Homeಮುಖಪುಟಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಿ ಎಂದು ಹೇಳಿದೆ

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಬಿಜೆಪಿಗೆ ಬದ್ಧರಾಗಿದ್ದು, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಬೇಕೆಂದು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಮಹಾವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಪ್ರಮುಖ ಪಕ್ಷವಾದ ಶಿವಸೇನೆ ಕೇಂದ್ರ ಸರ್ಕಾರಕ್ಕೆ ಶನಿವಾರ ಹೇಳಿದೆ.

ಮಹಾ ವಿಕಾಸ್ ಅಘಾಡಿ ಸರ್ಕಾರವು ಸ್ಥಿರ ಮತ್ತು ದೃಡವಾಗಿದೆ ಎಂದು ಪಕ್ಷವು ಪ್ರತಿಪಾದಿಸಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರವನ್ನು ಗುರಿಯಾಗಿಸಲು ರಾಜ್ಯಪಾಲರ ಹೆಗಲನ್ನು ಬಳಸಬಾರದು ಎಂದು ಎಚ್ಚರಿಸಿದೆ.

“ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಕಳೆದ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ಅವರು ಕೇಂದ್ರ ಸಚಿವರಾಗಿದ್ದರು ಮತ್ತು ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದರು. ಆದಾಗ್ಯೂ, ಅವರು ಮಹಾರಾಷ್ಟ್ರ ರಾಜ್ಯಪಾಲರಾದ ನಂತರ ಅವರು ಸುದ್ದಿಯಲ್ಲಿರುತ್ತಾ ವಿವಾದ ಸೃಷ್ಟಿಸುತ್ತಿದ್ದಾರೆ” ಎಂದು ಶಿವಸೇನೆ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಹೇಳಿದೆ.

ಇದನ್ನೂ ಓದಿ: ಅಮಿತ್‌ ಶಾ ಮಹಾರಾಷ್ಟ್ರ ಭೇಟಿ ಬೆನ್ನಲ್ಲೆ BJP ತೊರೆದು ಶಿವಸೇನೆ ಸೇರಿದ 7 ಕೌನ್ಸಿಲರ್‌ಗಳು

“ಅವರು ಯಾಕೆ ಯಾವಾಗಲೂ ವಿವಾದದಲ್ಲಿತ್ತಾರೆ ಎಂಬುದು ಒಂದು ಪ್ರಶ್ನೆಯಾಗಿದೆ. ಇತ್ತೀಚೆಗೆ ಅವರು ರಾಜ್ಯ ಸರ್ಕಾರದ ವಿಮಾನವನ್ನು ಬಳಸಿದ ಬಗ್ಗೆ ಸುದ್ದಿಯಲ್ಲಿದ್ದರು. ರಾಜ್ಯದ ವಿಮಾನವನ್ನು ಬಳಸಿಕೊಂಡು ರಾಜ್ಯಪಾಲರು ಡೆಹ್ರಾಡೂನ್‌ಗೆ ಹೋಗಲು ಬಯಸಿದ್ದರು. ಆದರೆ ಸರ್ಕಾರ ಅದಕ್ಕೆ ಅನುಮತಿ ನಿರಾಕರಿಸಿತು. ಅವರು ಗುರುವಾರ ಬೆಳಿಗ್ಗೆ ವಿಮಾನದಲ್ಲಿ ಕುಳಿತುಕೊಂಡಿದ್ದರು, ಆದರೆ ವಿಮಾನ ಹಾರಾಟಕ್ಕೆ ಅನುಮೋದನೆ ಇಲ್ಲದ ಕಾರಣ, ಅದರಿಂದ ಇಳಿದು ವಾಣಿಜ್ಯ ವಿಮಾನದ ಮೂಲಕ ಡೆಹ್ರಾಡೂನ್‌ಗೆ ಹೊರಡಬೇಕಾಯಿತು” ಎಂದು ಶಿವಸೇನೆ ಹೇಳಿದೆ.

ಈ ಘಟನೆಯನ್ನುಹಿಡಿದುಕೊಂಡು ಪ್ರತಿಪಕ್ಷ ಬಿಜೆಪಿ ಸಮಸ್ಯೆಯನ್ನು ಸೃಷ್ಟಿಸುತ್ತಿದೆ. ಆದರೆ ವಿಮಾನ ಹಾರಾಟಕ್ಕೆ ಸರ್ಕಾರ ಅನುಮೋದನೆ ನೀಡದಿದ್ದರೂ ರಾಜ್ಯಪಾಲರು ವಿಮಾನದಲ್ಲಿ ಏಕೆ ಕುಳಿತುಕೊಂಡರು ಎಂದು ಶಿವಸೇನೆ ಪ್ರಶ್ನಿಸಿದೆ.

