Homeಕರ್ನಾಟಕ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

- Advertisement -
- Advertisement -

ಭ್ರಷ್ಟಾಚಾರ, ಬೆಲೆ ಏರಿಕೆ, ದ್ವೇಷ ರಾಜಕಾರಣ, ರೈತ ಕಾರ್ಮಿಕರ ಸುಲಿಗೆ, ತಳ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ‘ಎದ್ದೇಳು ಕರ್ನಾಟಕ’ ಅಭಿಯಾನವನ್ನು ಕರ್ನಾಟಕ ನಾಗರಿಕರು ಆರಂಭಿಸಿದ್ದಾರೆ.

ಅಭಿಯಾನಕ್ಕೆ ಕೈ ಜೋಡಿಸಿಸಲು ಮೊ.ಸಂ. 9738833055 ಸಂಪರ್ಕಿಸಲು ಕೋರಲಾಗಿದೆ. ಸಾಹಿತಿ ದೇವನೂರ ಮಹಾದೇವ, ಮಾಜಿ ಕಾರ್ಮಿಕ ಸಚಿವ ಎಸ್.ಕೆ.ಕಾಂತ, ಜೆಎನ್‌ಯು ಕನ್ನಡ ಪೀಠದ ಸಂಸ್ಥಾಪಕರಾದ ಪ್ರೊ.ಪುರುಷೋತ್ತಮ ಬಿಳಿಮಲೆ, ಸಾಹಿತಿ ದೇವನೂರ ಮಹಾದೇವ, ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, ಹೋರಾಟಗಾರ್ತಿ ದು.ಸರಸ್ವತಿ, ಲೇಖಕರಾದ ಡಾ.ರಹಮತ್ ತರೀಕೆರೆ, ಸಾಮಾಜಿಕ ಮಾನವಶಾಸ್ತ್ರಜ್ಞರಾದ, ಮಾಜಿ ಸಚಿವರಾದ ಎಚ್‌.ಏಕಾಂತಯ್ಯ, ನಾಡೋಜ ಕಮಲಾ ಹಂಪನಾ, ಕವಿ ಅಲ್ಲಮಪ್ರಭು ಬೆಟ್ಟದೂರು, ಆಮ್ನೇಸ್ಟಿ ಇಂಡಿಯಾದ ಮಾಜಿ ಪ್ರೊಗ್ರಾಮ್‌ ಡೈರೆಕ್ಟರ್‌ ತಾರಾ ರಾವ್‌, ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲೇನಿದೆ?

ಇಂದಿನ ಕರ್ನಾಟಕ ರಾಜಕಾರಣದ ವಿಷಕಾರಿ ಉಸಿರುಗಟ್ಟಿಸುವ ವಾತಾವರಣದಿಂದ ಮುಕ್ತವಾಗಿ ಉಸಿರಾಡಲು ಮತ್ತು ಚೇತರಿಸಿಕೊಳ್ಳಲು ನಮ್ಮ ರಾಜ್ಯಕ್ಕೆ ಸಾಧ್ಯವಾಗುತ್ತದೆಯೇ? ಇಲ್ಲವೇ? ಎಂಬುದನ್ನು ಮುಂಬರುವ ಚುನಾವಣೆಗಳು ನಿರ್ಧರಿಸಲಿವೆ. ಇನ್ನು ಕೆಲವೇ ದಿನಗಳು ಉಳಿದಿವೆ.

ಸ್ವಾತಂತ್ರ್ಯಾ ನಂತರದ ಇತಿಹಾಸದಲ್ಲಿ ಕಳೆದ 4 ವರ್ಷಗಳಲ್ಲಿ ಕರ್ನಾಟಕ ಅತ್ಯಂತ ಕೆಟ್ಟ ದಿನಗಳನ್ನು ಕಂಡಿದೆ. ಜನಾದೇಶವಿಲ್ಲದೆ ಅಧಿಕಾರ ಹಿಡಿದ ಸರಕಾರ ಈ ರಾಜ್ಯಕ್ಕೆ ಸಂಕಷ್ಟ ತಂದೊಡ್ಡಿದೆ. ಡಬಲ್ ಇಂಜಿನ್ ಸರ್ಕಾರದಿಂದ ಬೊಕ್ಕಸಕ್ಕೆ ಡಬಲ್ ಲೂಟಿ, ಊಹಿಸಲಾಗದಷ್ಟು ಭ್ರಷ್ಟಾಚಾರ, ಮಾರಕ ಬೆಲೆ ಏರಿಕೆ, ಶಿಕ್ಷಣ-ಆರೋಗ್ಯದ ಹೆಸರಿನಲ್ಲಿ ಹಗಲು ದರೋಡೆ, ದುಡಿಯುವ ಜನರನ್ನು ಅನಾಥರನ್ನಾಗಿಸುವ ಸರಣಿ ಕಾಯ್ದೆಗಳು, ಯುವಕರ ಕನಸಿನ ಕತ್ತು ಹಿಸುಕುವ ನಿರುದ್ಯೋಗ, ಮಾರುಕಟ್ಟೆ ಕುಂಠಿತ, ಕುಸಿದ ವಹಿವಾಟು, ಗಗನಕ್ಕೇರುತ್ತಿರುವ ಸಾಲಗಳು, ಮಿತಿಮೀರಿದ ಅತ್ಯಾಚಾರ, ದಮನ ಮತ್ತು ಸಾಮಾಜಿಕ ಘರ್ಷಣೆಗಳು, ಹೆಚ್ಚುತ್ತಿರುವ ಜಾತಿಗಳ ನಡುವಿನ ಉದ್ವಿಗ್ನತೆ, ಧಾರ್ಮಿಕತೆಯನ್ನು ಕೆರಳಿಸುವುದು, ದ್ವೇಷ- ಇವೆಲ್ಲ ಈ ಸರ್ಕಾರದ ಆಡಳಿತದ ಫಲ.

