Homeಮುಖಪುಟಪ್ರಧಾನಿಯಿಂದ ದೀಪ ಹಚ್ಚುವಂತೆ ಕರೆ‍ : ಗಮನಸೆಳೆದ 5 ಪ್ರತಿಕ್ರಿಯೆಗಳು

ಪ್ರಧಾನಿಯಿಂದ ದೀಪ ಹಚ್ಚುವಂತೆ ಕರೆ‍ : ಗಮನಸೆಳೆದ 5 ಪ್ರತಿಕ್ರಿಯೆಗಳು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು “ಕೊರೊನಾ ವೈರಸ್ ವಿರುದ್ದ ರಾಷ್ಟ್ರದ ಸಾಮೂಹಿಕ ಮನೋಭಾವವನ್ನು ಪ್ರದರ್ಶಿಸಲು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಬಾಲ್ಕನಿಗಳಲ್ಲಿ ದೀಪ ಹಚ್ಚುವಂತೆ” ದೇಶದ ಜನತೆಯಲ್ಲಿ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಕೊರೊನ ವೈರಸ್ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ತನ್ನ ಮೂರನೇ ಭಾಷಣ ಇದಾಗಿದ್ದು, ಏಪ್ರಿಲ್ 5 ರ ಭಾನುವಾರದಂದು ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ತಮ್ಮ ಮನೆಗಳ ದೀಪಗಳನ್ನು ಸ್ವಿಚ್ ಆಫ್ ಮಾಡಿ, ದೀಪಗಳು, ಮೇಣದ ಬತ್ತಿಗಳು, ಮೊಬೈಲ್ ಬ್ಯಾಟರಿ ದೀಪಗಳನ್ನು ಬೆಳಗಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿಯ ಈ ಕರೆ‌ಗೆ ಟ್ವಿಟ್ಟರ್‌ನಲ್ಲಿ ಬೆಂಬಲ ಹಾಗೂ ತೀವ್ರ ಟೀಕೆಗಳ ಸುರಿಮಳೆಯನ್ನೇ ಉಂಟುಮಾಡಿದೆ. ಕೊರೊನ ವೈರಸ್‌ ವಿರುದ್ಧ ಹೋರಾಡಲು ಟೆಸ್ಟಿಂಗ್‌ ಕಿಟ್‌ಗಳು, ವೈದ್ಯಕೀಯ ಸಲಕರಣೆಗಳು, ಸುಸಜ್ಜಿತ ಆಸ್ಪತ್ರೆಗಳ ಮೇಲೆ ಗಮನ ನೀಡುವುದನ್ನು ಬಿಟ್ಟು ಕೇವಲ ಹೇಳಿಕೆ-ಟಾಸ್ಕ್‌ಗಳನ್ನು ನೀಡುವಲ್ಲಿ ನಿರತರಾಗಿದ್ದಾರೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ.

ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು “ಪ್ರಧಾನ ಶೋ ಮ್ಯಾನ್‌ನ ಭಾಷಣ ಕೇಳಿದೆ,  ಜನರ ನೋವು, ಹೊರೆ ಮತ್ತು ಆರ್ಥಿಕ ಆತಂಕಗಳನ್ನು ಕಡಿಮೆ ಮಾಡಲು ಏನನ್ನೂ ಮಾಡಲಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತ ಸ್ವಾತಿ ಚತುರ್ವೇದಿ ಅವರು ’’ದೀಪಗಳ ಮೇಲೆ ಈ ಸ್ವಿಚ್ ಏನನ್ನು ಸಾಧಿಸಲಿದೆ? ನಮಗೆ ಹೆಚ್ಚಿನ ಪರೀಕ್ಷೆಗಳು, ಮುಖವಾಡಗಳು, ಆಸ್ಪತ್ರೆಗಳು ಮತ್ತು ರಕ್ಷಣಾ ಸಾಧನಗಳು ಬೇಕಾಗುತ್ತವೆ” ಎಂದು ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮ್ ಅವರು “ಕೊರೊನವನ್ನು ಒಟ್ಟಿಗೆ ಸೋಲಿಸೋಣ, ತಾಯಿ ಭಾರತಿ ಗೆಲ್ಲಲಿ. ಏಪ್ರಿಲ್ 5 ರ ಭಾನುವಾರದಂದು ನೆನಪಿಡಿ, ನಿಮ್ಮ ಬಾಲ್ಕನಿಯಲ್ಲಿ ಅಥವಾ ಬಾಗಿಲಿನ ಹೊರಗೆ 9 ನಿಮಿಷಗಳ ಕಾಲ ನಿಮ್ಮ ಕೈಯಲ್ಲಿ ಒಂದು ಬೆಳಕನ್ನು ಇರಿಸಿ ಮತ್ತು ಈ ಹೋರಾಟದಲ್ಲಿ ನಾವೆಲ್ಲರೂ ಒಟ್ಟಾಗಿರುವುದನ್ನು ನೆನಪಿಸಿ” ಎಂದು ಹೇಳಿದ್ದಾರೆ.

