Homeಕರ್ನಾಟಕ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

- Advertisement -
- Advertisement -

ಭ್ರಷ್ಟಾಚಾರ, ಬೆಲೆ ಏರಿಕೆ, ದ್ವೇಷ ರಾಜಕಾರಣ, ರೈತ ಕಾರ್ಮಿಕರ ಸುಲಿಗೆ, ತಳ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ‘ಎದ್ದೇಳು ಕರ್ನಾಟಕ’ ಅಭಿಯಾನವನ್ನು ಕರ್ನಾಟಕ ನಾಗರಿಕರು ಆರಂಭಿಸಿದ್ದಾರೆ.

ಅಭಿಯಾನಕ್ಕೆ ಕೈ ಜೋಡಿಸಿಸಲು ಮೊ.ಸಂ. 9738833055 ಸಂಪರ್ಕಿಸಲು ಕೋರಲಾಗಿದೆ. ಸಾಹಿತಿ ದೇವನೂರ ಮಹಾದೇವ, ಮಾಜಿ ಕಾರ್ಮಿಕ ಸಚಿವ ಎಸ್.ಕೆ.ಕಾಂತ, ಜೆಎನ್‌ಯು ಕನ್ನಡ ಪೀಠದ ಸಂಸ್ಥಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, ಹೋರಾಟಗಾರ್ತಿ ದು.ಸರಸ್ವತಿ, ಲೇಖಕರಾದ ಡಾ.ರಹಮತ್ ತರೀಕೆರೆ, ಸಾಮಾಜಿಕ ಮಾನವಶಾಸ್ತ್ರಜ್ಞರಾದ, ಮಾಜಿ ಸಚಿವರಾದ ಎಚ್‌.ಏಕಾಂತಯ್ಯ, ನಾಡೋಜ ಕಮಲಾ ಹಂಪನಾ, ಕವಿ ಅಲ್ಲಮಪ್ರಭು ಬೆಟ್ಟದೂರು, ಆಮ್ನೇಸ್ಟಿ ಇಂಡಿಯಾದ ಮಾಜಿ ಪ್ರೊಗ್ರಾಮ್‌ ಡೈರೆಕ್ಟರ್‌ ತಾರಾ ರಾವ್‌, ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲೇನಿದೆ?

ಇಂದಿನ ಕರ್ನಾಟಕ ರಾಜಕಾರಣದ ವಿಷಕಾರಿ ಉಸಿರುಗಟ್ಟಿಸುವ ವಾತಾವರಣದಿಂದ ಮುಕ್ತವಾಗಿ ಉಸಿರಾಡಲು ಮತ್ತು ಚೇತರಿಸಿಕೊಳ್ಳಲು ನಮ್ಮ ರಾಜ್ಯಕ್ಕೆ ಸಾಧ್ಯವಾಗುತ್ತದೆಯೇ? ಇಲ್ಲವೇ? ಎಂಬುದನ್ನು ಮುಂಬರುವ ಚುನಾವಣೆಗಳು ನಿರ್ಧರಿಸಲಿವೆ. ಇನ್ನು ಕೆಲವೇ ದಿನಗಳು ಉಳಿದಿವೆ.

ಸ್ವಾತಂತ್ರ್ಯಾ ನಂತರದ ಇತಿಹಾಸದಲ್ಲಿ ಕಳೆದ 4 ವರ್ಷಗಳಲ್ಲಿ ಕರ್ನಾಟಕ ಅತ್ಯಂತ ಕೆಟ್ಟ ದಿನಗಳನ್ನು ಕಂಡಿದೆ. ಜನಾದೇಶವಿಲ್ಲದೆ ಅಧಿಕಾರ ಹಿಡಿದ ಸರಕಾರ ಈ ರಾಜ್ಯಕ್ಕೆ ಸಂಕಷ್ಟ ತಂದೊಡ್ಡಿದೆ. ಡಬಲ್ ಇಂಜಿನ್ ಸರ್ಕಾರದಿಂದ ಬೊಕ್ಕಸಕ್ಕೆ ಡಬಲ್ ಲೂಟಿ, ಊಹಿಸಲಾಗದಷ್ಟು ಭ್ರಷ್ಟಾಚಾರ, ಮಾರಕ ಬೆಲೆ ಏರಿಕೆ, ಶಿಕ್ಷಣ-ಆರೋಗ್ಯದ ಹೆಸರಿನಲ್ಲಿ ಹಗಲು ದರೋಡೆ, ದುಡಿಯುವ ಜನರನ್ನು ಅನಾಥರನ್ನಾಗಿಸುವ ಸರಣಿ ಕಾಯ್ದೆಗಳು, ಯುವಕರ ಕನಸಿನ ಕತ್ತು ಹಿಸುಕುವ ನಿರುದ್ಯೋಗ, ಮಾರುಕಟ್ಟೆ ಕುಂಠಿತ, ಕುಸಿದ ವಹಿವಾಟು, ಗಗನಕ್ಕೇರುತ್ತಿರುವ ಸಾಲಗಳು, ಮಿತಿಮೀರಿದ ಅತ್ಯಾಚಾರ, ದಮನ ಮತ್ತು ಸಾಮಾಜಿಕ ಘರ್ಷಣೆಗಳು, ಹೆಚ್ಚುತ್ತಿರುವ ಜಾತಿಗಳ ನಡುವಿನ ಉದ್ವಿಗ್ನತೆ, ಧಾರ್ಮಿಕತೆಯನ್ನು ಕೆರಳಿಸುವುದು, ದ್ವೇಷ- ಇವೆಲ್ಲ ಈ ಸರ್ಕಾರದ ಆಡಳಿತದ ಫಲ.

