Homeಕರ್ನಾಟಕ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

- Advertisement -
- Advertisement -

ಭ್ರಷ್ಟಾಚಾರ, ಬೆಲೆ ಏರಿಕೆ, ದ್ವೇಷ ರಾಜಕಾರಣ, ರೈತ ಕಾರ್ಮಿಕರ ಸುಲಿಗೆ, ತಳ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ‘ಎದ್ದೇಳು ಕರ್ನಾಟಕ’ ಅಭಿಯಾನವನ್ನು ಕರ್ನಾಟಕ ನಾಗರಿಕರು ಆರಂಭಿಸಿದ್ದಾರೆ.

ಅಭಿಯಾನಕ್ಕೆ ಕೈ ಜೋಡಿಸಿಸಲು ಮೊ.ಸಂ. 9738833055 ಸಂಪರ್ಕಿಸಲು ಕೋರಲಾಗಿದೆ. ಸಾಹಿತಿ ದೇವನೂರ ಮಹಾದೇವ, ಮಾಜಿ ಕಾರ್ಮಿಕ ಸಚಿವ ಎಸ್.ಕೆ.ಕಾಂತ, ಜೆಎನ್‌ಯು ಕನ್ನಡ ಪೀಠದ ಸಂಸ್ಥಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, ಹೋರಾಟಗಾರ್ತಿ ದು.ಸರಸ್ವತಿ, ಲೇಖಕರಾದ ಡಾ.ರಹಮತ್ ತರೀಕೆರೆ, ಸಾಮಾಜಿಕ ಮಾನವಶಾಸ್ತ್ರಜ್ಞರಾದ, ಮಾಜಿ ಸಚಿವರಾದ ಎಚ್‌.ಏಕಾಂತಯ್ಯ, ನಾಡೋಜ ಕಮಲಾ ಹಂಪನಾ, ಕವಿ ಅಲ್ಲಮಪ್ರಭು ಬೆಟ್ಟದೂರು, ಆಮ್ನೇಸ್ಟಿ ಇಂಡಿಯಾದ ಮಾಜಿ ಪ್ರೊಗ್ರಾಮ್‌ ಡೈರೆಕ್ಟರ್‌ ತಾರಾ ರಾವ್‌, ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲೇನಿದೆ?

ಇಂದಿನ ಕರ್ನಾಟಕ ರಾಜಕಾರಣದ ವಿಷಕಾರಿ ಉಸಿರುಗಟ್ಟಿಸುವ ವಾತಾವರಣದಿಂದ ಮುಕ್ತವಾಗಿ ಉಸಿರಾಡಲು ಮತ್ತು ಚೇತರಿಸಿಕೊಳ್ಳಲು ನಮ್ಮ ರಾಜ್ಯಕ್ಕೆ ಸಾಧ್ಯವಾಗುತ್ತದೆಯೇ? ಇಲ್ಲವೇ? ಎಂಬುದನ್ನು ಮುಂಬರುವ ಚುನಾವಣೆಗಳು ನಿರ್ಧರಿಸಲಿವೆ. ಇನ್ನು ಕೆಲವೇ ದಿನಗಳು ಉಳಿದಿವೆ.

ಸ್ವಾತಂತ್ರ್ಯಾ ನಂತರದ ಇತಿಹಾಸದಲ್ಲಿ ಕಳೆದ 4 ವರ್ಷಗಳಲ್ಲಿ ಕರ್ನಾಟಕ ಅತ್ಯಂತ ಕೆಟ್ಟ ದಿನಗಳನ್ನು ಕಂಡಿದೆ. ಜನಾದೇಶವಿಲ್ಲದೆ ಅಧಿಕಾರ ಹಿಡಿದ ಸರಕಾರ ಈ ರಾಜ್ಯಕ್ಕೆ ಸಂಕಷ್ಟ ತಂದೊಡ್ಡಿದೆ. ಡಬಲ್ ಇಂಜಿನ್ ಸರ್ಕಾರದಿಂದ ಬೊಕ್ಕಸಕ್ಕೆ ಡಬಲ್ ಲೂಟಿ, ಊಹಿಸಲಾಗದಷ್ಟು ಭ್ರಷ್ಟಾಚಾರ, ಮಾರಕ ಬೆಲೆ ಏರಿಕೆ, ಶಿಕ್ಷಣ-ಆರೋಗ್ಯದ ಹೆಸರಿನಲ್ಲಿ ಹಗಲು ದರೋಡೆ, ದುಡಿಯುವ ಜನರನ್ನು ಅನಾಥರನ್ನಾಗಿಸುವ ಸರಣಿ ಕಾಯ್ದೆಗಳು, ಯುವಕರ ಕನಸಿನ ಕತ್ತು ಹಿಸುಕುವ ನಿರುದ್ಯೋಗ, ಮಾರುಕಟ್ಟೆ ಕುಂಠಿತ, ಕುಸಿದ ವಹಿವಾಟು, ಗಗನಕ್ಕೇರುತ್ತಿರುವ ಸಾಲಗಳು, ಮಿತಿಮೀರಿದ ಅತ್ಯಾಚಾರ, ದಮನ ಮತ್ತು ಸಾಮಾಜಿಕ ಘರ್ಷಣೆಗಳು, ಹೆಚ್ಚುತ್ತಿರುವ ಜಾತಿಗಳ ನಡುವಿನ ಉದ್ವಿಗ್ನತೆ, ಧಾರ್ಮಿಕತೆಯನ್ನು ಕೆರಳಿಸುವುದು, ದ್ವೇಷ- ಇವೆಲ್ಲ ಈ ಸರ್ಕಾರದ ಆಡಳಿತದ ಫಲ.

