Homeಕರ್ನಾಟಕ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

- Advertisement -
- Advertisement -

ಭ್ರಷ್ಟಾಚಾರ, ಬೆಲೆ ಏರಿಕೆ, ದ್ವೇಷ ರಾಜಕಾರಣ, ರೈತ ಕಾರ್ಮಿಕರ ಸುಲಿಗೆ, ತಳ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ‘ಎದ್ದೇಳು ಕರ್ನಾಟಕ’ ಅಭಿಯಾನವನ್ನು ಕರ್ನಾಟಕ ನಾಗರಿಕರು ಆರಂಭಿಸಿದ್ದಾರೆ.

ಅಭಿಯಾನಕ್ಕೆ ಕೈ ಜೋಡಿಸಿಸಲು ಮೊ.ಸಂ. 9738833055 ಸಂಪರ್ಕಿಸಲು ಕೋರಲಾಗಿದೆ. ಸಾಹಿತಿ ದೇವನೂರ ಮಹಾದೇವ, ಮಾಜಿ ಕಾರ್ಮಿಕ ಸಚಿವ ಎಸ್.ಕೆ.ಕಾಂತ, ಜೆಎನ್‌ಯು ಕನ್ನಡ ಪೀಠದ ಸಂಸ್ಥಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, ಹೋರಾಟಗಾರ್ತಿ ದು.ಸರಸ್ವತಿ, ಲೇಖಕರಾದ ಡಾ.ರಹಮತ್ ತರೀಕೆರೆ, ಸಾಮಾಜಿಕ ಮಾನವಶಾಸ್ತ್ರಜ್ಞರಾದ, ಮಾಜಿ ಸಚಿವರಾದ ಎಚ್‌.ಏಕಾಂತಯ್ಯ, ನಾಡೋಜ ಕಮಲಾ ಹಂಪನಾ, ಕವಿ ಅಲ್ಲಮಪ್ರಭು ಬೆಟ್ಟದೂರು, ಆಮ್ನೇಸ್ಟಿ ಇಂಡಿಯಾದ ಮಾಜಿ ಪ್ರೊಗ್ರಾಮ್‌ ಡೈರೆಕ್ಟರ್‌ ತಾರಾ ರಾವ್‌, ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲೇನಿದೆ?

ಇಂದಿನ ಕರ್ನಾಟಕ ರಾಜಕಾರಣದ ವಿಷಕಾರಿ ಉಸಿರುಗಟ್ಟಿಸುವ ವಾತಾವರಣದಿಂದ ಮುಕ್ತವಾಗಿ ಉಸಿರಾಡಲು ಮತ್ತು ಚೇತರಿಸಿಕೊಳ್ಳಲು ನಮ್ಮ ರಾಜ್ಯಕ್ಕೆ ಸಾಧ್ಯವಾಗುತ್ತದೆಯೇ? ಇಲ್ಲವೇ? ಎಂಬುದನ್ನು ಮುಂಬರುವ ಚುನಾವಣೆಗಳು ನಿರ್ಧರಿಸಲಿವೆ. ಇನ್ನು ಕೆಲವೇ ದಿನಗಳು ಉಳಿದಿವೆ.

ಸ್ವಾತಂತ್ರ್ಯಾ ನಂತರದ ಇತಿಹಾಸದಲ್ಲಿ ಕಳೆದ 4 ವರ್ಷಗಳಲ್ಲಿ ಕರ್ನಾಟಕ ಅತ್ಯಂತ ಕೆಟ್ಟ ದಿನಗಳನ್ನು ಕಂಡಿದೆ. ಜನಾದೇಶವಿಲ್ಲದೆ ಅಧಿಕಾರ ಹಿಡಿದ ಸರಕಾರ ಈ ರಾಜ್ಯಕ್ಕೆ ಸಂಕಷ್ಟ ತಂದೊಡ್ಡಿದೆ. ಡಬಲ್ ಇಂಜಿನ್ ಸರ್ಕಾರದಿಂದ ಬೊಕ್ಕಸಕ್ಕೆ ಡಬಲ್ ಲೂಟಿ, ಊಹಿಸಲಾಗದಷ್ಟು ಭ್ರಷ್ಟಾಚಾರ, ಮಾರಕ ಬೆಲೆ ಏರಿಕೆ, ಶಿಕ್ಷಣ-ಆರೋಗ್ಯದ ಹೆಸರಿನಲ್ಲಿ ಹಗಲು ದರೋಡೆ, ದುಡಿಯುವ ಜನರನ್ನು ಅನಾಥರನ್ನಾಗಿಸುವ ಸರಣಿ ಕಾಯ್ದೆಗಳು, ಯುವಕರ ಕನಸಿನ ಕತ್ತು ಹಿಸುಕುವ ನಿರುದ್ಯೋಗ, ಮಾರುಕಟ್ಟೆ ಕುಂಠಿತ, ಕುಸಿದ ವಹಿವಾಟು, ಗಗನಕ್ಕೇರುತ್ತಿರುವ ಸಾಲಗಳು, ಮಿತಿಮೀರಿದ ಅತ್ಯಾಚಾರ, ದಮನ ಮತ್ತು ಸಾಮಾಜಿಕ ಘರ್ಷಣೆಗಳು, ಹೆಚ್ಚುತ್ತಿರುವ ಜಾತಿಗಳ ನಡುವಿನ ಉದ್ವಿಗ್ನತೆ, ಧಾರ್ಮಿಕತೆಯನ್ನು ಕೆರಳಿಸುವುದು, ದ್ವೇಷ- ಇವೆಲ್ಲ ಈ ಸರ್ಕಾರದ ಆಡಳಿತದ ಫಲ.

