Homeಕರ್ನಾಟಕ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

- Advertisement -
- Advertisement -

ಭ್ರಷ್ಟಾಚಾರ, ಬೆಲೆ ಏರಿಕೆ, ದ್ವೇಷ ರಾಜಕಾರಣ, ರೈತ ಕಾರ್ಮಿಕರ ಸುಲಿಗೆ, ತಳ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ‘ಎದ್ದೇಳು ಕರ್ನಾಟಕ’ ಅಭಿಯಾನವನ್ನು ಕರ್ನಾಟಕ ನಾಗರಿಕರು ಆರಂಭಿಸಿದ್ದಾರೆ.

ಅಭಿಯಾನಕ್ಕೆ ಕೈ ಜೋಡಿಸಿಸಲು ಮೊ.ಸಂ. 9738833055 ಸಂಪರ್ಕಿಸಲು ಕೋರಲಾಗಿದೆ. ಸಾಹಿತಿ ದೇವನೂರ ಮಹಾದೇವ, ಮಾಜಿ ಕಾರ್ಮಿಕ ಸಚಿವ ಎಸ್.ಕೆ.ಕಾಂತ, ಜೆಎನ್‌ಯು ಕನ್ನಡ ಪೀಠದ ಸಂಸ್ಥಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, ಹೋರಾಟಗಾರ್ತಿ ದು.ಸರಸ್ವತಿ, ಲೇಖಕರಾದ ಡಾ.ರಹಮತ್ ತರೀಕೆರೆ, ಸಾಮಾಜಿಕ ಮಾನವಶಾಸ್ತ್ರಜ್ಞರಾದ, ಮಾಜಿ ಸಚಿವರಾದ ಎಚ್‌.ಏಕಾಂತಯ್ಯ, ನಾಡೋಜ ಕಮಲಾ ಹಂಪನಾ, ಕವಿ ಅಲ್ಲಮಪ್ರಭು ಬೆಟ್ಟದೂರು, ಆಮ್ನೇಸ್ಟಿ ಇಂಡಿಯಾದ ಮಾಜಿ ಪ್ರೊಗ್ರಾಮ್‌ ಡೈರೆಕ್ಟರ್‌ ತಾರಾ ರಾವ್‌, ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲೇನಿದೆ?

ಇಂದಿನ ಕರ್ನಾಟಕ ರಾಜಕಾರಣದ ವಿಷಕಾರಿ ಉಸಿರುಗಟ್ಟಿಸುವ ವಾತಾವರಣದಿಂದ ಮುಕ್ತವಾಗಿ ಉಸಿರಾಡಲು ಮತ್ತು ಚೇತರಿಸಿಕೊಳ್ಳಲು ನಮ್ಮ ರಾಜ್ಯಕ್ಕೆ ಸಾಧ್ಯವಾಗುತ್ತದೆಯೇ? ಇಲ್ಲವೇ? ಎಂಬುದನ್ನು ಮುಂಬರುವ ಚುನಾವಣೆಗಳು ನಿರ್ಧರಿಸಲಿವೆ. ಇನ್ನು ಕೆಲವೇ ದಿನಗಳು ಉಳಿದಿವೆ.

ಸ್ವಾತಂತ್ರ್ಯಾ ನಂತರದ ಇತಿಹಾಸದಲ್ಲಿ ಕಳೆದ 4 ವರ್ಷಗಳಲ್ಲಿ ಕರ್ನಾಟಕ ಅತ್ಯಂತ ಕೆಟ್ಟ ದಿನಗಳನ್ನು ಕಂಡಿದೆ. ಜನಾದೇಶವಿಲ್ಲದೆ ಅಧಿಕಾರ ಹಿಡಿದ ಸರಕಾರ ಈ ರಾಜ್ಯಕ್ಕೆ ಸಂಕಷ್ಟ ತಂದೊಡ್ಡಿದೆ. ಡಬಲ್ ಇಂಜಿನ್ ಸರ್ಕಾರದಿಂದ ಬೊಕ್ಕಸಕ್ಕೆ ಡಬಲ್ ಲೂಟಿ, ಊಹಿಸಲಾಗದಷ್ಟು ಭ್ರಷ್ಟಾಚಾರ, ಮಾರಕ ಬೆಲೆ ಏರಿಕೆ, ಶಿಕ್ಷಣ-ಆರೋಗ್ಯದ ಹೆಸರಿನಲ್ಲಿ ಹಗಲು ದರೋಡೆ, ದುಡಿಯುವ ಜನರನ್ನು ಅನಾಥರನ್ನಾಗಿಸುವ ಸರಣಿ ಕಾಯ್ದೆಗಳು, ಯುವಕರ ಕನಸಿನ ಕತ್ತು ಹಿಸುಕುವ ನಿರುದ್ಯೋಗ, ಮಾರುಕಟ್ಟೆ ಕುಂಠಿತ, ಕುಸಿದ ವಹಿವಾಟು, ಗಗನಕ್ಕೇರುತ್ತಿರುವ ಸಾಲಗಳು, ಮಿತಿಮೀರಿದ ಅತ್ಯಾಚಾರ, ದಮನ ಮತ್ತು ಸಾಮಾಜಿಕ ಘರ್ಷಣೆಗಳು, ಹೆಚ್ಚುತ್ತಿರುವ ಜಾತಿಗಳ ನಡುವಿನ ಉದ್ವಿಗ್ನತೆ, ಧಾರ್ಮಿಕತೆಯನ್ನು ಕೆರಳಿಸುವುದು, ದ್ವೇಷ- ಇವೆಲ್ಲ ಈ ಸರ್ಕಾರದ ಆಡಳಿತದ ಫಲ.

