Homeಮುಖಪುಟಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಿ ಎಂದು ಹೇಳಿದೆ

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಬಿಜೆಪಿಗೆ ಬದ್ಧರಾಗಿದ್ದು, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಬೇಕೆಂದು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಮಹಾವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಪ್ರಮುಖ ಪಕ್ಷವಾದ ಶಿವಸೇನೆ ಕೇಂದ್ರ ಸರ್ಕಾರಕ್ಕೆ ಶನಿವಾರ ಹೇಳಿದೆ.

ಮಹಾ ವಿಕಾಸ್ ಅಘಾಡಿ ಸರ್ಕಾರವು ಸ್ಥಿರ ಮತ್ತು ದೃಡವಾಗಿದೆ ಎಂದು ಪಕ್ಷವು ಪ್ರತಿಪಾದಿಸಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರವನ್ನು ಗುರಿಯಾಗಿಸಲು ರಾಜ್ಯಪಾಲರ ಹೆಗಲನ್ನು ಬಳಸಬಾರದು ಎಂದು ಎಚ್ಚರಿಸಿದೆ.

“ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಕಳೆದ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ಅವರು ಕೇಂದ್ರ ಸಚಿವರಾಗಿದ್ದರು ಮತ್ತು ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದರು. ಆದಾಗ್ಯೂ, ಅವರು ಮಹಾರಾಷ್ಟ್ರ ರಾಜ್ಯಪಾಲರಾದ ನಂತರ ಅವರು ಸುದ್ದಿಯಲ್ಲಿರುತ್ತಾ ವಿವಾದ ಸೃಷ್ಟಿಸುತ್ತಿದ್ದಾರೆ” ಎಂದು ಶಿವಸೇನೆ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಹೇಳಿದೆ.

ಇದನ್ನೂ ಓದಿ: ಅಮಿತ್‌ ಶಾ ಮಹಾರಾಷ್ಟ್ರ ಭೇಟಿ ಬೆನ್ನಲ್ಲೆ BJP ತೊರೆದು ಶಿವಸೇನೆ ಸೇರಿದ 7 ಕೌನ್ಸಿಲರ್‌ಗಳು

“ಅವರು ಯಾಕೆ ಯಾವಾಗಲೂ ವಿವಾದದಲ್ಲಿತ್ತಾರೆ ಎಂಬುದು ಒಂದು ಪ್ರಶ್ನೆಯಾಗಿದೆ. ಇತ್ತೀಚೆಗೆ ಅವರು ರಾಜ್ಯ ಸರ್ಕಾರದ ವಿಮಾನವನ್ನು ಬಳಸಿದ ಬಗ್ಗೆ ಸುದ್ದಿಯಲ್ಲಿದ್ದರು. ರಾಜ್ಯದ ವಿಮಾನವನ್ನು ಬಳಸಿಕೊಂಡು ರಾಜ್ಯಪಾಲರು ಡೆಹ್ರಾಡೂನ್‌ಗೆ ಹೋಗಲು ಬಯಸಿದ್ದರು. ಆದರೆ ಸರ್ಕಾರ ಅದಕ್ಕೆ ಅನುಮತಿ ನಿರಾಕರಿಸಿತು. ಅವರು ಗುರುವಾರ ಬೆಳಿಗ್ಗೆ ವಿಮಾನದಲ್ಲಿ ಕುಳಿತುಕೊಂಡಿದ್ದರು, ಆದರೆ ವಿಮಾನ ಹಾರಾಟಕ್ಕೆ ಅನುಮೋದನೆ ಇಲ್ಲದ ಕಾರಣ, ಅದರಿಂದ ಇಳಿದು ವಾಣಿಜ್ಯ ವಿಮಾನದ ಮೂಲಕ ಡೆಹ್ರಾಡೂನ್‌ಗೆ ಹೊರಡಬೇಕಾಯಿತು” ಎಂದು ಶಿವಸೇನೆ ಹೇಳಿದೆ.

ಈ ಘಟನೆಯನ್ನುಹಿಡಿದುಕೊಂಡು ಪ್ರತಿಪಕ್ಷ ಬಿಜೆಪಿ ಸಮಸ್ಯೆಯನ್ನು ಸೃಷ್ಟಿಸುತ್ತಿದೆ. ಆದರೆ ವಿಮಾನ ಹಾರಾಟಕ್ಕೆ ಸರ್ಕಾರ ಅನುಮೋದನೆ ನೀಡದಿದ್ದರೂ ರಾಜ್ಯಪಾಲರು ವಿಮಾನದಲ್ಲಿ ಏಕೆ ಕುಳಿತುಕೊಂಡರು ಎಂದು ಶಿವಸೇನೆ ಪ್ರಶ್ನಿಸಿದೆ.

