Homeಕರ್ನಾಟಕಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಕೇಸರಿ ಶಾಲು- ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಖಂಡಿಸಿದೆ.

- Advertisement -
- Advertisement -

ಕೇಸರಿ ಶಾಲು- ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಂ.ಎಲ್‌.ಪರಶುರಾಮ್ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು, ಇತ್ತೀಚಿನ ವಿದ್ಯಮಾನಗಳನ್ನು ಗಮನಿಸುತ್ತಿದೆ. ಮಕ್ಕಳ ನಡುವೆ ನಡೆಯುತ್ತಿರುವ ಸಂಘರ್ಷಗಳನ್ನು ಆಯೋಗವು ಗಮನಿಸುತ್ತಿದ್ದು, ಮಕ್ಕಳ ವಿಚಾರದಲ್ಲಿ ಇದು ಸರಿಯಲ್ಲ ಎಂದು ಆಯೋಗವು ತಿಳಿ-ಹೇಳಲು ಇಚ್ಛಿಸುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣವು ಇದ್ದಾಗಿಯೂ ಕೂಡ, ಕೆಲವರು ಮಕ್ಕಳ ಹಿತಾಸಕ್ತಿಯನ್ನೇ ಮರೆತಿರುವುದು ವಿಷಾದನೀಯ. ಮಕ್ಕಳ ಇಚ್ಚೆಗೆ ವಿರುದ್ಧವಾಗಿ ಅವರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು, ಪ್ರಚೋದನಕಾರಿಯಾದ ಅಂತಹ ಮಾತುಗಳನ್ನು ಮಕ್ಕಳ ಮೆದುಳಿಗೆ ರವಾನಿಸಿ ಮಕ್ಕಳ ಬಾಯಿಂದ ಹೇಳಿಸುವುದು ಅಕ್ಷಮ್ಯ ಎಂದಿದ್ದಾರೆ.

ಈ ಮೇಲ್ಕಂಡ ವಿಚಾರಕ್ಕೆ ಪೂರಕವಾಗಿ ಬಾಲನ್ಯಾಯ ಕಾಯ್ದೆ ಸ್ಪಷ್ಟ ಉಲ್ಲಂಘನೆಯಾಗಿದೆ. ಬಾಲನ್ಯಾಯ ಕಾಯ್ದೆ 2015ರ ಅನ್ವಯ, ಮಕ್ಕಳ ಪಾಲನೆ ಮತ್ತು ಸಂರಕ್ಷಣೆಯನ್ನು ಶಾಲೆಗಳಲ್ಲಿ, ಸಂಸ್ಥೆಗಳಲ್ಲಿ ಮಾಡುವುದು ಆದ್ಯ ಕರ್ತವ್ಯವಾಗಿದೆ. ಬಾಲನ್ಯಾಯ ಕಾಯ್ದೆ ಕಾಲಂ 9ರಲ್ಲಿ ಹೇಳಿರುವಂತೆ ಮಗುವಿನ ಅತ್ಯುತ್ತಮ ಹಿತಾಶಕ್ತಿಯನ್ನು ಕಾಪಾಡುವುದರ ಜೊತೆಗೆ ಮಗುವಿನ ಮೂಲಭೂತ ಹಕ್ಕುಗಳು ಉಲ್ಲಂಘನೆ ಆಗಕೂಡದು. ಹಾಗೆಯೇ ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 14(x)ರ ಪ್ರಕಾರ ಮಗುವಿನ ಸಂರಕ್ಷಣೆಯನ್ನು ಅನೀತಿಯ ಲಾಭಕ್ಕಾಗಿ ಮಗುವನ್ನು ಹಿಂಸೆಗೆ ಒಳಪಡಿಸಬಾರದು ಎಂದು ಎಚ್ಚರಿಸಿದ್ದಾರೆ.

ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 15ರ ಅನ್ವಯ ಶಿಶು – ಸ್ನೇಹ ( child friendly ) ರೀತಿಯಲ್ಲಿ ಶಾಲೆಗಳು ಇರಬೇಕಾಗಿದೆ. ಅಭ್ಯಾಸ, ನಡತೆ, ನಡವಳಿಕೆ, ಮನಪ್ರವೃತ್ತಿ, ಹೊಂದಿಕೊಳ್ಳುವ ಪರಿಸರ ವ್ಯವಸ್ಥೆಯನ್ನು ಮಗುವಿಗೆ ನೀಡುವ ರೀತಿಯಲ್ಲಿ ವ್ಯವಸ್ಥೆಗಳು ಕಾರ್ಯನಿರ್ವಹಿಸಬೇಕಾಗಿದೆ. ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 76 (1) ಮಗುವಿಗೆ ಕಿರುಕುಳ ಅಥವಾ ಶೋಷಣೆ ಉಂಟು ಮಾಡಬಾರದೆಂದು ತಿಳಿಸುತ್ತದೆ. ಮಕ್ಕಳು ಶಾಲೆಗೆ ಹೋಗುವುದಕ್ಕೆ ಭಯದ ವಾತಾವರಣ ನಿರ್ಮಾಣವಾಗಿರುವುದು ಭಾರತದ ಸಂಸ್ಕೃತಿಗೆ ಶೋಭೆ ತರುವಂತದ್ದಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತೊಡುವ ಬಟ್ಟೆಗಳಿಗಿಂತ, ಉಣ್ಣುವ ತಟ್ಟೆಗಳು ಬರಿದಾಗಿ, ಹಸಿದ ಹೊಟ್ಟೆಯಿಂದ ಬರುವ ಮಕ್ಕಳ ಯೋಗ-ಕ್ಷೇಮವನ್ನು ನಾಗರಿಕ ಪ್ರಜ್ಞೆಯೊಡನೆ ಸರ್ವರು ತತಕ್ಷಣ ನೋಡಬೇಕಾಗಿದೆ. ಪಳಪಳ ಒಳೆಯುವ ಬೂಟುಗಳು, ಇಸ್ತ್ರಿ ತೀಡಿದ ಬಟ್ಟೆಗಳು, ವಾಹನದಲ್ಲಿ ಶಾಲೆಗೆ ಬಂದು ಹಿಂತಿರುಗುವ ವಿದ್ಯಾರ್ಥಿಗಳು, ಪ್ರತಿಯೊಂದು ಶಾಲೆಯಲ್ಲೂ ಭಿನ್ನ- ಭಿನ್ನ ವಸ್ತ್ರಸಂಹಿತೆ ಇರುವಾಗ, ಮಕ್ಕಳು ತಮಗಿಷ್ಟವಾದ್ದದನ್ನು ತೋಡುತ್ತಿರುವಾಗ ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗಿಯೂ ವಿನಾಕಾರಣ, ಇದುವರೆಗೂ ಇಲ್ಲದ ಭಿನ್ನ ಕಾರಣಗಳನ್ನು ಮಕ್ಕಳ ವಿಷಯದಲ್ಲಿ ನೋಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೊಹಮ್ಮದ್ ಪೈಗಂಬರ್, ಕ್ರೈಸ್ತ, ಕೃಷ್ಣ, ರಾಮನ ವಿಚಾರಗಳು ಪಠ್ಯದಲ್ಲಿ ತತ್ವಗಳು ಆಗಿರುವಾಗ, ವಿವಿಧತೆಯಲ್ಲಿ ಏಕತೆಯಿಂದ ನಾವು ಸಮಬಾಳ್ವೆಯ ಸಮಾನತೆಯಿಂದ ಬಾಳಬೇಕಾಗಿದೆ. ಮಕ್ಕಳ ಮೇಲೆ ನಡೆಯುವ ಶೋಷಣೆಯ ವಿಚಾರಕ್ಕೆ ಸಂಬಂಧಿಸಿದಂತೆ , ಮಕ್ಕಳ ಹಕ್ಕುಗಳ ಉಲ್ಲಂಘನೆ ವಿಚಾರದಲ್ಲಾಗಲಿ, ಮಕ್ಕಳಿಗೆ ಸಂಬಂಧಿಸಿದ ವಿಚಾರಕ್ಕೆ ಪೂರಕವಾದ ವಿಷಯಗಳು ಇದ್ದರೆ ಮಕ್ಕಳ ಸಹಾಯವಾಣಿ-1098 ಕರೆಮಾಡಿ ತಿಳಿಸುವುದು, ಆಯಾ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಮಾಹಿತಿ ತಿಳಿಸುವುದು, ಜಿಲ್ಲೆಯ ವಿಶೇಷ ಪೊಲೀಸ್ ಘಟಕಕ್ಕೆ ಮಾಹಿತಿ ರವಾನಿಸಬೇಕು ಎಂದು ಈ ಮೂಲಕ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯನಾಗಿ ತಿಳಿಸುತ್ತೇನೆ ಎಂದು ಅವರು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ.

ಈ ಪ್ರತಿಯನ್ನು ಆಯೋಗದ ಅಧ್ಯಕ್ಷರಿಗೆ ಹಾಗೂ ಕಾರ್ಯದರ್ಶಿಯವರಿಗೆ ಲಗತ್ತಿಸಿದ್ದಾರೆ.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...