Homeಮುಖಪುಟಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಿ ಎಂದು ಹೇಳಿದೆ

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಬಿಜೆಪಿಗೆ ಬದ್ಧರಾಗಿದ್ದು, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಬೇಕೆಂದು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಮಹಾವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಪ್ರಮುಖ ಪಕ್ಷವಾದ ಶಿವಸೇನೆ ಕೇಂದ್ರ ಸರ್ಕಾರಕ್ಕೆ ಶನಿವಾರ ಹೇಳಿದೆ.

ಮಹಾ ವಿಕಾಸ್ ಅಘಾಡಿ ಸರ್ಕಾರವು ಸ್ಥಿರ ಮತ್ತು ದೃಡವಾಗಿದೆ ಎಂದು ಪಕ್ಷವು ಪ್ರತಿಪಾದಿಸಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರವನ್ನು ಗುರಿಯಾಗಿಸಲು ರಾಜ್ಯಪಾಲರ ಹೆಗಲನ್ನು ಬಳಸಬಾರದು ಎಂದು ಎಚ್ಚರಿಸಿದೆ.

“ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಕಳೆದ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ಅವರು ಕೇಂದ್ರ ಸಚಿವರಾಗಿದ್ದರು ಮತ್ತು ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದರು. ಆದಾಗ್ಯೂ, ಅವರು ಮಹಾರಾಷ್ಟ್ರ ರಾಜ್ಯಪಾಲರಾದ ನಂತರ ಅವರು ಸುದ್ದಿಯಲ್ಲಿರುತ್ತಾ ವಿವಾದ ಸೃಷ್ಟಿಸುತ್ತಿದ್ದಾರೆ” ಎಂದು ಶಿವಸೇನೆ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಹೇಳಿದೆ.

ಇದನ್ನೂ ಓದಿ: ಅಮಿತ್‌ ಶಾ ಮಹಾರಾಷ್ಟ್ರ ಭೇಟಿ ಬೆನ್ನಲ್ಲೆ BJP ತೊರೆದು ಶಿವಸೇನೆ ಸೇರಿದ 7 ಕೌನ್ಸಿಲರ್‌ಗಳು

“ಅವರು ಯಾಕೆ ಯಾವಾಗಲೂ ವಿವಾದದಲ್ಲಿತ್ತಾರೆ ಎಂಬುದು ಒಂದು ಪ್ರಶ್ನೆಯಾಗಿದೆ. ಇತ್ತೀಚೆಗೆ ಅವರು ರಾಜ್ಯ ಸರ್ಕಾರದ ವಿಮಾನವನ್ನು ಬಳಸಿದ ಬಗ್ಗೆ ಸುದ್ದಿಯಲ್ಲಿದ್ದರು. ರಾಜ್ಯದ ವಿಮಾನವನ್ನು ಬಳಸಿಕೊಂಡು ರಾಜ್ಯಪಾಲರು ಡೆಹ್ರಾಡೂನ್‌ಗೆ ಹೋಗಲು ಬಯಸಿದ್ದರು. ಆದರೆ ಸರ್ಕಾರ ಅದಕ್ಕೆ ಅನುಮತಿ ನಿರಾಕರಿಸಿತು. ಅವರು ಗುರುವಾರ ಬೆಳಿಗ್ಗೆ ವಿಮಾನದಲ್ಲಿ ಕುಳಿತುಕೊಂಡಿದ್ದರು, ಆದರೆ ವಿಮಾನ ಹಾರಾಟಕ್ಕೆ ಅನುಮೋದನೆ ಇಲ್ಲದ ಕಾರಣ, ಅದರಿಂದ ಇಳಿದು ವಾಣಿಜ್ಯ ವಿಮಾನದ ಮೂಲಕ ಡೆಹ್ರಾಡೂನ್‌ಗೆ ಹೊರಡಬೇಕಾಯಿತು” ಎಂದು ಶಿವಸೇನೆ ಹೇಳಿದೆ.

ಈ ಘಟನೆಯನ್ನುಹಿಡಿದುಕೊಂಡು ಪ್ರತಿಪಕ್ಷ ಬಿಜೆಪಿ ಸಮಸ್ಯೆಯನ್ನು ಸೃಷ್ಟಿಸುತ್ತಿದೆ. ಆದರೆ ವಿಮಾನ ಹಾರಾಟಕ್ಕೆ ಸರ್ಕಾರ ಅನುಮೋದನೆ ನೀಡದಿದ್ದರೂ ರಾಜ್ಯಪಾಲರು ವಿಮಾನದಲ್ಲಿ ಏಕೆ ಕುಳಿತುಕೊಂಡರು ಎಂದು ಶಿವಸೇನೆ ಪ್ರಶ್ನಿಸಿದೆ.