ಅದು ರಾಜ್ಯಪಾಲರ ಖಾಸಗಿ ಪ್ರವಾಸವಾಗಿತ್ತು ಮತ್ತು ಕಾನೂನಿನ ಪ್ರಕಾರ ರಾಜ್ಯಪಾಲರು ಮಾತ್ರವಲ್ಲ, ಮುಖ್ಯಮಂತ್ರಿಯೂ ಸಹ ಅಂತಹ ಉದ್ದೇಶಗಳಿಗಾಗಿ ರಾಜ್ಯ ವಿಮಾನವನ್ನು ಬಳಸಬಾರದು. ಮುಖ್ಯಮಂತ್ರಿಗಳ ಕಚೇರಿ (ಸಿಎಮ್‌ಒ) ಯು ಕಾನೂನಿನ ಪ್ರಕಾರ ನಡೆದುಕೊಂಡಿದೆ ಎಂದು ಘಟನೆಯ ಬಗ್ಗೆ ಪಕ್ಷವು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

“ಆದರೆ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ರಾಜ್ಯ ಸರ್ಕಾರವು ಅಹಂಕಾರಿ ಎಂದು ಆರೋಪಿಸಿದ್ದಾರೆ. ಅಹಂಕಾರದ ರಾಜಕೀಯ ಯಾರು ಮಾಡುತ್ತಿದ್ದಾರೆಂದು ಇಡಿ ದೇಶಕ್ಕೆ ತಿಳಿದಿದೆ. ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ 200 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದರೂ, ಸರ್ಕಾರ ಆ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಸಿದ್ಧವಾಗಿಲ್ಲ. ಅದು ಅಹಂಕಾರವಲ್ಲವೆ?” ಎಂದು ಶಿವಸೇನೆ ಪ್ರಶ್ನಿಸಿದೆ.

“ರಾಜ್ಯಪಾಲರು ಅಂದಿನ ಸರ್ಕಾರದ ಕಾರ್ಯಸೂಚಿಯನ್ನು ಅನುಸರಿಸಬೇಕು ಹೊರತು ಪ್ರತಿಪಕ್ಷಗಳಲ್ಲ. ರಾಜ್ಯಪಾಲರು ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ” ಎಂದು ಪಕ್ಷವು ಆರೋಪಿಸಿದ್ದು, ತಮ್ಮ ಕೋಟಾದಿಂದ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ರಾಜ್ಯ ಸಚಿವ ಸಂಪುಟ ಶಿಫಾರಸು ಮಾಡಿದ 12 ಹೆಸರುಗಳನ್ನು ರಾಜ್ಯಪಾಲರು ಅನುಮೋದಿಸುವಲ್ಲಿನ ವಿಳಂಬವನ್ನೂ ಶಿವಸೇನೆ ಟೀಕಿಸಿದೆ.

ಮಹಾರಾಷ್ಟ್ರದ ರಾಜ್ಯಪಾಲರು ಗೌರವಾನ್ವಿತ ವ್ಯಕ್ತಿ. ಆದರೆ ಅವರ ಸ್ಥಾನದ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದು ಅವರ ಸ್ವಂತ ಜವಾಬ್ದಾರಿಯಾಗಿದೆ. ಆದರೆ, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡಲು ಒತ್ತಾಯಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವಾಲಯವು ಸಂವಿಧಾನ, ಕಾನೂನುಗಳು ಮತ್ತು ರೂಡಿಗಳನ್ನು ಎತ್ತಿ ಹಿಡಿಯಬೇಕೆಂದು ಬಯಸಿದರೆ, ರಾಜ್ಯಪಾಲರನ್ನು ವಾಪಾಸು ಕರೆಸಿಕೊಳ್ಳಬೇಕೆಂದು ಎಂದು ಶೀವಸೇನೆ ಹೇಳಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ ಭೇಟಿಯಾಗಿ ಬೆಂಬಲ ಘೋಷಿಸಿದ ಶಿವಸೇನೆಯ ಸಂಜಯ್ ರಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...