ಈ ದುರಂತ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರುವ ಅವಕಾಶ ರಾಜ್ಯದ ಜನತೆಯ ಮುಂದಿದೆ. ಚುನಾವಣೆಗಳು ಬರುತ್ತಿವೆ. ಈ ಸುಲಿಗೆ ಸರಕಾರ ಹೋಗಬೇಕು. ಯಾರು ಅಧಿಕಾರಕ್ಕೆ ಬರುತ್ತಾರೆ ಎನ್ನುವುದಕ್ಕಿಂತ ಈ ಸರ್ಕಾರವನ್ನು ಸೋಲಿಸಬೇಕು ಎಂಬುದು ನಮ್ಮ ಮುಖ್ಯ ಗುರಿ. ತದನಂತರ ಗೆಲ್ಲುವ ಪಕ್ಷದೊಂದಿಗೆ ಜನರ ಹಕ್ಕುಗಳ ಮರುಸ್ಥಾಪನೆಗಾಗಿ ನಮ್ಮ ಹೋರಾಟವನ್ನು ನಾವು ಮುಂದುವರಿಸಬೇಕು – ಇದು ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಕ್ರಿಯೆ. ಇದು ರಾಜ್ಯದ ಮತ್ತು ಜನತೆಯ ಭವಿಷ್ಯಕ್ಕೆ ಅತ್ಯಂತ ಅವಶ್ಯಕವಾಗಿದೆ. ಇಂದಿನ ಕರ್ನಾಟಕದ ನಾಗರಿಕ ಸಮಾಜದ ಮುಂದಿರುವ ವಾಸ್ತವಿಕ ಮತ್ತು ಜವಾಬ್ದಾರಿಯುತ ಕರ್ತವ್ಯ ಇದಾಗಿದೆ.

ಆಡಳಿತ ಪಕ್ಷದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ. ಈ ಅಸಮಾಧಾನವನ್ನು ರಾಜಕೀಯ ಜಾಗೃತಿಯಾಗಿ ಪರಿವರ್ತಿಸುವ ಅಗತ್ಯವಿದೆ. ನಾಗರಿಕ ಸಮಾಜ ಈ ಕಾರ್ಯಕ್ಕೆ ಮುಂದಾಗಬೇಕಿದೆ. ಹೀಗಾಗಿ ಒಂದು ದಿನವೂ ಸುಮ್ಮನೆ ಕೂರಲು ಸಾಧ್ಯವಿಲ್ಲ. ರಾಜ್ಯದ ಅಸ್ಮಿತೆ, ಪರಂಪರೆ, ಬದುಕು ಮತ್ತು ಭವಿಷ್ಯವನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು. ಸರಳ ಮತ್ತು ಜನಪ್ರಿಯ ನೆರೆಟಿವ್‌ಗಳ ಮೂಲಕ ಜನರಿಗೆ ಮನವರಿಕೆ ಮಾಡಬೇಕು – “ಸಾಕು ಸಾಕು, ಇದು ಎದ್ದೇಳುವ ಸಮಯ”.

ಈಗ ಸಂತಸದ ಸುದ್ದಿ ಏನೆಂದರೆ, ತಳಮಟ್ಟದಲ್ಲಿ ಜನರನ್ನು ತಲುಪಬಹುದಾದ ನೈತಿಕ ನಾಗರಿಕ ಅಭಿಯಾನಕ್ಕೆ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಅಭಿಯಾನವನ್ನು “ಎದ್ದೇಳು ಕರ್ನಾಟಕ” (ವೇಕ್ ಅಪ್ ಕರ್ನಾಟಕ) ಹೆಸರಿನಲ್ಲಿ ಪ್ರಾರಂಭಿಸಲಾಗುವುದು.

ಪಕ್ಷ, ಸಂಘಟನೆ, ಜಾತಿ, ಧರ್ಮದ ಎಲ್ಲೆಗಳನ್ನು ಬಿಟ್ಟು ರಾಜ್ಯ ಉಳಿಸಬೇಕಾಗಿದೆ. ಈ ಅಭಿಯಾನ ಆಶಾಕಿರಣವಾಗಿದೆ. ಈ ಅಭಿಯಾನದೊಂದಿಗೆ ನಾವು ಯಾವುದಾದರೂ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ಕರ್ನಾಟಕವನ್ನು ಉಳಿಸಲು “ಎದ್ದೇಳು ಕರ್ನಾಟಕ” ಕ್ಕೆ ಸ್ವಯಂಸೇವಕರಾಗಿ ನೋಂದಾಯಿಕೊಳ್ಳಿರಿ. ಮುಂದೆ ಬನ್ನಿರಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...