ಅದು ರಾಜ್ಯಪಾಲರ ಖಾಸಗಿ ಪ್ರವಾಸವಾಗಿತ್ತು ಮತ್ತು ಕಾನೂನಿನ ಪ್ರಕಾರ ರಾಜ್ಯಪಾಲರು ಮಾತ್ರವಲ್ಲ, ಮುಖ್ಯಮಂತ್ರಿಯೂ ಸಹ ಅಂತಹ ಉದ್ದೇಶಗಳಿಗಾಗಿ ರಾಜ್ಯ ವಿಮಾನವನ್ನು ಬಳಸಬಾರದು. ಮುಖ್ಯಮಂತ್ರಿಗಳ ಕಚೇರಿ (ಸಿಎಮ್‌ಒ) ಯು ಕಾನೂನಿನ ಪ್ರಕಾರ ನಡೆದುಕೊಂಡಿದೆ ಎಂದು ಘಟನೆಯ ಬಗ್ಗೆ ಪಕ್ಷವು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

“ಆದರೆ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ರಾಜ್ಯ ಸರ್ಕಾರವು ಅಹಂಕಾರಿ ಎಂದು ಆರೋಪಿಸಿದ್ದಾರೆ. ಅಹಂಕಾರದ ರಾಜಕೀಯ ಯಾರು ಮಾಡುತ್ತಿದ್ದಾರೆಂದು ಇಡಿ ದೇಶಕ್ಕೆ ತಿಳಿದಿದೆ. ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ 200 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದರೂ, ಸರ್ಕಾರ ಆ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಸಿದ್ಧವಾಗಿಲ್ಲ. ಅದು ಅಹಂಕಾರವಲ್ಲವೆ?” ಎಂದು ಶಿವಸೇನೆ ಪ್ರಶ್ನಿಸಿದೆ.

“ರಾಜ್ಯಪಾಲರು ಅಂದಿನ ಸರ್ಕಾರದ ಕಾರ್ಯಸೂಚಿಯನ್ನು ಅನುಸರಿಸಬೇಕು ಹೊರತು ಪ್ರತಿಪಕ್ಷಗಳಲ್ಲ. ರಾಜ್ಯಪಾಲರು ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ” ಎಂದು ಪಕ್ಷವು ಆರೋಪಿಸಿದ್ದು, ತಮ್ಮ ಕೋಟಾದಿಂದ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ರಾಜ್ಯ ಸಚಿವ ಸಂಪುಟ ಶಿಫಾರಸು ಮಾಡಿದ 12 ಹೆಸರುಗಳನ್ನು ರಾಜ್ಯಪಾಲರು ಅನುಮೋದಿಸುವಲ್ಲಿನ ವಿಳಂಬವನ್ನೂ ಶಿವಸೇನೆ ಟೀಕಿಸಿದೆ.

ಮಹಾರಾಷ್ಟ್ರದ ರಾಜ್ಯಪಾಲರು ಗೌರವಾನ್ವಿತ ವ್ಯಕ್ತಿ. ಆದರೆ ಅವರ ಸ್ಥಾನದ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದು ಅವರ ಸ್ವಂತ ಜವಾಬ್ದಾರಿಯಾಗಿದೆ. ಆದರೆ, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡಲು ಒತ್ತಾಯಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವಾಲಯವು ಸಂವಿಧಾನ, ಕಾನೂನುಗಳು ಮತ್ತು ರೂಡಿಗಳನ್ನು ಎತ್ತಿ ಹಿಡಿಯಬೇಕೆಂದು ಬಯಸಿದರೆ, ರಾಜ್ಯಪಾಲರನ್ನು ವಾಪಾಸು ಕರೆಸಿಕೊಳ್ಳಬೇಕೆಂದು ಎಂದು ಶೀವಸೇನೆ ಹೇಳಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ ಭೇಟಿಯಾಗಿ ಬೆಂಬಲ ಘೋಷಿಸಿದ ಶಿವಸೇನೆಯ ಸಂಜಯ್ ರಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...