Homeಕರ್ನಾಟಕಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಕೇಸರಿ ಶಾಲು- ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಖಂಡಿಸಿದೆ.

- Advertisement -
- Advertisement -

ಕೇಸರಿ ಶಾಲು- ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಂ.ಎಲ್‌.ಪರಶುರಾಮ್ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು, ಇತ್ತೀಚಿನ ವಿದ್ಯಮಾನಗಳನ್ನು ಗಮನಿಸುತ್ತಿದೆ. ಮಕ್ಕಳ ನಡುವೆ ನಡೆಯುತ್ತಿರುವ ಸಂಘರ್ಷಗಳನ್ನು ಆಯೋಗವು ಗಮನಿಸುತ್ತಿದ್ದು, ಮಕ್ಕಳ ವಿಚಾರದಲ್ಲಿ ಇದು ಸರಿಯಲ್ಲ ಎಂದು ಆಯೋಗವು ತಿಳಿ-ಹೇಳಲು ಇಚ್ಛಿಸುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣವು ಇದ್ದಾಗಿಯೂ ಕೂಡ, ಕೆಲವರು ಮಕ್ಕಳ ಹಿತಾಸಕ್ತಿಯನ್ನೇ ಮರೆತಿರುವುದು ವಿಷಾದನೀಯ. ಮಕ್ಕಳ ಇಚ್ಚೆಗೆ ವಿರುದ್ಧವಾಗಿ ಅವರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು, ಪ್ರಚೋದನಕಾರಿಯಾದ ಅಂತಹ ಮಾತುಗಳನ್ನು ಮಕ್ಕಳ ಮೆದುಳಿಗೆ ರವಾನಿಸಿ ಮಕ್ಕಳ ಬಾಯಿಂದ ಹೇಳಿಸುವುದು ಅಕ್ಷಮ್ಯ ಎಂದಿದ್ದಾರೆ.

ಈ ಮೇಲ್ಕಂಡ ವಿಚಾರಕ್ಕೆ ಪೂರಕವಾಗಿ ಬಾಲನ್ಯಾಯ ಕಾಯ್ದೆ ಸ್ಪಷ್ಟ ಉಲ್ಲಂಘನೆಯಾಗಿದೆ. ಬಾಲನ್ಯಾಯ ಕಾಯ್ದೆ 2015ರ ಅನ್ವಯ, ಮಕ್ಕಳ ಪಾಲನೆ ಮತ್ತು ಸಂರಕ್ಷಣೆಯನ್ನು ಶಾಲೆಗಳಲ್ಲಿ, ಸಂಸ್ಥೆಗಳಲ್ಲಿ ಮಾಡುವುದು ಆದ್ಯ ಕರ್ತವ್ಯವಾಗಿದೆ. ಬಾಲನ್ಯಾಯ ಕಾಯ್ದೆ ಕಾಲಂ 9ರಲ್ಲಿ ಹೇಳಿರುವಂತೆ ಮಗುವಿನ ಅತ್ಯುತ್ತಮ ಹಿತಾಶಕ್ತಿಯನ್ನು ಕಾಪಾಡುವುದರ ಜೊತೆಗೆ ಮಗುವಿನ ಮೂಲಭೂತ ಹಕ್ಕುಗಳು ಉಲ್ಲಂಘನೆ ಆಗಕೂಡದು. ಹಾಗೆಯೇ ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 14(x)ರ ಪ್ರಕಾರ ಮಗುವಿನ ಸಂರಕ್ಷಣೆಯನ್ನು ಅನೀತಿಯ ಲಾಭಕ್ಕಾಗಿ ಮಗುವನ್ನು ಹಿಂಸೆಗೆ ಒಳಪಡಿಸಬಾರದು ಎಂದು ಎಚ್ಚರಿಸಿದ್ದಾರೆ.

ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 15ರ ಅನ್ವಯ ಶಿಶು – ಸ್ನೇಹ ( child friendly ) ರೀತಿಯಲ್ಲಿ ಶಾಲೆಗಳು ಇರಬೇಕಾಗಿದೆ. ಅಭ್ಯಾಸ, ನಡತೆ, ನಡವಳಿಕೆ, ಮನಪ್ರವೃತ್ತಿ, ಹೊಂದಿಕೊಳ್ಳುವ ಪರಿಸರ ವ್ಯವಸ್ಥೆಯನ್ನು ಮಗುವಿಗೆ ನೀಡುವ ರೀತಿಯಲ್ಲಿ ವ್ಯವಸ್ಥೆಗಳು ಕಾರ್ಯನಿರ್ವಹಿಸಬೇಕಾಗಿದೆ. ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 76 (1) ಮಗುವಿಗೆ ಕಿರುಕುಳ ಅಥವಾ ಶೋಷಣೆ ಉಂಟು ಮಾಡಬಾರದೆಂದು ತಿಳಿಸುತ್ತದೆ. ಮಕ್ಕಳು ಶಾಲೆಗೆ ಹೋಗುವುದಕ್ಕೆ ಭಯದ ವಾತಾವರಣ ನಿರ್ಮಾಣವಾಗಿರುವುದು ಭಾರತದ ಸಂಸ್ಕೃತಿಗೆ ಶೋಭೆ ತರುವಂತದ್ದಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತೊಡುವ ಬಟ್ಟೆಗಳಿಗಿಂತ, ಉಣ್ಣುವ ತಟ್ಟೆಗಳು ಬರಿದಾಗಿ, ಹಸಿದ ಹೊಟ್ಟೆಯಿಂದ ಬರುವ ಮಕ್ಕಳ ಯೋಗ-ಕ್ಷೇಮವನ್ನು ನಾಗರಿಕ ಪ್ರಜ್ಞೆಯೊಡನೆ ಸರ್ವರು ತತಕ್ಷಣ ನೋಡಬೇಕಾಗಿದೆ. ಪಳಪಳ ಒಳೆಯುವ ಬೂಟುಗಳು, ಇಸ್ತ್ರಿ ತೀಡಿದ ಬಟ್ಟೆಗಳು, ವಾಹನದಲ್ಲಿ ಶಾಲೆಗೆ ಬಂದು ಹಿಂತಿರುಗುವ ವಿದ್ಯಾರ್ಥಿಗಳು, ಪ್ರತಿಯೊಂದು ಶಾಲೆಯಲ್ಲೂ ಭಿನ್ನ- ಭಿನ್ನ ವಸ್ತ್ರಸಂಹಿತೆ ಇರುವಾಗ, ಮಕ್ಕಳು ತಮಗಿಷ್ಟವಾದ್ದದನ್ನು ತೋಡುತ್ತಿರುವಾಗ ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗಿಯೂ ವಿನಾಕಾರಣ, ಇದುವರೆಗೂ ಇಲ್ಲದ ಭಿನ್ನ ಕಾರಣಗಳನ್ನು ಮಕ್ಕಳ ವಿಷಯದಲ್ಲಿ ನೋಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೊಹಮ್ಮದ್ ಪೈಗಂಬರ್, ಕ್ರೈಸ್ತ, ಕೃಷ್ಣ, ರಾಮನ ವಿಚಾರಗಳು ಪಠ್ಯದಲ್ಲಿ ತತ್ವಗಳು ಆಗಿರುವಾಗ, ವಿವಿಧತೆಯಲ್ಲಿ ಏಕತೆಯಿಂದ ನಾವು ಸಮಬಾಳ್ವೆಯ ಸಮಾನತೆಯಿಂದ ಬಾಳಬೇಕಾಗಿದೆ. ಮಕ್ಕಳ ಮೇಲೆ ನಡೆಯುವ ಶೋಷಣೆಯ ವಿಚಾರಕ್ಕೆ ಸಂಬಂಧಿಸಿದಂತೆ , ಮಕ್ಕಳ ಹಕ್ಕುಗಳ ಉಲ್ಲಂಘನೆ ವಿಚಾರದಲ್ಲಾಗಲಿ, ಮಕ್ಕಳಿಗೆ ಸಂಬಂಧಿಸಿದ ವಿಚಾರಕ್ಕೆ ಪೂರಕವಾದ ವಿಷಯಗಳು ಇದ್ದರೆ ಮಕ್ಕಳ ಸಹಾಯವಾಣಿ-1098 ಕರೆಮಾಡಿ ತಿಳಿಸುವುದು, ಆಯಾ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಮಾಹಿತಿ ತಿಳಿಸುವುದು, ಜಿಲ್ಲೆಯ ವಿಶೇಷ ಪೊಲೀಸ್ ಘಟಕಕ್ಕೆ ಮಾಹಿತಿ ರವಾನಿಸಬೇಕು ಎಂದು ಈ ಮೂಲಕ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯನಾಗಿ ತಿಳಿಸುತ್ತೇನೆ ಎಂದು ಅವರು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ.

ಈ ಪ್ರತಿಯನ್ನು ಆಯೋಗದ ಅಧ್ಯಕ್ಷರಿಗೆ ಹಾಗೂ ಕಾರ್ಯದರ್ಶಿಯವರಿಗೆ ಲಗತ್ತಿಸಿದ್ದಾರೆ.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...