Homeಕರ್ನಾಟಕಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಕೇಸರಿ ಶಾಲು- ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಖಂಡಿಸಿದೆ.

- Advertisement -
- Advertisement -

ಕೇಸರಿ ಶಾಲು- ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಂ.ಎಲ್‌.ಪರಶುರಾಮ್ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು, ಇತ್ತೀಚಿನ ವಿದ್ಯಮಾನಗಳನ್ನು ಗಮನಿಸುತ್ತಿದೆ. ಮಕ್ಕಳ ನಡುವೆ ನಡೆಯುತ್ತಿರುವ ಸಂಘರ್ಷಗಳನ್ನು ಆಯೋಗವು ಗಮನಿಸುತ್ತಿದ್ದು, ಮಕ್ಕಳ ವಿಚಾರದಲ್ಲಿ ಇದು ಸರಿಯಲ್ಲ ಎಂದು ಆಯೋಗವು ತಿಳಿ-ಹೇಳಲು ಇಚ್ಛಿಸುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣವು ಇದ್ದಾಗಿಯೂ ಕೂಡ, ಕೆಲವರು ಮಕ್ಕಳ ಹಿತಾಸಕ್ತಿಯನ್ನೇ ಮರೆತಿರುವುದು ವಿಷಾದನೀಯ. ಮಕ್ಕಳ ಇಚ್ಚೆಗೆ ವಿರುದ್ಧವಾಗಿ ಅವರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು, ಪ್ರಚೋದನಕಾರಿಯಾದ ಅಂತಹ ಮಾತುಗಳನ್ನು ಮಕ್ಕಳ ಮೆದುಳಿಗೆ ರವಾನಿಸಿ ಮಕ್ಕಳ ಬಾಯಿಂದ ಹೇಳಿಸುವುದು ಅಕ್ಷಮ್ಯ ಎಂದಿದ್ದಾರೆ.

ಈ ಮೇಲ್ಕಂಡ ವಿಚಾರಕ್ಕೆ ಪೂರಕವಾಗಿ ಬಾಲನ್ಯಾಯ ಕಾಯ್ದೆ ಸ್ಪಷ್ಟ ಉಲ್ಲಂಘನೆಯಾಗಿದೆ. ಬಾಲನ್ಯಾಯ ಕಾಯ್ದೆ 2015ರ ಅನ್ವಯ, ಮಕ್ಕಳ ಪಾಲನೆ ಮತ್ತು ಸಂರಕ್ಷಣೆಯನ್ನು ಶಾಲೆಗಳಲ್ಲಿ, ಸಂಸ್ಥೆಗಳಲ್ಲಿ ಮಾಡುವುದು ಆದ್ಯ ಕರ್ತವ್ಯವಾಗಿದೆ. ಬಾಲನ್ಯಾಯ ಕಾಯ್ದೆ ಕಾಲಂ 9ರಲ್ಲಿ ಹೇಳಿರುವಂತೆ ಮಗುವಿನ ಅತ್ಯುತ್ತಮ ಹಿತಾಶಕ್ತಿಯನ್ನು ಕಾಪಾಡುವುದರ ಜೊತೆಗೆ ಮಗುವಿನ ಮೂಲಭೂತ ಹಕ್ಕುಗಳು ಉಲ್ಲಂಘನೆ ಆಗಕೂಡದು. ಹಾಗೆಯೇ ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 14(x)ರ ಪ್ರಕಾರ ಮಗುವಿನ ಸಂರಕ್ಷಣೆಯನ್ನು ಅನೀತಿಯ ಲಾಭಕ್ಕಾಗಿ ಮಗುವನ್ನು ಹಿಂಸೆಗೆ ಒಳಪಡಿಸಬಾರದು ಎಂದು ಎಚ್ಚರಿಸಿದ್ದಾರೆ.

ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 15ರ ಅನ್ವಯ ಶಿಶು – ಸ್ನೇಹ ( child friendly ) ರೀತಿಯಲ್ಲಿ ಶಾಲೆಗಳು ಇರಬೇಕಾಗಿದೆ. ಅಭ್ಯಾಸ, ನಡತೆ, ನಡವಳಿಕೆ, ಮನಪ್ರವೃತ್ತಿ, ಹೊಂದಿಕೊಳ್ಳುವ ಪರಿಸರ ವ್ಯವಸ್ಥೆಯನ್ನು ಮಗುವಿಗೆ ನೀಡುವ ರೀತಿಯಲ್ಲಿ ವ್ಯವಸ್ಥೆಗಳು ಕಾರ್ಯನಿರ್ವಹಿಸಬೇಕಾಗಿದೆ. ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 76 (1) ಮಗುವಿಗೆ ಕಿರುಕುಳ ಅಥವಾ ಶೋಷಣೆ ಉಂಟು ಮಾಡಬಾರದೆಂದು ತಿಳಿಸುತ್ತದೆ. ಮಕ್ಕಳು ಶಾಲೆಗೆ ಹೋಗುವುದಕ್ಕೆ ಭಯದ ವಾತಾವರಣ ನಿರ್ಮಾಣವಾಗಿರುವುದು ಭಾರತದ ಸಂಸ್ಕೃತಿಗೆ ಶೋಭೆ ತರುವಂತದ್ದಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತೊಡುವ ಬಟ್ಟೆಗಳಿಗಿಂತ, ಉಣ್ಣುವ ತಟ್ಟೆಗಳು ಬರಿದಾಗಿ, ಹಸಿದ ಹೊಟ್ಟೆಯಿಂದ ಬರುವ ಮಕ್ಕಳ ಯೋಗ-ಕ್ಷೇಮವನ್ನು ನಾಗರಿಕ ಪ್ರಜ್ಞೆಯೊಡನೆ ಸರ್ವರು ತತಕ್ಷಣ ನೋಡಬೇಕಾಗಿದೆ. ಪಳಪಳ ಒಳೆಯುವ ಬೂಟುಗಳು, ಇಸ್ತ್ರಿ ತೀಡಿದ ಬಟ್ಟೆಗಳು, ವಾಹನದಲ್ಲಿ ಶಾಲೆಗೆ ಬಂದು ಹಿಂತಿರುಗುವ ವಿದ್ಯಾರ್ಥಿಗಳು, ಪ್ರತಿಯೊಂದು ಶಾಲೆಯಲ್ಲೂ ಭಿನ್ನ- ಭಿನ್ನ ವಸ್ತ್ರಸಂಹಿತೆ ಇರುವಾಗ, ಮಕ್ಕಳು ತಮಗಿಷ್ಟವಾದ್ದದನ್ನು ತೋಡುತ್ತಿರುವಾಗ ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗಿಯೂ ವಿನಾಕಾರಣ, ಇದುವರೆಗೂ ಇಲ್ಲದ ಭಿನ್ನ ಕಾರಣಗಳನ್ನು ಮಕ್ಕಳ ವಿಷಯದಲ್ಲಿ ನೋಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೊಹಮ್ಮದ್ ಪೈಗಂಬರ್, ಕ್ರೈಸ್ತ, ಕೃಷ್ಣ, ರಾಮನ ವಿಚಾರಗಳು ಪಠ್ಯದಲ್ಲಿ ತತ್ವಗಳು ಆಗಿರುವಾಗ, ವಿವಿಧತೆಯಲ್ಲಿ ಏಕತೆಯಿಂದ ನಾವು ಸಮಬಾಳ್ವೆಯ ಸಮಾನತೆಯಿಂದ ಬಾಳಬೇಕಾಗಿದೆ. ಮಕ್ಕಳ ಮೇಲೆ ನಡೆಯುವ ಶೋಷಣೆಯ ವಿಚಾರಕ್ಕೆ ಸಂಬಂಧಿಸಿದಂತೆ , ಮಕ್ಕಳ ಹಕ್ಕುಗಳ ಉಲ್ಲಂಘನೆ ವಿಚಾರದಲ್ಲಾಗಲಿ, ಮಕ್ಕಳಿಗೆ ಸಂಬಂಧಿಸಿದ ವಿಚಾರಕ್ಕೆ ಪೂರಕವಾದ ವಿಷಯಗಳು ಇದ್ದರೆ ಮಕ್ಕಳ ಸಹಾಯವಾಣಿ-1098 ಕರೆಮಾಡಿ ತಿಳಿಸುವುದು, ಆಯಾ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಮಾಹಿತಿ ತಿಳಿಸುವುದು, ಜಿಲ್ಲೆಯ ವಿಶೇಷ ಪೊಲೀಸ್ ಘಟಕಕ್ಕೆ ಮಾಹಿತಿ ರವಾನಿಸಬೇಕು ಎಂದು ಈ ಮೂಲಕ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯನಾಗಿ ತಿಳಿಸುತ್ತೇನೆ ಎಂದು ಅವರು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ.

ಈ ಪ್ರತಿಯನ್ನು ಆಯೋಗದ ಅಧ್ಯಕ್ಷರಿಗೆ ಹಾಗೂ ಕಾರ್ಯದರ್ಶಿಯವರಿಗೆ ಲಗತ್ತಿಸಿದ್ದಾರೆ.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...