Homeಮುಖಪುಟಪ್ರಧಾನಿಯಿಂದ ದೀಪ ಹಚ್ಚುವಂತೆ ಕರೆ‍ : ಗಮನಸೆಳೆದ 5 ಪ್ರತಿಕ್ರಿಯೆಗಳು

ಪ್ರಧಾನಿಯಿಂದ ದೀಪ ಹಚ್ಚುವಂತೆ ಕರೆ‍ : ಗಮನಸೆಳೆದ 5 ಪ್ರತಿಕ್ರಿಯೆಗಳು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು “ಕೊರೊನಾ ವೈರಸ್ ವಿರುದ್ದ ರಾಷ್ಟ್ರದ ಸಾಮೂಹಿಕ ಮನೋಭಾವವನ್ನು ಪ್ರದರ್ಶಿಸಲು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಬಾಲ್ಕನಿಗಳಲ್ಲಿ ದೀಪ ಹಚ್ಚುವಂತೆ” ದೇಶದ ಜನತೆಯಲ್ಲಿ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಕೊರೊನ ವೈರಸ್ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ತನ್ನ ಮೂರನೇ ಭಾಷಣ ಇದಾಗಿದ್ದು, ಏಪ್ರಿಲ್ 5 ರ ಭಾನುವಾರದಂದು ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ತಮ್ಮ ಮನೆಗಳ ದೀಪಗಳನ್ನು ಸ್ವಿಚ್ ಆಫ್ ಮಾಡಿ, ದೀಪಗಳು, ಮೇಣದ ಬತ್ತಿಗಳು, ಮೊಬೈಲ್ ಬ್ಯಾಟರಿ ದೀಪಗಳನ್ನು ಬೆಳಗಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿಯ ಈ ಕರೆ‌ಗೆ ಟ್ವಿಟ್ಟರ್‌ನಲ್ಲಿ ಬೆಂಬಲ ಹಾಗೂ ತೀವ್ರ ಟೀಕೆಗಳ ಸುರಿಮಳೆಯನ್ನೇ ಉಂಟುಮಾಡಿದೆ. ಕೊರೊನ ವೈರಸ್‌ ವಿರುದ್ಧ ಹೋರಾಡಲು ಟೆಸ್ಟಿಂಗ್‌ ಕಿಟ್‌ಗಳು, ವೈದ್ಯಕೀಯ ಸಲಕರಣೆಗಳು, ಸುಸಜ್ಜಿತ ಆಸ್ಪತ್ರೆಗಳ ಮೇಲೆ ಗಮನ ನೀಡುವುದನ್ನು ಬಿಟ್ಟು ಕೇವಲ ಹೇಳಿಕೆ-ಟಾಸ್ಕ್‌ಗಳನ್ನು ನೀಡುವಲ್ಲಿ ನಿರತರಾಗಿದ್ದಾರೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ.

ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು “ಪ್ರಧಾನ ಶೋ ಮ್ಯಾನ್‌ನ ಭಾಷಣ ಕೇಳಿದೆ,  ಜನರ ನೋವು, ಹೊರೆ ಮತ್ತು ಆರ್ಥಿಕ ಆತಂಕಗಳನ್ನು ಕಡಿಮೆ ಮಾಡಲು ಏನನ್ನೂ ಮಾಡಲಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತ ಸ್ವಾತಿ ಚತುರ್ವೇದಿ ಅವರು ’’ದೀಪಗಳ ಮೇಲೆ ಈ ಸ್ವಿಚ್ ಏನನ್ನು ಸಾಧಿಸಲಿದೆ? ನಮಗೆ ಹೆಚ್ಚಿನ ಪರೀಕ್ಷೆಗಳು, ಮುಖವಾಡಗಳು, ಆಸ್ಪತ್ರೆಗಳು ಮತ್ತು ರಕ್ಷಣಾ ಸಾಧನಗಳು ಬೇಕಾಗುತ್ತವೆ” ಎಂದು ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮ್ ಅವರು “ಕೊರೊನವನ್ನು ಒಟ್ಟಿಗೆ ಸೋಲಿಸೋಣ, ತಾಯಿ ಭಾರತಿ ಗೆಲ್ಲಲಿ. ಏಪ್ರಿಲ್ 5 ರ ಭಾನುವಾರದಂದು ನೆನಪಿಡಿ, ನಿಮ್ಮ ಬಾಲ್ಕನಿಯಲ್ಲಿ ಅಥವಾ ಬಾಗಿಲಿನ ಹೊರಗೆ 9 ನಿಮಿಷಗಳ ಕಾಲ ನಿಮ್ಮ ಕೈಯಲ್ಲಿ ಒಂದು ಬೆಳಕನ್ನು ಇರಿಸಿ ಮತ್ತು ಈ ಹೋರಾಟದಲ್ಲಿ ನಾವೆಲ್ಲರೂ ಒಟ್ಟಾಗಿರುವುದನ್ನು ನೆನಪಿಸಿ” ಎಂದು ಹೇಳಿದ್ದಾರೆ.

