Homeಕರ್ನಾಟಕ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

- Advertisement -
- Advertisement -

ಭ್ರಷ್ಟಾಚಾರ, ಬೆಲೆ ಏರಿಕೆ, ದ್ವೇಷ ರಾಜಕಾರಣ, ರೈತ ಕಾರ್ಮಿಕರ ಸುಲಿಗೆ, ತಳ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ‘ಎದ್ದೇಳು ಕರ್ನಾಟಕ’ ಅಭಿಯಾನವನ್ನು ಕರ್ನಾಟಕ ನಾಗರಿಕರು ಆರಂಭಿಸಿದ್ದಾರೆ.

ಅಭಿಯಾನಕ್ಕೆ ಕೈ ಜೋಡಿಸಿಸಲು ಮೊ.ಸಂ. 9738833055 ಸಂಪರ್ಕಿಸಲು ಕೋರಲಾಗಿದೆ. ಸಾಹಿತಿ ದೇವನೂರ ಮಹಾದೇವ, ಮಾಜಿ ಕಾರ್ಮಿಕ ಸಚಿವ ಎಸ್.ಕೆ.ಕಾಂತ, ಜೆಎನ್‌ಯು ಕನ್ನಡ ಪೀಠದ ಸಂಸ್ಥಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, ಹೋರಾಟಗಾರ್ತಿ ದು.ಸರಸ್ವತಿ, ಲೇಖಕರಾದ ಡಾ.ರಹಮತ್ ತರೀಕೆರೆ, ಸಾಮಾಜಿಕ ಮಾನವಶಾಸ್ತ್ರಜ್ಞರಾದ, ಮಾಜಿ ಸಚಿವರಾದ ಎಚ್‌.ಏಕಾಂತಯ್ಯ, ನಾಡೋಜ ಕಮಲಾ ಹಂಪನಾ, ಕವಿ ಅಲ್ಲಮಪ್ರಭು ಬೆಟ್ಟದೂರು, ಆಮ್ನೇಸ್ಟಿ ಇಂಡಿಯಾದ ಮಾಜಿ ಪ್ರೊಗ್ರಾಮ್‌ ಡೈರೆಕ್ಟರ್‌ ತಾರಾ ರಾವ್‌, ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲೇನಿದೆ?

ಇಂದಿನ ಕರ್ನಾಟಕ ರಾಜಕಾರಣದ ವಿಷಕಾರಿ ಉಸಿರುಗಟ್ಟಿಸುವ ವಾತಾವರಣದಿಂದ ಮುಕ್ತವಾಗಿ ಉಸಿರಾಡಲು ಮತ್ತು ಚೇತರಿಸಿಕೊಳ್ಳಲು ನಮ್ಮ ರಾಜ್ಯಕ್ಕೆ ಸಾಧ್ಯವಾಗುತ್ತದೆಯೇ? ಇಲ್ಲವೇ? ಎಂಬುದನ್ನು ಮುಂಬರುವ ಚುನಾವಣೆಗಳು ನಿರ್ಧರಿಸಲಿವೆ. ಇನ್ನು ಕೆಲವೇ ದಿನಗಳು ಉಳಿದಿವೆ.

ಸ್ವಾತಂತ್ರ್ಯಾ ನಂತರದ ಇತಿಹಾಸದಲ್ಲಿ ಕಳೆದ 4 ವರ್ಷಗಳಲ್ಲಿ ಕರ್ನಾಟಕ ಅತ್ಯಂತ ಕೆಟ್ಟ ದಿನಗಳನ್ನು ಕಂಡಿದೆ. ಜನಾದೇಶವಿಲ್ಲದೆ ಅಧಿಕಾರ ಹಿಡಿದ ಸರಕಾರ ಈ ರಾಜ್ಯಕ್ಕೆ ಸಂಕಷ್ಟ ತಂದೊಡ್ಡಿದೆ. ಡಬಲ್ ಇಂಜಿನ್ ಸರ್ಕಾರದಿಂದ ಬೊಕ್ಕಸಕ್ಕೆ ಡಬಲ್ ಲೂಟಿ, ಊಹಿಸಲಾಗದಷ್ಟು ಭ್ರಷ್ಟಾಚಾರ, ಮಾರಕ ಬೆಲೆ ಏರಿಕೆ, ಶಿಕ್ಷಣ-ಆರೋಗ್ಯದ ಹೆಸರಿನಲ್ಲಿ ಹಗಲು ದರೋಡೆ, ದುಡಿಯುವ ಜನರನ್ನು ಅನಾಥರನ್ನಾಗಿಸುವ ಸರಣಿ ಕಾಯ್ದೆಗಳು, ಯುವಕರ ಕನಸಿನ ಕತ್ತು ಹಿಸುಕುವ ನಿರುದ್ಯೋಗ, ಮಾರುಕಟ್ಟೆ ಕುಂಠಿತ, ಕುಸಿದ ವಹಿವಾಟು, ಗಗನಕ್ಕೇರುತ್ತಿರುವ ಸಾಲಗಳು, ಮಿತಿಮೀರಿದ ಅತ್ಯಾಚಾರ, ದಮನ ಮತ್ತು ಸಾಮಾಜಿಕ ಘರ್ಷಣೆಗಳು, ಹೆಚ್ಚುತ್ತಿರುವ ಜಾತಿಗಳ ನಡುವಿನ ಉದ್ವಿಗ್ನತೆ, ಧಾರ್ಮಿಕತೆಯನ್ನು ಕೆರಳಿಸುವುದು, ದ್ವೇಷ- ಇವೆಲ್ಲ ಈ ಸರ್ಕಾರದ ಆಡಳಿತದ ಫಲ.

