Homeಕರ್ನಾಟಕ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

- Advertisement -
- Advertisement -

ಭ್ರಷ್ಟಾಚಾರ, ಬೆಲೆ ಏರಿಕೆ, ದ್ವೇಷ ರಾಜಕಾರಣ, ರೈತ ಕಾರ್ಮಿಕರ ಸುಲಿಗೆ, ತಳ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ‘ಎದ್ದೇಳು ಕರ್ನಾಟಕ’ ಅಭಿಯಾನವನ್ನು ಕರ್ನಾಟಕ ನಾಗರಿಕರು ಆರಂಭಿಸಿದ್ದಾರೆ.

ಅಭಿಯಾನಕ್ಕೆ ಕೈ ಜೋಡಿಸಿಸಲು ಮೊ.ಸಂ. 9738833055 ಸಂಪರ್ಕಿಸಲು ಕೋರಲಾಗಿದೆ. ಸಾಹಿತಿ ದೇವನೂರ ಮಹಾದೇವ, ಮಾಜಿ ಕಾರ್ಮಿಕ ಸಚಿವ ಎಸ್.ಕೆ.ಕಾಂತ, ಜೆಎನ್‌ಯು ಕನ್ನಡ ಪೀಠದ ಸಂಸ್ಥಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, ಹೋರಾಟಗಾರ್ತಿ ದು.ಸರಸ್ವತಿ, ಲೇಖಕರಾದ ಡಾ.ರಹಮತ್ ತರೀಕೆರೆ, ಸಾಮಾಜಿಕ ಮಾನವಶಾಸ್ತ್ರಜ್ಞರಾದ, ಮಾಜಿ ಸಚಿವರಾದ ಎಚ್‌.ಏಕಾಂತಯ್ಯ, ನಾಡೋಜ ಕಮಲಾ ಹಂಪನಾ, ಕವಿ ಅಲ್ಲಮಪ್ರಭು ಬೆಟ್ಟದೂರು, ಆಮ್ನೇಸ್ಟಿ ಇಂಡಿಯಾದ ಮಾಜಿ ಪ್ರೊಗ್ರಾಮ್‌ ಡೈರೆಕ್ಟರ್‌ ತಾರಾ ರಾವ್‌, ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲೇನಿದೆ?

ಇಂದಿನ ಕರ್ನಾಟಕ ರಾಜಕಾರಣದ ವಿಷಕಾರಿ ಉಸಿರುಗಟ್ಟಿಸುವ ವಾತಾವರಣದಿಂದ ಮುಕ್ತವಾಗಿ ಉಸಿರಾಡಲು ಮತ್ತು ಚೇತರಿಸಿಕೊಳ್ಳಲು ನಮ್ಮ ರಾಜ್ಯಕ್ಕೆ ಸಾಧ್ಯವಾಗುತ್ತದೆಯೇ? ಇಲ್ಲವೇ? ಎಂಬುದನ್ನು ಮುಂಬರುವ ಚುನಾವಣೆಗಳು ನಿರ್ಧರಿಸಲಿವೆ. ಇನ್ನು ಕೆಲವೇ ದಿನಗಳು ಉಳಿದಿವೆ.

ಸ್ವಾತಂತ್ರ್ಯಾ ನಂತರದ ಇತಿಹಾಸದಲ್ಲಿ ಕಳೆದ 4 ವರ್ಷಗಳಲ್ಲಿ ಕರ್ನಾಟಕ ಅತ್ಯಂತ ಕೆಟ್ಟ ದಿನಗಳನ್ನು ಕಂಡಿದೆ. ಜನಾದೇಶವಿಲ್ಲದೆ ಅಧಿಕಾರ ಹಿಡಿದ ಸರಕಾರ ಈ ರಾಜ್ಯಕ್ಕೆ ಸಂಕಷ್ಟ ತಂದೊಡ್ಡಿದೆ. ಡಬಲ್ ಇಂಜಿನ್ ಸರ್ಕಾರದಿಂದ ಬೊಕ್ಕಸಕ್ಕೆ ಡಬಲ್ ಲೂಟಿ, ಊಹಿಸಲಾಗದಷ್ಟು ಭ್ರಷ್ಟಾಚಾರ, ಮಾರಕ ಬೆಲೆ ಏರಿಕೆ, ಶಿಕ್ಷಣ-ಆರೋಗ್ಯದ ಹೆಸರಿನಲ್ಲಿ ಹಗಲು ದರೋಡೆ, ದುಡಿಯುವ ಜನರನ್ನು ಅನಾಥರನ್ನಾಗಿಸುವ ಸರಣಿ ಕಾಯ್ದೆಗಳು, ಯುವಕರ ಕನಸಿನ ಕತ್ತು ಹಿಸುಕುವ ನಿರುದ್ಯೋಗ, ಮಾರುಕಟ್ಟೆ ಕುಂಠಿತ, ಕುಸಿದ ವಹಿವಾಟು, ಗಗನಕ್ಕೇರುತ್ತಿರುವ ಸಾಲಗಳು, ಮಿತಿಮೀರಿದ ಅತ್ಯಾಚಾರ, ದಮನ ಮತ್ತು ಸಾಮಾಜಿಕ ಘರ್ಷಣೆಗಳು, ಹೆಚ್ಚುತ್ತಿರುವ ಜಾತಿಗಳ ನಡುವಿನ ಉದ್ವಿಗ್ನತೆ, ಧಾರ್ಮಿಕತೆಯನ್ನು ಕೆರಳಿಸುವುದು, ದ್ವೇಷ- ಇವೆಲ್ಲ ಈ ಸರ್ಕಾರದ ಆಡಳಿತದ ಫಲ.

