Homeಮುಖಪುಟಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಿ ಎಂದು ಹೇಳಿದೆ

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಬಿಜೆಪಿಗೆ ಬದ್ಧರಾಗಿದ್ದು, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಬೇಕೆಂದು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಮಹಾವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಪ್ರಮುಖ ಪಕ್ಷವಾದ ಶಿವಸೇನೆ ಕೇಂದ್ರ ಸರ್ಕಾರಕ್ಕೆ ಶನಿವಾರ ಹೇಳಿದೆ.

ಮಹಾ ವಿಕಾಸ್ ಅಘಾಡಿ ಸರ್ಕಾರವು ಸ್ಥಿರ ಮತ್ತು ದೃಡವಾಗಿದೆ ಎಂದು ಪಕ್ಷವು ಪ್ರತಿಪಾದಿಸಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರವನ್ನು ಗುರಿಯಾಗಿಸಲು ರಾಜ್ಯಪಾಲರ ಹೆಗಲನ್ನು ಬಳಸಬಾರದು ಎಂದು ಎಚ್ಚರಿಸಿದೆ.

“ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಕಳೆದ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ಅವರು ಕೇಂದ್ರ ಸಚಿವರಾಗಿದ್ದರು ಮತ್ತು ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದರು. ಆದಾಗ್ಯೂ, ಅವರು ಮಹಾರಾಷ್ಟ್ರ ರಾಜ್ಯಪಾಲರಾದ ನಂತರ ಅವರು ಸುದ್ದಿಯಲ್ಲಿರುತ್ತಾ ವಿವಾದ ಸೃಷ್ಟಿಸುತ್ತಿದ್ದಾರೆ” ಎಂದು ಶಿವಸೇನೆ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಹೇಳಿದೆ.

ಇದನ್ನೂ ಓದಿ: ಅಮಿತ್‌ ಶಾ ಮಹಾರಾಷ್ಟ್ರ ಭೇಟಿ ಬೆನ್ನಲ್ಲೆ BJP ತೊರೆದು ಶಿವಸೇನೆ ಸೇರಿದ 7 ಕೌನ್ಸಿಲರ್‌ಗಳು

“ಅವರು ಯಾಕೆ ಯಾವಾಗಲೂ ವಿವಾದದಲ್ಲಿತ್ತಾರೆ ಎಂಬುದು ಒಂದು ಪ್ರಶ್ನೆಯಾಗಿದೆ. ಇತ್ತೀಚೆಗೆ ಅವರು ರಾಜ್ಯ ಸರ್ಕಾರದ ವಿಮಾನವನ್ನು ಬಳಸಿದ ಬಗ್ಗೆ ಸುದ್ದಿಯಲ್ಲಿದ್ದರು. ರಾಜ್ಯದ ವಿಮಾನವನ್ನು ಬಳಸಿಕೊಂಡು ರಾಜ್ಯಪಾಲರು ಡೆಹ್ರಾಡೂನ್‌ಗೆ ಹೋಗಲು ಬಯಸಿದ್ದರು. ಆದರೆ ಸರ್ಕಾರ ಅದಕ್ಕೆ ಅನುಮತಿ ನಿರಾಕರಿಸಿತು. ಅವರು ಗುರುವಾರ ಬೆಳಿಗ್ಗೆ ವಿಮಾನದಲ್ಲಿ ಕುಳಿತುಕೊಂಡಿದ್ದರು, ಆದರೆ ವಿಮಾನ ಹಾರಾಟಕ್ಕೆ ಅನುಮೋದನೆ ಇಲ್ಲದ ಕಾರಣ, ಅದರಿಂದ ಇಳಿದು ವಾಣಿಜ್ಯ ವಿಮಾನದ ಮೂಲಕ ಡೆಹ್ರಾಡೂನ್‌ಗೆ ಹೊರಡಬೇಕಾಯಿತು” ಎಂದು ಶಿವಸೇನೆ ಹೇಳಿದೆ.

ಈ ಘಟನೆಯನ್ನುಹಿಡಿದುಕೊಂಡು ಪ್ರತಿಪಕ್ಷ ಬಿಜೆಪಿ ಸಮಸ್ಯೆಯನ್ನು ಸೃಷ್ಟಿಸುತ್ತಿದೆ. ಆದರೆ ವಿಮಾನ ಹಾರಾಟಕ್ಕೆ ಸರ್ಕಾರ ಅನುಮೋದನೆ ನೀಡದಿದ್ದರೂ ರಾಜ್ಯಪಾಲರು ವಿಮಾನದಲ್ಲಿ ಏಕೆ ಕುಳಿತುಕೊಂಡರು ಎಂದು ಶಿವಸೇನೆ ಪ್ರಶ್ನಿಸಿದೆ.

