಮತ್ತು ಬೇಪೋರ್ ನಡುವಿನ ಸರಕು ಸಾಗಣೆಯನ್ನು ಮಂಗಳೂರಿಗೆ ವರ್ಗಾಯಿಸಲು ಅವರು ಏಕಪಕ್ಷೀಯವಾಗಿ ನಿರ್ಧರಿಸಿದ್ದಾರೆ. ಇದುವರೆಗೂ ಮದ್ಯ ನಿಶೇಧ ಇದ್ದ ಸ್ಥಳದಲ್ಲಿ ಮದ್ಯಕ್ಕೆ ಅನುಮತಿಲಾಗಿದೆ. ಈ ನಿರ್ಧಾರಗಳು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ತತ್ವಗಳನ್ನು ಬದಿಗಿಟ್ಟು ಏನು ಬೇಕಾದರೂ ಮಾಡಬಹುದು ಎಂದು ಭಾವಿಸುವ ಆಡಳಿತದ ದುರಹಂಕಾರವನ್ನು ಸೂಚಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಕೆಲವು ವಾರಗಳಲ್ಲಿ ಲಕ್ಷದ್ವೀಪದಲ್ಲಿ ಪ್ರತಿಭಟನೆಗಳು ಎದ್ದಿದ್ದು, ಸಾಮಾಜಿಕ ಜಾಲತಾಣದಲ್ಲೂ ಇದು ಪ್ರತಿಧ್ವನಿಸಿದೆ. ಆಡಳಿತಾಧಿಕಾರಿಯ ನಿರ್ಧಾರಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು #SaveLakshadweep ಅಭಿಯಾನವು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ.

ಇದನ್ನೂ ಓದಿ: ಲಕ್ಷದ್ವೀಪದಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಂಗಾಳದಲ್ಲಿ ಮುಂದೆಂದೂ ಸ್ವತಂತ್ರದ ಕಿಚ್ಚು ಏಳಲಾರದು ಎಂದು ಖಂದಿರವಾಗಿ ಹೇಳುವೆ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....