Homeಕರ್ನಾಟಕಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಕೇಸರಿ ಶಾಲು- ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಖಂಡಿಸಿದೆ.

- Advertisement -
- Advertisement -

ಕೇಸರಿ ಶಾಲು- ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಂ.ಎಲ್‌.ಪರಶುರಾಮ್ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು, ಇತ್ತೀಚಿನ ವಿದ್ಯಮಾನಗಳನ್ನು ಗಮನಿಸುತ್ತಿದೆ. ಮಕ್ಕಳ ನಡುವೆ ನಡೆಯುತ್ತಿರುವ ಸಂಘರ್ಷಗಳನ್ನು ಆಯೋಗವು ಗಮನಿಸುತ್ತಿದ್ದು, ಮಕ್ಕಳ ವಿಚಾರದಲ್ಲಿ ಇದು ಸರಿಯಲ್ಲ ಎಂದು ಆಯೋಗವು ತಿಳಿ-ಹೇಳಲು ಇಚ್ಛಿಸುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣವು ಇದ್ದಾಗಿಯೂ ಕೂಡ, ಕೆಲವರು ಮಕ್ಕಳ ಹಿತಾಸಕ್ತಿಯನ್ನೇ ಮರೆತಿರುವುದು ವಿಷಾದನೀಯ. ಮಕ್ಕಳ ಇಚ್ಚೆಗೆ ವಿರುದ್ಧವಾಗಿ ಅವರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು, ಪ್ರಚೋದನಕಾರಿಯಾದ ಅಂತಹ ಮಾತುಗಳನ್ನು ಮಕ್ಕಳ ಮೆದುಳಿಗೆ ರವಾನಿಸಿ ಮಕ್ಕಳ ಬಾಯಿಂದ ಹೇಳಿಸುವುದು ಅಕ್ಷಮ್ಯ ಎಂದಿದ್ದಾರೆ.

ಈ ಮೇಲ್ಕಂಡ ವಿಚಾರಕ್ಕೆ ಪೂರಕವಾಗಿ ಬಾಲನ್ಯಾಯ ಕಾಯ್ದೆ ಸ್ಪಷ್ಟ ಉಲ್ಲಂಘನೆಯಾಗಿದೆ. ಬಾಲನ್ಯಾಯ ಕಾಯ್ದೆ 2015ರ ಅನ್ವಯ, ಮಕ್ಕಳ ಪಾಲನೆ ಮತ್ತು ಸಂರಕ್ಷಣೆಯನ್ನು ಶಾಲೆಗಳಲ್ಲಿ, ಸಂಸ್ಥೆಗಳಲ್ಲಿ ಮಾಡುವುದು ಆದ್ಯ ಕರ್ತವ್ಯವಾಗಿದೆ. ಬಾಲನ್ಯಾಯ ಕಾಯ್ದೆ ಕಾಲಂ 9ರಲ್ಲಿ ಹೇಳಿರುವಂತೆ ಮಗುವಿನ ಅತ್ಯುತ್ತಮ ಹಿತಾಶಕ್ತಿಯನ್ನು ಕಾಪಾಡುವುದರ ಜೊತೆಗೆ ಮಗುವಿನ ಮೂಲಭೂತ ಹಕ್ಕುಗಳು ಉಲ್ಲಂಘನೆ ಆಗಕೂಡದು. ಹಾಗೆಯೇ ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 14(x)ರ ಪ್ರಕಾರ ಮಗುವಿನ ಸಂರಕ್ಷಣೆಯನ್ನು ಅನೀತಿಯ ಲಾಭಕ್ಕಾಗಿ ಮಗುವನ್ನು ಹಿಂಸೆಗೆ ಒಳಪಡಿಸಬಾರದು ಎಂದು ಎಚ್ಚರಿಸಿದ್ದಾರೆ.

ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 15ರ ಅನ್ವಯ ಶಿಶು – ಸ್ನೇಹ ( child friendly ) ರೀತಿಯಲ್ಲಿ ಶಾಲೆಗಳು ಇರಬೇಕಾಗಿದೆ. ಅಭ್ಯಾಸ, ನಡತೆ, ನಡವಳಿಕೆ, ಮನಪ್ರವೃತ್ತಿ, ಹೊಂದಿಕೊಳ್ಳುವ ಪರಿಸರ ವ್ಯವಸ್ಥೆಯನ್ನು ಮಗುವಿಗೆ ನೀಡುವ ರೀತಿಯಲ್ಲಿ ವ್ಯವಸ್ಥೆಗಳು ಕಾರ್ಯನಿರ್ವಹಿಸಬೇಕಾಗಿದೆ. ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 76 (1) ಮಗುವಿಗೆ ಕಿರುಕುಳ ಅಥವಾ ಶೋಷಣೆ ಉಂಟು ಮಾಡಬಾರದೆಂದು ತಿಳಿಸುತ್ತದೆ. ಮಕ್ಕಳು ಶಾಲೆಗೆ ಹೋಗುವುದಕ್ಕೆ ಭಯದ ವಾತಾವರಣ ನಿರ್ಮಾಣವಾಗಿರುವುದು ಭಾರತದ ಸಂಸ್ಕೃತಿಗೆ ಶೋಭೆ ತರುವಂತದ್ದಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತೊಡುವ ಬಟ್ಟೆಗಳಿಗಿಂತ, ಉಣ್ಣುವ ತಟ್ಟೆಗಳು ಬರಿದಾಗಿ, ಹಸಿದ ಹೊಟ್ಟೆಯಿಂದ ಬರುವ ಮಕ್ಕಳ ಯೋಗ-ಕ್ಷೇಮವನ್ನು ನಾಗರಿಕ ಪ್ರಜ್ಞೆಯೊಡನೆ ಸರ್ವರು ತತಕ್ಷಣ ನೋಡಬೇಕಾಗಿದೆ. ಪಳಪಳ ಒಳೆಯುವ ಬೂಟುಗಳು, ಇಸ್ತ್ರಿ ತೀಡಿದ ಬಟ್ಟೆಗಳು, ವಾಹನದಲ್ಲಿ ಶಾಲೆಗೆ ಬಂದು ಹಿಂತಿರುಗುವ ವಿದ್ಯಾರ್ಥಿಗಳು, ಪ್ರತಿಯೊಂದು ಶಾಲೆಯಲ್ಲೂ ಭಿನ್ನ- ಭಿನ್ನ ವಸ್ತ್ರಸಂಹಿತೆ ಇರುವಾಗ, ಮಕ್ಕಳು ತಮಗಿಷ್ಟವಾದ್ದದನ್ನು ತೋಡುತ್ತಿರುವಾಗ ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗಿಯೂ ವಿನಾಕಾರಣ, ಇದುವರೆಗೂ ಇಲ್ಲದ ಭಿನ್ನ ಕಾರಣಗಳನ್ನು ಮಕ್ಕಳ ವಿಷಯದಲ್ಲಿ ನೋಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೊಹಮ್ಮದ್ ಪೈಗಂಬರ್, ಕ್ರೈಸ್ತ, ಕೃಷ್ಣ, ರಾಮನ ವಿಚಾರಗಳು ಪಠ್ಯದಲ್ಲಿ ತತ್ವಗಳು ಆಗಿರುವಾಗ, ವಿವಿಧತೆಯಲ್ಲಿ ಏಕತೆಯಿಂದ ನಾವು ಸಮಬಾಳ್ವೆಯ ಸಮಾನತೆಯಿಂದ ಬಾಳಬೇಕಾಗಿದೆ. ಮಕ್ಕಳ ಮೇಲೆ ನಡೆಯುವ ಶೋಷಣೆಯ ವಿಚಾರಕ್ಕೆ ಸಂಬಂಧಿಸಿದಂತೆ , ಮಕ್ಕಳ ಹಕ್ಕುಗಳ ಉಲ್ಲಂಘನೆ ವಿಚಾರದಲ್ಲಾಗಲಿ, ಮಕ್ಕಳಿಗೆ ಸಂಬಂಧಿಸಿದ ವಿಚಾರಕ್ಕೆ ಪೂರಕವಾದ ವಿಷಯಗಳು ಇದ್ದರೆ ಮಕ್ಕಳ ಸಹಾಯವಾಣಿ-1098 ಕರೆಮಾಡಿ ತಿಳಿಸುವುದು, ಆಯಾ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಮಾಹಿತಿ ತಿಳಿಸುವುದು, ಜಿಲ್ಲೆಯ ವಿಶೇಷ ಪೊಲೀಸ್ ಘಟಕಕ್ಕೆ ಮಾಹಿತಿ ರವಾನಿಸಬೇಕು ಎಂದು ಈ ಮೂಲಕ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯನಾಗಿ ತಿಳಿಸುತ್ತೇನೆ ಎಂದು ಅವರು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ.

ಈ ಪ್ರತಿಯನ್ನು ಆಯೋಗದ ಅಧ್ಯಕ್ಷರಿಗೆ ಹಾಗೂ ಕಾರ್ಯದರ್ಶಿಯವರಿಗೆ ಲಗತ್ತಿಸಿದ್ದಾರೆ.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...