ಅದು ರಾಜ್ಯಪಾಲರ ಖಾಸಗಿ ಪ್ರವಾಸವಾಗಿತ್ತು ಮತ್ತು ಕಾನೂನಿನ ಪ್ರಕಾರ ರಾಜ್ಯಪಾಲರು ಮಾತ್ರವಲ್ಲ, ಮುಖ್ಯಮಂತ್ರಿಯೂ ಸಹ ಅಂತಹ ಉದ್ದೇಶಗಳಿಗಾಗಿ ರಾಜ್ಯ ವಿಮಾನವನ್ನು ಬಳಸಬಾರದು. ಮುಖ್ಯಮಂತ್ರಿಗಳ ಕಚೇರಿ (ಸಿಎಮ್‌ಒ) ಯು ಕಾನೂನಿನ ಪ್ರಕಾರ ನಡೆದುಕೊಂಡಿದೆ ಎಂದು ಘಟನೆಯ ಬಗ್ಗೆ ಪಕ್ಷವು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

“ಆದರೆ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ರಾಜ್ಯ ಸರ್ಕಾರವು ಅಹಂಕಾರಿ ಎಂದು ಆರೋಪಿಸಿದ್ದಾರೆ. ಅಹಂಕಾರದ ರಾಜಕೀಯ ಯಾರು ಮಾಡುತ್ತಿದ್ದಾರೆಂದು ಇಡಿ ದೇಶಕ್ಕೆ ತಿಳಿದಿದೆ. ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ 200 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದರೂ, ಸರ್ಕಾರ ಆ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಸಿದ್ಧವಾಗಿಲ್ಲ. ಅದು ಅಹಂಕಾರವಲ್ಲವೆ?” ಎಂದು ಶಿವಸೇನೆ ಪ್ರಶ್ನಿಸಿದೆ.

“ರಾಜ್ಯಪಾಲರು ಅಂದಿನ ಸರ್ಕಾರದ ಕಾರ್ಯಸೂಚಿಯನ್ನು ಅನುಸರಿಸಬೇಕು ಹೊರತು ಪ್ರತಿಪಕ್ಷಗಳಲ್ಲ. ರಾಜ್ಯಪಾಲರು ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ” ಎಂದು ಪಕ್ಷವು ಆರೋಪಿಸಿದ್ದು, ತಮ್ಮ ಕೋಟಾದಿಂದ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ರಾಜ್ಯ ಸಚಿವ ಸಂಪುಟ ಶಿಫಾರಸು ಮಾಡಿದ 12 ಹೆಸರುಗಳನ್ನು ರಾಜ್ಯಪಾಲರು ಅನುಮೋದಿಸುವಲ್ಲಿನ ವಿಳಂಬವನ್ನೂ ಶಿವಸೇನೆ ಟೀಕಿಸಿದೆ.

ಮಹಾರಾಷ್ಟ್ರದ ರಾಜ್ಯಪಾಲರು ಗೌರವಾನ್ವಿತ ವ್ಯಕ್ತಿ. ಆದರೆ ಅವರ ಸ್ಥಾನದ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದು ಅವರ ಸ್ವಂತ ಜವಾಬ್ದಾರಿಯಾಗಿದೆ. ಆದರೆ, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡಲು ಒತ್ತಾಯಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವಾಲಯವು ಸಂವಿಧಾನ, ಕಾನೂನುಗಳು ಮತ್ತು ರೂಡಿಗಳನ್ನು ಎತ್ತಿ ಹಿಡಿಯಬೇಕೆಂದು ಬಯಸಿದರೆ, ರಾಜ್ಯಪಾಲರನ್ನು ವಾಪಾಸು ಕರೆಸಿಕೊಳ್ಳಬೇಕೆಂದು ಎಂದು ಶೀವಸೇನೆ ಹೇಳಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ ಭೇಟಿಯಾಗಿ ಬೆಂಬಲ ಘೋಷಿಸಿದ ಶಿವಸೇನೆಯ ಸಂಜಯ್ ರಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...