ಮೀಮ್ಸ್‌ಗಳಂತೂ ಕೆಲವೇ ಗಂಟೆಗಳಲ್ಲಿ ವೈರಲ್‌ ಆಗಿವೆ. ಕೆಲವೊಂದು ಇಲ್ಲಿವೆ

 

ಪತ್ರಕರ್ತ ಅತುಲ್ ಚೌರಾಸಿಯಾ ಕೂಡ ಪ್ರಧಾನಿ ವೈದ್ಯಕೀಯ ಸೌಲಭ್ಯ ಮತ್ತು ಭವಿಷ್ಯದ ವೈದ್ಯಕೀಯ ಯೋಜನೆಯ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ. “ಆದರೆ ಅವರು ಮತ್ತೊಂದು ನಾಟಕಕ್ಕಾಗಿ ಮನವಿ ಮಾಡುತ್ತಾರೆ” ಎಂದು ಹೇಳಿದ್ದಾರೆ.

ಇತಿಹಾಸಕಾರ ರಾಮಚಂದ್ರ ಗುಹಾ ಅವರು ಪ್ರಧಾನ ಮಂತ್ರಿಯ ಭಾಷಣವನ್ನು ‘ದುರಂತದ ಸಮಯದಲ್ಲಿ ಒಂದು ಪ್ರಹಸನ’ ಎಂದು ಬಣ್ಣಿಸಿದರು.

 

ಮೈಸೂರು ಸಂಸದರಾದ ಪ್ರತಾಪ್ ಸಿಂಹ ಅವರು ಪ್ರಧಾನಿಯ ಕರೆಯನ್ನು ಬೆಂಬಲಿಸಿ, “ಪ್ರಧಾನಿ ಮೋದೀಜಿಯವರ ಕರೆಯ ಹಿನ್ನೆಲೆಯಲ್ಲಿ ನಾಳೆ ಮೈಸೂರು ನಗರ ಅಧ್ಯಕ್ಷರಾದ ಶ್ರೀವತ್ಸ ಅವರ ನೇತೃತ್ವದಲ್ಲಿ ದೀಪ ಮತ್ತು ಕ್ಯಾಂಡಲುಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು” ಎಂದು ಟ್ವೀಟ್ ಮಾಡಿದ್ದಾರೆ.

ಸಂಘ ಪರಿವಾರದ ಸಾಮಾಜಿಕ ಮಾಧ್ಯಮ ತಪ್ಪು ಮಾಹಿತಿ ಅಭಿಯಾನದಲ್ಲಿ ತೊಡಗಿವೆ. 9 ನಿಮಿಷಗಳ ಬೆಳಕು ವೈರಸ್ ಅನ್ನು ಹೇಗೆ ಕೊಲ್ಲುತ್ತದೆ ಎಂಬುದರ ಕುರಿತು ನಾವು ಎಷ್ಟು ಬೇಗ ವಾಟ್ಸಾಪ್ ಫಾರ್ವರ್ಡ್‌ಗಳನ್ನು ಪಡೆಯುತ್ತೇವೆ ಎಂದು ಪತ್ರಕರ್ತ ರೋಹನ್ ವೆಂಕಟ್ ಆಶ್ಚರ್ಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...