ಈ ದುರಂತ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರುವ ಅವಕಾಶ ರಾಜ್ಯದ ಜನತೆಯ ಮುಂದಿದೆ. ಚುನಾವಣೆಗಳು ಬರುತ್ತಿವೆ. ಈ ಸುಲಿಗೆ ಸರಕಾರ ಹೋಗಬೇಕು. ಯಾರು ಅಧಿಕಾರಕ್ಕೆ ಬರುತ್ತಾರೆ ಎನ್ನುವುದಕ್ಕಿಂತ ಈ ಸರ್ಕಾರವನ್ನು ಸೋಲಿಸಬೇಕು ಎಂಬುದು ನಮ್ಮ ಮುಖ್ಯ ಗುರಿ. ತದನಂತರ ಗೆಲ್ಲುವ ಪಕ್ಷದೊಂದಿಗೆ ಜನರ ಹಕ್ಕುಗಳ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ನಾವು ಮುಂದುವರಿಸಬೇಕು – ಇದು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಕ್ರಿಯೆ. ಇದು ರಾಜ್ಯದ ಮತ್ತು ಜನತೆಯ ಭವಿಷ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಇಂದಿನ ಕರ್ನಾಟಕದ ನಾಗರಿಕ ಸಮಾಜದ ಮುಂದಿರುವ ವಾಸ್ತವಿಕ ಮತ್ತು ಜವಾಬ್ದಾರಿಯುತ ಕರ್ತವ್ಯ ಇದಾಗಿದೆ.

ಆಡಳಿತ ಪಕ್ಷದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ. ಈ ಅಸಮಾಧಾನವನ್ನು ರಾಜಕೀಯ ಜಾಗೃತಿಯಾಗಿ ಪರಿವರ್ತಿಸುವ ಅಗತ್ಯವಿದೆ. ನಾಗರಿಕ ಸಮಾಜ ಈ ಕಾರ್ಯಕ್ಕೆ ಮುಂದಾಗಬೇಕಿದೆ. ಹೀಗಾಗಿ ಒಂದು ದಿನವೂ ಸುಮ್ಮನೆ ಕೂರಲು ಸಾಧ್ಯವಿಲ್ಲ. ರಾಜ್ಯದ ಅಸ್ಮಿತೆ, ಪರಂಪರೆ, ಬದುಕು ಮತ್ತು ಭವಿಷ್ಯವನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು. ಸರಳ ಮತ್ತು ಜನಪ್ರಿಯ ನೆರೆಟಿವ್‌ಗಳ ಮೂಲಕ ಜನರಿಗೆ ಮನವರಿಕೆ ಮಾಡಬೇಕು – “ಸಾಕು ಸಾಕು, ಇದು ಎದ್ದೇಳುವ ಸಮಯ”.

ಈಗ ಸಂತಸದ ಸುದ್ದಿ ಏನೆಂದರೆ, ತಳಮಟ್ಟದಲ್ಲಿ ಜನರನ್ನು ತಲುಪಬಹುದಾದ ನೈತಿಕ ನಾಗರಿಕ ಅಭಿಯಾನಕ್ಕೆ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಅಭಿಯಾನವನ್ನು “ಎದ್ದೇಳು ಕರ್ನಾಟಕ” (ವೇಕ್ ಅಪ್ ಕರ್ನಾಟಕ) ಹೆಸರಿನಲ್ಲಿ ಪ್ರಾರಂಭಿಸಲಾಗುವುದು.

ಪಕ್ಷ, ಸಂಘಟನೆ, ಜಾತಿ, ಧರ್ಮದ ಎಲ್ಲೆಗಳನ್ನು ಬಿಟ್ಟು ರಾಜ್ಯ ಉಳಿಸಬೇಕಾಗಿದೆ. ಈ ಅಭಿಯಾನ ಆಶಾಕಿರಣವಾಗಿದೆ. ಈ ಅಭಿಯಾನದೊಂದಿಗೆ ನಾವು ಯಾವುದಾದರೂ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ಕರ್ನಾಟಕವನ್ನು ಉಳಿಸಲು “ಎದ್ದೇಳು ಕರ್ನಾಟಕ” ಕ್ಕೆ ಸ್ವಯಂಸೇವಕರಾಗಿ ನೋಂದಾಯಿಕೊಳ್ಳಿರಿ. ಮುಂದೆ ಬನ್ನಿರಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...