ಈ ದುರಂತ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರುವ ಅವಕಾಶ ರಾಜ್ಯದ ಜನತೆಯ ಮುಂದಿದೆ. ಚುನಾವಣೆಗಳು ಬರುತ್ತಿವೆ. ಈ ಸುಲಿಗೆ ಸರಕಾರ ಹೋಗಬೇಕು. ಯಾರು ಅಧಿಕಾರಕ್ಕೆ ಬರುತ್ತಾರೆ ಎನ್ನುವುದಕ್ಕಿಂತ ಈ ಸರ್ಕಾರವನ್ನು ಸೋಲಿಸಬೇಕು ಎಂಬುದು ನಮ್ಮ ಮುಖ್ಯ ಗುರಿ. ತದನಂತರ ಗೆಲ್ಲುವ ಪಕ್ಷದೊಂದಿಗೆ ಜನರ ಹಕ್ಕುಗಳ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ನಾವು ಮುಂದುವರಿಸಬೇಕು – ಇದು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಕ್ರಿಯೆ. ಇದು ರಾಜ್ಯದ ಮತ್ತು ಜನತೆಯ ಭವಿಷ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಇಂದಿನ ಕರ್ನಾಟಕದ ನಾಗರಿಕ ಸಮಾಜದ ಮುಂದಿರುವ ವಾಸ್ತವಿಕ ಮತ್ತು ಜವಾಬ್ದಾರಿಯುತ ಕರ್ತವ್ಯ ಇದಾಗಿದೆ.

ಆಡಳಿತ ಪಕ್ಷದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ. ಈ ಅಸಮಾಧಾನವನ್ನು ರಾಜಕೀಯ ಜಾಗೃತಿಯಾಗಿ ಪರಿವರ್ತಿಸುವ ಅಗತ್ಯವಿದೆ. ನಾಗರಿಕ ಸಮಾಜ ಈ ಕಾರ್ಯಕ್ಕೆ ಮುಂದಾಗಬೇಕಿದೆ. ಹೀಗಾಗಿ ಒಂದು ದಿನವೂ ಸುಮ್ಮನೆ ಕೂರಲು ಸಾಧ್ಯವಿಲ್ಲ. ರಾಜ್ಯದ ಅಸ್ಮಿತೆ, ಪರಂಪರೆ, ಬದುಕು ಮತ್ತು ಭವಿಷ್ಯವನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು. ಸರಳ ಮತ್ತು ಜನಪ್ರಿಯ ನೆರೆಟಿವ್‌ಗಳ ಮೂಲಕ ಜನರಿಗೆ ಮನವರಿಕೆ ಮಾಡಬೇಕು – “ಸಾಕು ಸಾಕು, ಇದು ಎದ್ದೇಳುವ ಸಮಯ”.

ಈಗ ಸಂತಸದ ಸುದ್ದಿ ಏನೆಂದರೆ, ತಳಮಟ್ಟದಲ್ಲಿ ಜನರನ್ನು ತಲುಪಬಹುದಾದ ನೈತಿಕ ನಾಗರಿಕ ಅಭಿಯಾನಕ್ಕೆ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಅಭಿಯಾನವನ್ನು “ಎದ್ದೇಳು ಕರ್ನಾಟಕ” (ವೇಕ್ ಅಪ್ ಕರ್ನಾಟಕ) ಹೆಸರಿನಲ್ಲಿ ಪ್ರಾರಂಭಿಸಲಾಗುವುದು.

ಪಕ್ಷ, ಸಂಘಟನೆ, ಜಾತಿ, ಧರ್ಮದ ಎಲ್ಲೆಗಳನ್ನು ಬಿಟ್ಟು ರಾಜ್ಯ ಉಳಿಸಬೇಕಾಗಿದೆ. ಈ ಅಭಿಯಾನ ಆಶಾಕಿರಣವಾಗಿದೆ. ಈ ಅಭಿಯಾನದೊಂದಿಗೆ ನಾವು ಯಾವುದಾದರೂ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ಕರ್ನಾಟಕವನ್ನು ಉಳಿಸಲು “ಎದ್ದೇಳು ಕರ್ನಾಟಕ” ಕ್ಕೆ ಸ್ವಯಂಸೇವಕರಾಗಿ ನೋಂದಾಯಿಕೊಳ್ಳಿರಿ. ಮುಂದೆ ಬನ್ನಿರಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...