ಈ ದುರಂತ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರುವ ಅವಕಾಶ ರಾಜ್ಯದ ಜನತೆಯ ಮುಂದಿದೆ. ಚುನಾವಣೆಗಳು ಬರುತ್ತಿವೆ. ಈ ಸುಲಿಗೆ ಸರಕಾರ ಹೋಗಬೇಕು. ಯಾರು ಅಧಿಕಾರಕ್ಕೆ ಬರುತ್ತಾರೆ ಎನ್ನುವುದಕ್ಕಿಂತ ಈ ಸರ್ಕಾರವನ್ನು ಸೋಲಿಸಬೇಕು ಎಂಬುದು ನಮ್ಮ ಮುಖ್ಯ ಗುರಿ. ತದನಂತರ ಗೆಲ್ಲುವ ಪಕ್ಷದೊಂದಿಗೆ ಜನರ ಹಕ್ಕುಗಳ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ನಾವು ಮುಂದುವರಿಸಬೇಕು – ಇದು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಕ್ರಿಯೆ. ಇದು ರಾಜ್ಯದ ಮತ್ತು ಜನತೆಯ ಭವಿಷ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಇಂದಿನ ಕರ್ನಾಟಕದ ನಾಗರಿಕ ಸಮಾಜದ ಮುಂದಿರುವ ವಾಸ್ತವಿಕ ಮತ್ತು ಜವಾಬ್ದಾರಿಯುತ ಕರ್ತವ್ಯ ಇದಾಗಿದೆ.

ಆಡಳಿತ ಪಕ್ಷದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ. ಈ ಅಸಮಾಧಾನವನ್ನು ರಾಜಕೀಯ ಜಾಗೃತಿಯಾಗಿ ಪರಿವರ್ತಿಸುವ ಅಗತ್ಯವಿದೆ. ನಾಗರಿಕ ಸಮಾಜ ಈ ಕಾರ್ಯಕ್ಕೆ ಮುಂದಾಗಬೇಕಿದೆ. ಹೀಗಾಗಿ ಒಂದು ದಿನವೂ ಸುಮ್ಮನೆ ಕೂರಲು ಸಾಧ್ಯವಿಲ್ಲ. ರಾಜ್ಯದ ಅಸ್ಮಿತೆ, ಪರಂಪರೆ, ಬದುಕು ಮತ್ತು ಭವಿಷ್ಯವನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು. ಸರಳ ಮತ್ತು ಜನಪ್ರಿಯ ನೆರೆಟಿವ್‌ಗಳ ಮೂಲಕ ಜನರಿಗೆ ಮನವರಿಕೆ ಮಾಡಬೇಕು – “ಸಾಕು ಸಾಕು, ಇದು ಎದ್ದೇಳುವ ಸಮಯ”.

ಈಗ ಸಂತಸದ ಸುದ್ದಿ ಏನೆಂದರೆ, ತಳಮಟ್ಟದಲ್ಲಿ ಜನರನ್ನು ತಲುಪಬಹುದಾದ ನೈತಿಕ ನಾಗರಿಕ ಅಭಿಯಾನಕ್ಕೆ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಅಭಿಯಾನವನ್ನು “ಎದ್ದೇಳು ಕರ್ನಾಟಕ” (ವೇಕ್ ಅಪ್ ಕರ್ನಾಟಕ) ಹೆಸರಿನಲ್ಲಿ ಪ್ರಾರಂಭಿಸಲಾಗುವುದು.

ಪಕ್ಷ, ಸಂಘಟನೆ, ಜಾತಿ, ಧರ್ಮದ ಎಲ್ಲೆಗಳನ್ನು ಬಿಟ್ಟು ರಾಜ್ಯ ಉಳಿಸಬೇಕಾಗಿದೆ. ಈ ಅಭಿಯಾನ ಆಶಾಕಿರಣವಾಗಿದೆ. ಈ ಅಭಿಯಾನದೊಂದಿಗೆ ನಾವು ಯಾವುದಾದರೂ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ಕರ್ನಾಟಕವನ್ನು ಉಳಿಸಲು “ಎದ್ದೇಳು ಕರ್ನಾಟಕ” ಕ್ಕೆ ಸ್ವಯಂಸೇವಕರಾಗಿ ನೋಂದಾಯಿಕೊಳ್ಳಿರಿ. ಮುಂದೆ ಬನ್ನಿರಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...