ಈ ದುರಂತ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರುವ ಅವಕಾಶ ರಾಜ್ಯದ ಜನತೆಯ ಮುಂದಿದೆ. ಚುನಾವಣೆಗಳು ಬರುತ್ತಿವೆ. ಈ ಸುಲಿಗೆ ಸರಕಾರ ಹೋಗಬೇಕು. ಯಾರು ಅಧಿಕಾರಕ್ಕೆ ಬರುತ್ತಾರೆ ಎನ್ನುವುದಕ್ಕಿಂತ ಈ ಸರ್ಕಾರವನ್ನು ಸೋಲಿಸಬೇಕು ಎಂಬುದು ನಮ್ಮ ಮುಖ್ಯ ಗುರಿ. ತದನಂತರ ಗೆಲ್ಲುವ ಪಕ್ಷದೊಂದಿಗೆ ಜನರ ಹಕ್ಕುಗಳ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ನಾವು ಮುಂದುವರಿಸಬೇಕು – ಇದು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಕ್ರಿಯೆ. ಇದು ರಾಜ್ಯದ ಮತ್ತು ಜನತೆಯ ಭವಿಷ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಇಂದಿನ ಕರ್ನಾಟಕದ ನಾಗರಿಕ ಸಮಾಜದ ಮುಂದಿರುವ ವಾಸ್ತವಿಕ ಮತ್ತು ಜವಾಬ್ದಾರಿಯುತ ಕರ್ತವ್ಯ ಇದಾಗಿದೆ.

ಆಡಳಿತ ಪಕ್ಷದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ. ಈ ಅಸಮಾಧಾನವನ್ನು ರಾಜಕೀಯ ಜಾಗೃತಿಯಾಗಿ ಪರಿವರ್ತಿಸುವ ಅಗತ್ಯವಿದೆ. ನಾಗರಿಕ ಸಮಾಜ ಈ ಕಾರ್ಯಕ್ಕೆ ಮುಂದಾಗಬೇಕಿದೆ. ಹೀಗಾಗಿ ಒಂದು ದಿನವೂ ಸುಮ್ಮನೆ ಕೂರಲು ಸಾಧ್ಯವಿಲ್ಲ. ರಾಜ್ಯದ ಅಸ್ಮಿತೆ, ಪರಂಪರೆ, ಬದುಕು ಮತ್ತು ಭವಿಷ್ಯವನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು. ಸರಳ ಮತ್ತು ಜನಪ್ರಿಯ ನೆರೆಟಿವ್‌ಗಳ ಮೂಲಕ ಜನರಿಗೆ ಮನವರಿಕೆ ಮಾಡಬೇಕು – “ಸಾಕು ಸಾಕು, ಇದು ಎದ್ದೇಳುವ ಸಮಯ”.

ಈಗ ಸಂತಸದ ಸುದ್ದಿ ಏನೆಂದರೆ, ತಳಮಟ್ಟದಲ್ಲಿ ಜನರನ್ನು ತಲುಪಬಹುದಾದ ನೈತಿಕ ನಾಗರಿಕ ಅಭಿಯಾನಕ್ಕೆ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಅಭಿಯಾನವನ್ನು “ಎದ್ದೇಳು ಕರ್ನಾಟಕ” (ವೇಕ್ ಅಪ್ ಕರ್ನಾಟಕ) ಹೆಸರಿನಲ್ಲಿ ಪ್ರಾರಂಭಿಸಲಾಗುವುದು.

ಪಕ್ಷ, ಸಂಘಟನೆ, ಜಾತಿ, ಧರ್ಮದ ಎಲ್ಲೆಗಳನ್ನು ಬಿಟ್ಟು ರಾಜ್ಯ ಉಳಿಸಬೇಕಾಗಿದೆ. ಈ ಅಭಿಯಾನ ಆಶಾಕಿರಣವಾಗಿದೆ. ಈ ಅಭಿಯಾನದೊಂದಿಗೆ ನಾವು ಯಾವುದಾದರೂ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ಕರ್ನಾಟಕವನ್ನು ಉಳಿಸಲು “ಎದ್ದೇಳು ಕರ್ನಾಟಕ” ಕ್ಕೆ ಸ್ವಯಂಸೇವಕರಾಗಿ ನೋಂದಾಯಿಕೊಳ್ಳಿರಿ. ಮುಂದೆ ಬನ್ನಿರಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...