ಈ ದುರಂತ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರುವ ಅವಕಾಶ ರಾಜ್ಯದ ಜನತೆಯ ಮುಂದಿದೆ. ಚುನಾವಣೆಗಳು ಬರುತ್ತಿವೆ. ಈ ಸುಲಿಗೆ ಸರಕಾರ ಹೋಗಬೇಕು. ಯಾರು ಅಧಿಕಾರಕ್ಕೆ ಬರುತ್ತಾರೆ ಎನ್ನುವುದಕ್ಕಿಂತ ಈ ಸರ್ಕಾರವನ್ನು ಸೋಲಿಸಬೇಕು ಎಂಬುದು ನಮ್ಮ ಮುಖ್ಯ ಗುರಿ. ತದನಂತರ ಗೆಲ್ಲುವ ಪಕ್ಷದೊಂದಿಗೆ ಜನರ ಹಕ್ಕುಗಳ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ನಾವು ಮುಂದುವರಿಸಬೇಕು – ಇದು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಕ್ರಿಯೆ. ಇದು ರಾಜ್ಯದ ಮತ್ತು ಜನತೆಯ ಭವಿಷ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಇಂದಿನ ಕರ್ನಾಟಕದ ನಾಗರಿಕ ಸಮಾಜದ ಮುಂದಿರುವ ವಾಸ್ತವಿಕ ಮತ್ತು ಜವಾಬ್ದಾರಿಯುತ ಕರ್ತವ್ಯ ಇದಾಗಿದೆ.

ಆಡಳಿತ ಪಕ್ಷದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ. ಈ ಅಸಮಾಧಾನವನ್ನು ರಾಜಕೀಯ ಜಾಗೃತಿಯಾಗಿ ಪರಿವರ್ತಿಸುವ ಅಗತ್ಯವಿದೆ. ನಾಗರಿಕ ಸಮಾಜ ಈ ಕಾರ್ಯಕ್ಕೆ ಮುಂದಾಗಬೇಕಿದೆ. ಹೀಗಾಗಿ ಒಂದು ದಿನವೂ ಸುಮ್ಮನೆ ಕೂರಲು ಸಾಧ್ಯವಿಲ್ಲ. ರಾಜ್ಯದ ಅಸ್ಮಿತೆ, ಪರಂಪರೆ, ಬದುಕು ಮತ್ತು ಭವಿಷ್ಯವನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು. ಸರಳ ಮತ್ತು ಜನಪ್ರಿಯ ನೆರೆಟಿವ್‌ಗಳ ಮೂಲಕ ಜನರಿಗೆ ಮನವರಿಕೆ ಮಾಡಬೇಕು – “ಸಾಕು ಸಾಕು, ಇದು ಎದ್ದೇಳುವ ಸಮಯ”.

ಈಗ ಸಂತಸದ ಸುದ್ದಿ ಏನೆಂದರೆ, ತಳಮಟ್ಟದಲ್ಲಿ ಜನರನ್ನು ತಲುಪಬಹುದಾದ ನೈತಿಕ ನಾಗರಿಕ ಅಭಿಯಾನಕ್ಕೆ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಅಭಿಯಾನವನ್ನು “ಎದ್ದೇಳು ಕರ್ನಾಟಕ” (ವೇಕ್ ಅಪ್ ಕರ್ನಾಟಕ) ಹೆಸರಿನಲ್ಲಿ ಪ್ರಾರಂಭಿಸಲಾಗುವುದು.

ಪಕ್ಷ, ಸಂಘಟನೆ, ಜಾತಿ, ಧರ್ಮದ ಎಲ್ಲೆಗಳನ್ನು ಬಿಟ್ಟು ರಾಜ್ಯ ಉಳಿಸಬೇಕಾಗಿದೆ. ಈ ಅಭಿಯಾನ ಆಶಾಕಿರಣವಾಗಿದೆ. ಈ ಅಭಿಯಾನದೊಂದಿಗೆ ನಾವು ಯಾವುದಾದರೂ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ಕರ್ನಾಟಕವನ್ನು ಉಳಿಸಲು “ಎದ್ದೇಳು ಕರ್ನಾಟಕ” ಕ್ಕೆ ಸ್ವಯಂಸೇವಕರಾಗಿ ನೋಂದಾಯಿಕೊಳ್ಳಿರಿ. ಮುಂದೆ ಬನ್ನಿರಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...