ಮೀಮ್ಸ್‌ಗಳಂತೂ ಕೆಲವೇ ಗಂಟೆಗಳಲ್ಲಿ ವೈರಲ್‌ ಆಗಿವೆ. ಕೆಲವೊಂದು ಇಲ್ಲಿವೆ

 

ಪತ್ರಕರ್ತ ಅತುಲ್ ಚೌರಾಸಿಯಾ ಕೂಡ ಪ್ರಧಾನಿ ವೈದ್ಯಕೀಯ ಸೌಲಭ್ಯ ಮತ್ತು ಭವಿಷ್ಯದ ವೈದ್ಯಕೀಯ ಯೋಜನೆಯ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ. “ಆದರೆ ಅವರು ಮತ್ತೊಂದು ನಾಟಕಕ್ಕಾಗಿ ಮನವಿ ಮಾಡುತ್ತಾರೆ” ಎಂದು ಹೇಳಿದ್ದಾರೆ.

ಇತಿಹಾಸಕಾರ ರಾಮಚಂದ್ರ ಗುಹಾ ಅವರು ಪ್ರಧಾನ ಮಂತ್ರಿಯ ಭಾಷಣವನ್ನು ‘ದುರಂತದ ಸಮಯದಲ್ಲಿ ಒಂದು ಪ್ರಹಸನ’ ಎಂದು ಬಣ್ಣಿಸಿದರು.

 

ಮೈಸೂರು ಸಂಸದರಾದ ಪ್ರತಾಪ್ ಸಿಂಹ ಅವರು ಪ್ರಧಾನಿಯ ಕರೆಯನ್ನು ಬೆಂಬಲಿಸಿ, “ಪ್ರಧಾನಿ ಮೋದೀಜಿಯವರ ಕರೆಯ ಹಿನ್ನೆಲೆಯಲ್ಲಿ ನಾಳೆ ಮೈಸೂರು ನಗರ ಅಧ್ಯಕ್ಷರಾದ ಶ್ರೀವತ್ಸ ಅವರ ನೇತೃತ್ವದಲ್ಲಿ ದೀಪ ಮತ್ತು ಕ್ಯಾಂಡಲುಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು” ಎಂದು ಟ್ವೀಟ್ ಮಾಡಿದ್ದಾರೆ.

ಸಂಘ ಪರಿವಾರದ ಸಾಮಾಜಿಕ ಮಾಧ್ಯಮ ತಪ್ಪು ಮಾಹಿತಿ ಅಭಿಯಾನದಲ್ಲಿ ತೊಡಗಿವೆ. 9 ನಿಮಿಷಗಳ ಬೆಳಕು ವೈರಸ್ ಅನ್ನು ಹೇಗೆ ಕೊಲ್ಲುತ್ತದೆ ಎಂಬುದರ ಕುರಿತು ನಾವು ಎಷ್ಟು ಬೇಗ ವಾಟ್ಸಾಪ್ ಫಾರ್ವರ್ಡ್‌ಗಳನ್ನು ಪಡೆಯುತ್ತೇವೆ ಎಂದು ಪತ್ರಕರ್ತ ರೋಹನ್ ವೆಂಕಟ್ ಆಶ್ಚರ್ಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...