ಈ ದುರಂತ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರುವ ಅವಕಾಶ ರಾಜ್ಯದ ಜನತೆಯ ಮುಂದಿದೆ. ಚುನಾವಣೆಗಳು ಬರುತ್ತಿವೆ. ಈ ಸುಲಿಗೆ ಸರಕಾರ ಹೋಗಬೇಕು. ಯಾರು ಅಧಿಕಾರಕ್ಕೆ ಬರುತ್ತಾರೆ ಎನ್ನುವುದಕ್ಕಿಂತ ಈ ಸರ್ಕಾರವನ್ನು ಸೋಲಿಸಬೇಕು ಎಂಬುದು ನಮ್ಮ ಮುಖ್ಯ ಗುರಿ. ತದನಂತರ ಗೆಲ್ಲುವ ಪಕ್ಷದೊಂದಿಗೆ ಜನರ ಹಕ್ಕುಗಳ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ನಾವು ಮುಂದುವರಿಸಬೇಕು – ಇದು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಕ್ರಿಯೆ. ಇದು ರಾಜ್ಯದ ಮತ್ತು ಜನತೆಯ ಭವಿಷ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಇಂದಿನ ಕರ್ನಾಟಕದ ನಾಗರಿಕ ಸಮಾಜದ ಮುಂದಿರುವ ವಾಸ್ತವಿಕ ಮತ್ತು ಜವಾಬ್ದಾರಿಯುತ ಕರ್ತವ್ಯ ಇದಾಗಿದೆ.

ಆಡಳಿತ ಪಕ್ಷದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ. ಈ ಅಸಮಾಧಾನವನ್ನು ರಾಜಕೀಯ ಜಾಗೃತಿಯಾಗಿ ಪರಿವರ್ತಿಸುವ ಅಗತ್ಯವಿದೆ. ನಾಗರಿಕ ಸಮಾಜ ಈ ಕಾರ್ಯಕ್ಕೆ ಮುಂದಾಗಬೇಕಿದೆ. ಹೀಗಾಗಿ ಒಂದು ದಿನವೂ ಸುಮ್ಮನೆ ಕೂರಲು ಸಾಧ್ಯವಿಲ್ಲ. ರಾಜ್ಯದ ಅಸ್ಮಿತೆ, ಪರಂಪರೆ, ಬದುಕು ಮತ್ತು ಭವಿಷ್ಯವನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು. ಸರಳ ಮತ್ತು ಜನಪ್ರಿಯ ನೆರೆಟಿವ್‌ಗಳ ಮೂಲಕ ಜನರಿಗೆ ಮನವರಿಕೆ ಮಾಡಬೇಕು – “ಸಾಕು ಸಾಕು, ಇದು ಎದ್ದೇಳುವ ಸಮಯ”.

ಈಗ ಸಂತಸದ ಸುದ್ದಿ ಏನೆಂದರೆ, ತಳಮಟ್ಟದಲ್ಲಿ ಜನರನ್ನು ತಲುಪಬಹುದಾದ ನೈತಿಕ ನಾಗರಿಕ ಅಭಿಯಾನಕ್ಕೆ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಅಭಿಯಾನವನ್ನು “ಎದ್ದೇಳು ಕರ್ನಾಟಕ” (ವೇಕ್ ಅಪ್ ಕರ್ನಾಟಕ) ಹೆಸರಿನಲ್ಲಿ ಪ್ರಾರಂಭಿಸಲಾಗುವುದು.

ಪಕ್ಷ, ಸಂಘಟನೆ, ಜಾತಿ, ಧರ್ಮದ ಎಲ್ಲೆಗಳನ್ನು ಬಿಟ್ಟು ರಾಜ್ಯ ಉಳಿಸಬೇಕಾಗಿದೆ. ಈ ಅಭಿಯಾನ ಆಶಾಕಿರಣವಾಗಿದೆ. ಈ ಅಭಿಯಾನದೊಂದಿಗೆ ನಾವು ಯಾವುದಾದರೂ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ಕರ್ನಾಟಕವನ್ನು ಉಳಿಸಲು “ಎದ್ದೇಳು ಕರ್ನಾಟಕ” ಕ್ಕೆ ಸ್ವಯಂಸೇವಕರಾಗಿ ನೋಂದಾಯಿಕೊಳ್ಳಿರಿ. ಮುಂದೆ ಬನ್ನಿರಿ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಮಾರಾಟವಾಗಲು ನಿರಾಕರಿಸಿದ್ದಕ್ಕೆ ಜೈಲಿನಲ್ಲಿ ಹೊಡೆದು, ಚಿತ್ರಹಿಂಸೆ ನೀಡಿದ್ದರು: ಟಿಎಂಸಿ ನಾಯಕ ಸಾಕೇತ್ ಗೋಖಲೆ

0
ಬಿಜೆಪಿಗೆ ಸೇರಲು ಅಥವಾ ಮಾರಾಟವಾಗಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ನನಗೆ ಹೊಡೆದು ಚಿತ್ರಹಿಂಸೆ ನೀಡಲಾಗಿತ್ತು ಎಂದು ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಸಾಕೇತ್ ಗೋಖಲೆ ಹೇಳಿದ್ದಾರೆ. ದಿ ವೈರ್‌ ಪ್ರಕಟಿಸಿದ ಹಿರಿಯ ವಕೀಲ ಕಪಿಲ್ ಸಿಬಲ್...