Homeಕರ್ನಾಟಕ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

- Advertisement -
- Advertisement -

ಭ್ರಷ್ಟಾಚಾರ, ಬೆಲೆ ಏರಿಕೆ, ದ್ವೇಷ ರಾಜಕಾರಣ, ರೈತ ಕಾರ್ಮಿಕರ ಸುಲಿಗೆ, ತಳ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ‘ಎದ್ದೇಳು ಕರ್ನಾಟಕ’ ಅಭಿಯಾನವನ್ನು ಕರ್ನಾಟಕ ನಾಗರಿಕರು ಆರಂಭಿಸಿದ್ದಾರೆ.

ಅಭಿಯಾನಕ್ಕೆ ಕೈ ಜೋಡಿಸಿಸಲು ಮೊ.ಸಂ. 9738833055 ಸಂಪರ್ಕಿಸಲು ಕೋರಲಾಗಿದೆ. ಸಾಹಿತಿ ದೇವನೂರ ಮಹಾದೇವ, ಮಾಜಿ ಕಾರ್ಮಿಕ ಸಚಿವ ಎಸ್.ಕೆ.ಕಾಂತ, ಜೆಎನ್‌ಯು ಕನ್ನಡ ಪೀಠದ ಸಂಸ್ಥಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, ಹೋರಾಟಗಾರ್ತಿ ದು.ಸರಸ್ವತಿ, ಲೇಖಕರಾದ ಡಾ.ರಹಮತ್ ತರೀಕೆರೆ, ಸಾಮಾಜಿಕ ಮಾನವಶಾಸ್ತ್ರಜ್ಞರಾದ, ಮಾಜಿ ಸಚಿವರಾದ ಎಚ್‌.ಏಕಾಂತಯ್ಯ, ನಾಡೋಜ ಕಮಲಾ ಹಂಪನಾ, ಕವಿ ಅಲ್ಲಮಪ್ರಭು ಬೆಟ್ಟದೂರು, ಆಮ್ನೇಸ್ಟಿ ಇಂಡಿಯಾದ ಮಾಜಿ ಪ್ರೊಗ್ರಾಮ್‌ ಡೈರೆಕ್ಟರ್‌ ತಾರಾ ರಾವ್‌, ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲೇನಿದೆ?

ಇಂದಿನ ಕರ್ನಾಟಕ ರಾಜಕಾರಣದ ವಿಷಕಾರಿ ಉಸಿರುಗಟ್ಟಿಸುವ ವಾತಾವರಣದಿಂದ ಮುಕ್ತವಾಗಿ ಉಸಿರಾಡಲು ಮತ್ತು ಚೇತರಿಸಿಕೊಳ್ಳಲು ನಮ್ಮ ರಾಜ್ಯಕ್ಕೆ ಸಾಧ್ಯವಾಗುತ್ತದೆಯೇ? ಇಲ್ಲವೇ? ಎಂಬುದನ್ನು ಮುಂಬರುವ ಚುನಾವಣೆಗಳು ನಿರ್ಧರಿಸಲಿವೆ. ಇನ್ನು ಕೆಲವೇ ದಿನಗಳು ಉಳಿದಿವೆ.

ಸ್ವಾತಂತ್ರ್ಯಾ ನಂತರದ ಇತಿಹಾಸದಲ್ಲಿ ಕಳೆದ 4 ವರ್ಷಗಳಲ್ಲಿ ಕರ್ನಾಟಕ ಅತ್ಯಂತ ಕೆಟ್ಟ ದಿನಗಳನ್ನು ಕಂಡಿದೆ. ಜನಾದೇಶವಿಲ್ಲದೆ ಅಧಿಕಾರ ಹಿಡಿದ ಸರಕಾರ ಈ ರಾಜ್ಯಕ್ಕೆ ಸಂಕಷ್ಟ ತಂದೊಡ್ಡಿದೆ. ಡಬಲ್ ಇಂಜಿನ್ ಸರ್ಕಾರದಿಂದ ಬೊಕ್ಕಸಕ್ಕೆ ಡಬಲ್ ಲೂಟಿ, ಊಹಿಸಲಾಗದಷ್ಟು ಭ್ರಷ್ಟಾಚಾರ, ಮಾರಕ ಬೆಲೆ ಏರಿಕೆ, ಶಿಕ್ಷಣ-ಆರೋಗ್ಯದ ಹೆಸರಿನಲ್ಲಿ ಹಗಲು ದರೋಡೆ, ದುಡಿಯುವ ಜನರನ್ನು ಅನಾಥರನ್ನಾಗಿಸುವ ಸರಣಿ ಕಾಯ್ದೆಗಳು, ಯುವಕರ ಕನಸಿನ ಕತ್ತು ಹಿಸುಕುವ ನಿರುದ್ಯೋಗ, ಮಾರುಕಟ್ಟೆ ಕುಂಠಿತ, ಕುಸಿದ ವಹಿವಾಟು, ಗಗನಕ್ಕೇರುತ್ತಿರುವ ಸಾಲಗಳು, ಮಿತಿಮೀರಿದ ಅತ್ಯಾಚಾರ, ದಮನ ಮತ್ತು ಸಾಮಾಜಿಕ ಘರ್ಷಣೆಗಳು, ಹೆಚ್ಚುತ್ತಿರುವ ಜಾತಿಗಳ ನಡುವಿನ ಉದ್ವಿಗ್ನತೆ, ಧಾರ್ಮಿಕತೆಯನ್ನು ಕೆರಳಿಸುವುದು, ದ್ವೇಷ- ಇವೆಲ್ಲ ಈ ಸರ್ಕಾರದ ಆಡಳಿತದ ಫಲ.

