Homeಮುಖಪುಟಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಆಡಳಿತಾಧಿಕಾರಿಯ ನಿರ್ಧಾರಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು #SaveLakshadweep ಅಭಿಯಾನವು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ.

- Advertisement -
- Advertisement -

ಕೇರಳ ವಿಧಾನಸಭೆಯು ಸೋಮವಾರ ಲಕ್ಷದ್ವೀಪ ದ ಜನರನ್ನು ಬೆಂಬಲಿಸಿ ಉಭಯಪಕ್ಷೀಯ ನಿರ್ಣಯವನ್ನು ಅಂಗೀಕರಿಸಿತು. ಸ್ಥಳೀಯ ಭಾವನೆಗಳನ್ನು ಘಾಸಿಗೊಳಿಸಿ ಕೆಲವು ವಿವಾದಾತ್ಮಕ ಪ್ರಸ್ತಾಪಗಳನ್ನು ಮುಂದಿಡುತ್ತಿರುವ ಆಡಳಿತಾಧಿಕಾರಿ ಪ್ರಫುಲ್ ಕೆ ಪಟೇಲ್ ಅವರನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿದೆ.

ಕೆಲವು ತಿದ್ದುಪಡಿಗಳನ್ನು ಮಂಡಿಸಿದರೂ, ಆಡಳಿತ ಪಕ್ಷದ ಶಾಸಕರೊಂದಿಗೆ ವಿರೋಧ ಪಕ್ಷದ ಶಾಸಕರು ನಿರ್ಣಯದ ಪರವಾಗಿ ಮತ ಚಲಾಯಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯಗಳನ್ನು ಮಂಡಿಸಿದ್ದು, ಲಕ್ಷದ್ವೀಪದ ಆಡಳಿತವು ತನ್ನ ಕೆಲವು ನಿರ್ಧಾರಗಳ ಮೂಲಕ ಸಂಘಪರಿವಾರದ ಕಾರ್ಯಸೂಚಿ ಮತ್ತು ಸಾಂಸ್ಥಿಕ ಹಿತಾಸಕ್ತಿಗಳನ್ನು ಹೇರುವ ಪ್ರಯತ್ನಗಳನ್ನು ನಿರ್ಣಯವು ಖಂಡಿಸಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

“ಇದು ತೆಂಗಿನ ಮರಗಳ ಮೇಲೆ ಕೇಸರಿ ಬಣ್ಣವನ್ನು ಹಚ್ಚುವುದರೊಂದಿಗೆ ಪ್ರಾರಂಭವಾಯಿತು. ಅದು ಈಗ ದ್ವೀಪವಾಸಿಗಳ ಆವಾಸಸ್ಥಾನ, ಜೀವನ ಮತ್ತು ನೈಸರ್ಗಿಕ ಸಂಬಂಧಗಳನ್ನು ನಾಶಪಡಿಸುವ ಮಟ್ಟಿಗೆ ಬೆಳೆದಿದೆ. ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ದ್ವೀಪದಲ್ಲಿ ಹಾಕಿದ ಬ್ಯಾನರ್‌ಗಳನ್ನು ತೆಗೆದುಹಾಕಲಾಯಿತು ಮತ್ತು ಅದನ್ನು ಬರೆದವರನ್ನು ಲಕ್ಷದ್ವೀಪದಲ್ಲಿ ಬಂಧಿಸಲಾಗಿದೆ” ಎಂದು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.

ಕಡಿಮೆ ಪ್ರಮಾಣದಲ್ಲಿ ಅಪರಾಧ ದಾಖಲಾಗುವ ಸ್ಥಳದಲ್ಲಿ ಗೂಂಡಾ ಕಾಯ್ದೆಯನ್ನು ತರುವ ನಿರ್ಧಾರವನ್ನು ಅವರು ಟೀಕಿಸಿದರು. “ದ್ವೀಪದ ಮೀನುಗಾರರು ತಮ್ಮ ದೋಣಿ ಮತ್ತು ಬಲೆಗಳನ್ನು ಸಂಗ್ರಹಿಸಲು ಬಳಸಿದ ಶೆಡ್‌ಗಳನ್ನು ನಾಶಪಡಿಸಲಾಯಿತು. ಗೋಹತ್ಯೆಯನ್ನು ನಿಷೇಧಿಸುವ ‘ಸಂಘ ಪರಿವಾರದ ಕಾರ್ಯಸೂಚಿಯನ್ನು’ ಜಾರಿಗೆ ತಂದರು. ಅಸ್ತಿತ್ವದಲ್ಲಿರುವ ಎಲ್ಲಾ ಪ್ರಜಾಪ್ರಭುತ್ವವನ್ನು ವ್ಯವಸ್ಥೆಯನ್ನಯನ್ನು ರದ್ದುಪಡಿಸಿದರು” ಎಂದು ಹೇಳಿದ್ದಾರೆ.