ಅದು ರಾಜ್ಯಪಾಲರ ಖಾಸಗಿ ಪ್ರವಾಸವಾಗಿತ್ತು ಮತ್ತು ಕಾನೂನಿನ ಪ್ರಕಾರ ರಾಜ್ಯಪಾಲರು ಮಾತ್ರವಲ್ಲ, ಮುಖ್ಯಮಂತ್ರಿಯೂ ಸಹ ಅಂತಹ ಉದ್ದೇಶಗಳಿಗಾಗಿ ರಾಜ್ಯ ವಿಮಾನವನ್ನು ಬಳಸಬಾರದು. ಮುಖ್ಯಮಂತ್ರಿಗಳ ಕಚೇರಿ (ಸಿಎಮ್‌ಒ) ಯು ಕಾನೂನಿನ ಪ್ರಕಾರ ನಡೆದುಕೊಂಡಿದೆ ಎಂದು ಘಟನೆಯ ಬಗ್ಗೆ ಪಕ್ಷವು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

“ಆದರೆ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ರಾಜ್ಯ ಸರ್ಕಾರವು ಅಹಂಕಾರಿ ಎಂದು ಆರೋಪಿಸಿದ್ದಾರೆ. ಅಹಂಕಾರದ ರಾಜಕೀಯ ಯಾರು ಮಾಡುತ್ತಿದ್ದಾರೆಂದು ಇಡಿ ದೇಶಕ್ಕೆ ತಿಳಿದಿದೆ. ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ 200 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದರೂ, ಸರ್ಕಾರ ಆ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಸಿದ್ಧವಾಗಿಲ್ಲ. ಅದು ಅಹಂಕಾರವಲ್ಲವೆ?” ಎಂದು ಶಿವಸೇನೆ ಪ್ರಶ್ನಿಸಿದೆ.

“ರಾಜ್ಯಪಾಲರು ಅಂದಿನ ಸರ್ಕಾರದ ಕಾರ್ಯಸೂಚಿಯನ್ನು ಅನುಸರಿಸಬೇಕು ಹೊರತು ಪ್ರತಿಪಕ್ಷಗಳಲ್ಲ. ರಾಜ್ಯಪಾಲರು ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ” ಎಂದು ಪಕ್ಷವು ಆರೋಪಿಸಿದ್ದು, ತಮ್ಮ ಕೋಟಾದಿಂದ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ರಾಜ್ಯ ಸಚಿವ ಸಂಪುಟ ಶಿಫಾರಸು ಮಾಡಿದ 12 ಹೆಸರುಗಳನ್ನು ರಾಜ್ಯಪಾಲರು ಅನುಮೋದಿಸುವಲ್ಲಿನ ವಿಳಂಬವನ್ನೂ ಶಿವಸೇನೆ ಟೀಕಿಸಿದೆ.

ಮಹಾರಾಷ್ಟ್ರದ ರಾಜ್ಯಪಾಲರು ಗೌರವಾನ್ವಿತ ವ್ಯಕ್ತಿ. ಆದರೆ ಅವರ ಸ್ಥಾನದ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದು ಅವರ ಸ್ವಂತ ಜವಾಬ್ದಾರಿಯಾಗಿದೆ. ಆದರೆ, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡಲು ಒತ್ತಾಯಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವಾಲಯವು ಸಂವಿಧಾನ, ಕಾನೂನುಗಳು ಮತ್ತು ರೂಡಿಗಳನ್ನು ಎತ್ತಿ ಹಿಡಿಯಬೇಕೆಂದು ಬಯಸಿದರೆ, ರಾಜ್ಯಪಾಲರನ್ನು ವಾಪಾಸು ಕರೆಸಿಕೊಳ್ಳಬೇಕೆಂದು ಎಂದು ಶೀವಸೇನೆ ಹೇಳಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ ಭೇಟಿಯಾಗಿ ಬೆಂಬಲ ಘೋಷಿಸಿದ ಶಿವಸೇನೆಯ ಸಂಜಯ್ ರಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...