ಈ ದುರಂತ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರುವ ಅವಕಾಶ ರಾಜ್ಯದ ಜನತೆಯ ಮುಂದಿದೆ. ಚುನಾವಣೆಗಳು ಬರುತ್ತಿವೆ. ಈ ಸುಲಿಗೆ ಸರಕಾರ ಹೋಗಬೇಕು. ಯಾರು ಅಧಿಕಾರಕ್ಕೆ ಬರುತ್ತಾರೆ ಎನ್ನುವುದಕ್ಕಿಂತ ಈ ಸರ್ಕಾರವನ್ನು ಸೋಲಿಸಬೇಕು ಎಂಬುದು ನಮ್ಮ ಮುಖ್ಯ ಗುರಿ. ತದನಂತರ ಗೆಲ್ಲುವ ಪಕ್ಷದೊಂದಿಗೆ ಜನರ ಹಕ್ಕುಗಳ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ನಾವು ಮುಂದುವರಿಸಬೇಕು – ಇದು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಕ್ರಿಯೆ. ಇದು ರಾಜ್ಯದ ಮತ್ತು ಜನತೆಯ ಭವಿಷ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಇಂದಿನ ಕರ್ನಾಟಕದ ನಾಗರಿಕ ಸಮಾಜದ ಮುಂದಿರುವ ವಾಸ್ತವಿಕ ಮತ್ತು ಜವಾಬ್ದಾರಿಯುತ ಕರ್ತವ್ಯ ಇದಾಗಿದೆ.

ಆಡಳಿತ ಪಕ್ಷದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ. ಈ ಅಸಮಾಧಾನವನ್ನು ರಾಜಕೀಯ ಜಾಗೃತಿಯಾಗಿ ಪರಿವರ್ತಿಸುವ ಅಗತ್ಯವಿದೆ. ನಾಗರಿಕ ಸಮಾಜ ಈ ಕಾರ್ಯಕ್ಕೆ ಮುಂದಾಗಬೇಕಿದೆ. ಹೀಗಾಗಿ ಒಂದು ದಿನವೂ ಸುಮ್ಮನೆ ಕೂರಲು ಸಾಧ್ಯವಿಲ್ಲ. ರಾಜ್ಯದ ಅಸ್ಮಿತೆ, ಪರಂಪರೆ, ಬದುಕು ಮತ್ತು ಭವಿಷ್ಯವನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು. ಸರಳ ಮತ್ತು ಜನಪ್ರಿಯ ನೆರೆಟಿವ್‌ಗಳ ಮೂಲಕ ಜನರಿಗೆ ಮನವರಿಕೆ ಮಾಡಬೇಕು – “ಸಾಕು ಸಾಕು, ಇದು ಎದ್ದೇಳುವ ಸಮಯ”.

ಈಗ ಸಂತಸದ ಸುದ್ದಿ ಏನೆಂದರೆ, ತಳಮಟ್ಟದಲ್ಲಿ ಜನರನ್ನು ತಲುಪಬಹುದಾದ ನೈತಿಕ ನಾಗರಿಕ ಅಭಿಯಾನಕ್ಕೆ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಅಭಿಯಾನವನ್ನು “ಎದ್ದೇಳು ಕರ್ನಾಟಕ” (ವೇಕ್ ಅಪ್ ಕರ್ನಾಟಕ) ಹೆಸರಿನಲ್ಲಿ ಪ್ರಾರಂಭಿಸಲಾಗುವುದು.

ಪಕ್ಷ, ಸಂಘಟನೆ, ಜಾತಿ, ಧರ್ಮದ ಎಲ್ಲೆಗಳನ್ನು ಬಿಟ್ಟು ರಾಜ್ಯ ಉಳಿಸಬೇಕಾಗಿದೆ. ಈ ಅಭಿಯಾನ ಆಶಾಕಿರಣವಾಗಿದೆ. ಈ ಅಭಿಯಾನದೊಂದಿಗೆ ನಾವು ಯಾವುದಾದರೂ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ಕರ್ನಾಟಕವನ್ನು ಉಳಿಸಲು “ಎದ್ದೇಳು ಕರ್ನಾಟಕ” ಕ್ಕೆ ಸ್ವಯಂಸೇವಕರಾಗಿ ನೋಂದಾಯಿಕೊಳ್ಳಿರಿ. ಮುಂದೆ ಬನ್ನಿರಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....