“ಆಡಳಿತವು ಚುನಾವಣೆಗೆ ಸಂಬಂಧಿಸಿದ ವಿಲಕ್ಷಣ ಆದೇಶವನ್ನೂ ಹೊರತಂದಿದ್ದಾರೆ. ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳಿರುವವರು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿಯಮ ನಮ್ಮ ದೇಶದಲ್ಲಿ ಎಲ್ಲೂ ಇಲ್ಲ. ದ್ವೀಪದಲ್ಲಿ ಅದನ್ನೂ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಪರಿಣಾಮವಾಗಿ, ಬಹುಪಾಲು ದ್ವೀಪವಾಸಿಗಳು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆ” ಎಂದು ಸಿಎಂ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ಸಂಪೂರ್ಣ ಗೋಹತ್ಯೆ ತಡೆಗೆ ಕೇಂದ್ರ ಸರ್ಕಾರದ ಪ್ರಸ್ತಾಪ

ಕೇರಳ ಮತ್ತು ಲಕ್ಷದ್ವೀಪ ದ್ವೀಪಗಳ ನಡುವಿನ ಐತಿಹಾಸಿಕ ಸುದೀರ್ಘ ಸಂಬಂಧವನ್ನು ಮುರಿಯಲು ಆಡಳಿತಾಧಿಕಾರಿ ಮಾಡುತ್ತಿರುವ ಪ್ರಯತ್ನಗಳನ್ನು ಅವರು ಬಲವಾಗಿ ಖಂಡಿಸಿದರು.

“ಇಂದು ಲಕ್ಷದ್ವೀಪದಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಸಂಘ ಪರಿವಾರದ ಕಾರ್ಯಸೂಚಿಯ ಪ್ರಾಯೋಗಿಕ ಪ್ರಯೋಗಾಲಯನ್ನಾಗಿ ಮಾಡುತ್ತಿರುವುದನ್ನು ಗಮನಿಸಬೇಕು. ಅವರು ಜನರ ಸಂಸ್ಕೃತಿ, ಭಾಷೆ, ಜೀವನ ವಿಧಾನ ಮತ್ತು ಆಹಾರವನ್ನು ತಮಗೆ ತಕ್ಕಂತೆ ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಪಿಣರಾಯಿ ಹೇಳಿದ್ದಾರೆ.

ಪ್ರತಿಪಕ್ಷದ ನಾಯಕ ವಿ.ಡಿ.ಸತೀಸನ್ ಮಾತನಾಡಿ, “ನಾವು ಯಾವ ಆಹಾರವನ್ನು ಸೇವಿಸಬಹುದು ಎಂಬುದನ್ನು ಅವರು ನಿರ್ಧರಿಸುವುದು ಸೊಕ್ಕಿನ ನಿಲುವಾಗಿದೆ. ದ್ವೀಪಗಳು ಮತ್ತು ಬೇಪೋರ್ ನಡುವಿನ ಸರಕು ಸಾಗಣೆಯನ್ನು ಮಂಗಳೂರಿಗೆ ವರ್ಗಾಯಿಸಲು ಅವರು ಏಕಪಕ್ಷೀಯವಾಗಿ ನಿರ್ಧರಿಸಿದ್ದಾರೆ. ಇದುವರೆಗೂ ಮದ್ಯ ನಿಶೇಧ ಇದ್ದ ಸ್ಥಳದಲ್ಲಿ ಮದ್ಯಕ್ಕೆ ಅನುಮತಿಲಾಗಿದೆ. ಈ ನಿರ್ಧಾರಗಳು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ತತ್ವಗಳನ್ನು ಬದಿಗಿಟ್ಟು ಏನು ಬೇಕಾದರೂ ಮಾಡಬಹುದು ಎಂದು ಭಾವಿಸುವ ಆಡಳಿತದ ದುರಹಂಕಾರವನ್ನು ಸೂಚಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಕೆಲವು ವಾರಗಳಲ್ಲಿ ಲಕ್ಷದ್ವೀಪದಲ್ಲಿ ಪ್ರತಿಭಟನೆಗಳು ಎದ್ದಿದ್ದು, ಸಾಮಾಜಿಕ ಜಾಲತಾಣದಲ್ಲೂ ಇದು ಪ್ರತಿಧ್ವನಿಸಿದೆ. ಆಡಳಿತಾಧಿಕಾರಿಯ ನಿರ್ಧಾರಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು #SaveLakshadweep ಅಭಿಯಾನವು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ.

ಇದನ್ನೂ ಓದಿ: ಲಕ್ಷದ್ವೀಪದಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಂಗಾಳದಲ್ಲಿ ಮುಂದೆಂದೂ ಸ್ವತಂತ್ರದ ಕಿಚ್ಚು ಏಳಲಾರದು ಎಂದು ಖಂದಿರವಾಗಿ ಹೇಳುವೆ.

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...