Homeಕರ್ನಾಟಕಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಕೇಸರಿ ಶಾಲು- ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಖಂಡಿಸಿದೆ.

- Advertisement -
- Advertisement -

ಕೇಸರಿ ಶಾಲು- ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಂ.ಎಲ್‌.ಪರಶುರಾಮ್ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು, ಇತ್ತೀಚಿನ ವಿದ್ಯಮಾನಗಳನ್ನು ಗಮನಿಸುತ್ತಿದೆ. ಮಕ್ಕಳ ನಡುವೆ ನಡೆಯುತ್ತಿರುವ ಸಂಘರ್ಷಗಳನ್ನು ಆಯೋಗವು ಗಮನಿಸುತ್ತಿದ್ದು, ಮಕ್ಕಳ ವಿಚಾರದಲ್ಲಿ ಇದು ಸರಿಯಲ್ಲ ಎಂದು ಆಯೋಗವು ತಿಳಿ-ಹೇಳಲು ಇಚ್ಛಿಸುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣವು ಇದ್ದಾಗಿಯೂ ಕೂಡ, ಕೆಲವರು ಮಕ್ಕಳ ಹಿತಾಸಕ್ತಿಯನ್ನೇ ಮರೆತಿರುವುದು ವಿಷಾದನೀಯ. ಮಕ್ಕಳ ಇಚ್ಚೆಗೆ ವಿರುದ್ಧವಾಗಿ ಅವರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು, ಪ್ರಚೋದನಕಾರಿಯಾದ ಅಂತಹ ಮಾತುಗಳನ್ನು ಮಕ್ಕಳ ಮೆದುಳಿಗೆ ರವಾನಿಸಿ ಮಕ್ಕಳ ಬಾಯಿಂದ ಹೇಳಿಸುವುದು ಅಕ್ಷಮ್ಯ ಎಂದಿದ್ದಾರೆ.

ಈ ಮೇಲ್ಕಂಡ ವಿಚಾರಕ್ಕೆ ಪೂರಕವಾಗಿ ಬಾಲನ್ಯಾಯ ಕಾಯ್ದೆ ಸ್ಪಷ್ಟ ಉಲ್ಲಂಘನೆಯಾಗಿದೆ. ಬಾಲನ್ಯಾಯ ಕಾಯ್ದೆ 2015ರ ಅನ್ವಯ, ಮಕ್ಕಳ ಪಾಲನೆ ಮತ್ತು ಸಂರಕ್ಷಣೆಯನ್ನು ಶಾಲೆಗಳಲ್ಲಿ, ಸಂಸ್ಥೆಗಳಲ್ಲಿ ಮಾಡುವುದು ಆದ್ಯ ಕರ್ತವ್ಯವಾಗಿದೆ. ಬಾಲನ್ಯಾಯ ಕಾಯ್ದೆ ಕಾಲಂ 9ರಲ್ಲಿ ಹೇಳಿರುವಂತೆ ಮಗುವಿನ ಅತ್ಯುತ್ತಮ ಹಿತಾಶಕ್ತಿಯನ್ನು ಕಾಪಾಡುವುದರ ಜೊತೆಗೆ ಮಗುವಿನ ಮೂಲಭೂತ ಹಕ್ಕುಗಳು ಉಲ್ಲಂಘನೆ ಆಗಕೂಡದು. ಹಾಗೆಯೇ ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 14(x)ರ ಪ್ರಕಾರ ಮಗುವಿನ ಸಂರಕ್ಷಣೆಯನ್ನು ಅನೀತಿಯ ಲಾಭಕ್ಕಾಗಿ ಮಗುವನ್ನು ಹಿಂಸೆಗೆ ಒಳಪಡಿಸಬಾರದು ಎಂದು ಎಚ್ಚರಿಸಿದ್ದಾರೆ.

ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 15ರ ಅನ್ವಯ ಶಿಶು – ಸ್ನೇಹ ( child friendly ) ರೀತಿಯಲ್ಲಿ ಶಾಲೆಗಳು ಇರಬೇಕಾಗಿದೆ. ಅಭ್ಯಾಸ, ನಡತೆ, ನಡವಳಿಕೆ, ಮನಪ್ರವೃತ್ತಿ, ಹೊಂದಿಕೊಳ್ಳುವ ಪರಿಸರ ವ್ಯವಸ್ಥೆಯನ್ನು ಮಗುವಿಗೆ ನೀಡುವ ರೀತಿಯಲ್ಲಿ ವ್ಯವಸ್ಥೆಗಳು ಕಾರ್ಯನಿರ್ವಹಿಸಬೇಕಾಗಿದೆ. ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 76 (1) ಮಗುವಿಗೆ ಕಿರುಕುಳ ಅಥವಾ ಶೋಷಣೆ ಉಂಟು ಮಾಡಬಾರದೆಂದು ತಿಳಿಸುತ್ತದೆ. ಮಕ್ಕಳು ಶಾಲೆಗೆ ಹೋಗುವುದಕ್ಕೆ ಭಯದ ವಾತಾವರಣ ನಿರ್ಮಾಣವಾಗಿರುವುದು ಭಾರತದ ಸಂಸ್ಕೃತಿಗೆ ಶೋಭೆ ತರುವಂತದ್ದಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತೊಡುವ ಬಟ್ಟೆಗಳಿಗಿಂತ, ಉಣ್ಣುವ ತಟ್ಟೆಗಳು ಬರಿದಾಗಿ, ಹಸಿದ ಹೊಟ್ಟೆಯಿಂದ ಬರುವ ಮಕ್ಕಳ ಯೋಗ-ಕ್ಷೇಮವನ್ನು ನಾಗರಿಕ ಪ್ರಜ್ಞೆಯೊಡನೆ ಸರ್ವರು ತತಕ್ಷಣ ನೋಡಬೇಕಾಗಿದೆ. ಪಳಪಳ ಒಳೆಯುವ ಬೂಟುಗಳು, ಇಸ್ತ್ರಿ ತೀಡಿದ ಬಟ್ಟೆಗಳು, ವಾಹನದಲ್ಲಿ ಶಾಲೆಗೆ ಬಂದು ಹಿಂತಿರುಗುವ ವಿದ್ಯಾರ್ಥಿಗಳು, ಪ್ರತಿಯೊಂದು ಶಾಲೆಯಲ್ಲೂ ಭಿನ್ನ- ಭಿನ್ನ ವಸ್ತ್ರಸಂಹಿತೆ ಇರುವಾಗ, ಮಕ್ಕಳು ತಮಗಿಷ್ಟವಾದ್ದದನ್ನು ತೋಡುತ್ತಿರುವಾಗ ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗಿಯೂ ವಿನಾಕಾರಣ, ಇದುವರೆಗೂ ಇಲ್ಲದ ಭಿನ್ನ ಕಾರಣಗಳನ್ನು ಮಕ್ಕಳ ವಿಷಯದಲ್ಲಿ ನೋಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೊಹಮ್ಮದ್ ಪೈಗಂಬರ್, ಕ್ರೈಸ್ತ, ಕೃಷ್ಣ, ರಾಮನ ವಿಚಾರಗಳು ಪಠ್ಯದಲ್ಲಿ ತತ್ವಗಳು ಆಗಿರುವಾಗ, ವಿವಿಧತೆಯಲ್ಲಿ ಏಕತೆಯಿಂದ ನಾವು ಸಮಬಾಳ್ವೆಯ ಸಮಾನತೆಯಿಂದ ಬಾಳಬೇಕಾಗಿದೆ. ಮಕ್ಕಳ ಮೇಲೆ ನಡೆಯುವ ಶೋಷಣೆಯ ವಿಚಾರಕ್ಕೆ ಸಂಬಂಧಿಸಿದಂತೆ , ಮಕ್ಕಳ ಹಕ್ಕುಗಳ ಉಲ್ಲಂಘನೆ ವಿಚಾರದಲ್ಲಾಗಲಿ, ಮಕ್ಕಳಿಗೆ ಸಂಬಂಧಿಸಿದ ವಿಚಾರಕ್ಕೆ ಪೂರಕವಾದ ವಿಷಯಗಳು ಇದ್ದರೆ ಮಕ್ಕಳ ಸಹಾಯವಾಣಿ-1098 ಕರೆಮಾಡಿ ತಿಳಿಸುವುದು, ಆಯಾ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಮಾಹಿತಿ ತಿಳಿಸುವುದು, ಜಿಲ್ಲೆಯ ವಿಶೇಷ ಪೊಲೀಸ್ ಘಟಕಕ್ಕೆ ಮಾಹಿತಿ ರವಾನಿಸಬೇಕು ಎಂದು ಈ ಮೂಲಕ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯನಾಗಿ ತಿಳಿಸುತ್ತೇನೆ ಎಂದು ಅವರು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ.

ಈ ಪ್ರತಿಯನ್ನು ಆಯೋಗದ ಅಧ್ಯಕ್ಷರಿಗೆ ಹಾಗೂ ಕಾರ್ಯದರ್ಶಿಯವರಿಗೆ ಲಗತ್ತಿಸಿದ್ದಾರೆ.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...