Homeಮುಖಪುಟಪ್ರಧಾನಿಯಿಂದ ದೀಪ ಹಚ್ಚುವಂತೆ ಕರೆ‍ : ಗಮನಸೆಳೆದ 5 ಪ್ರತಿಕ್ರಿಯೆಗಳು

ಪ್ರಧಾನಿಯಿಂದ ದೀಪ ಹಚ್ಚುವಂತೆ ಕರೆ‍ : ಗಮನಸೆಳೆದ 5 ಪ್ರತಿಕ್ರಿಯೆಗಳು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು “ಕೊರೊನಾ ವೈರಸ್ ವಿರುದ್ದ ರಾಷ್ಟ್ರದ ಸಾಮೂಹಿಕ ಮನೋಭಾವವನ್ನು ಪ್ರದರ್ಶಿಸಲು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಬಾಲ್ಕನಿಗಳಲ್ಲಿ ದೀಪ ಹಚ್ಚುವಂತೆ” ದೇಶದ ಜನತೆಯಲ್ಲಿ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಕೊರೊನ ವೈರಸ್ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ತನ್ನ ಮೂರನೇ ಭಾಷಣ ಇದಾಗಿದ್ದು, ಏಪ್ರಿಲ್ 5 ರ ಭಾನುವಾರದಂದು ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ತಮ್ಮ ಮನೆಗಳ ದೀಪಗಳನ್ನು ಸ್ವಿಚ್ ಆಫ್ ಮಾಡಿ, ದೀಪಗಳು, ಮೇಣದ ಬತ್ತಿಗಳು, ಮೊಬೈಲ್ ಬ್ಯಾಟರಿ ದೀಪಗಳನ್ನು ಬೆಳಗಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿಯ ಈ ಕರೆ‌ಗೆ ಟ್ವಿಟ್ಟರ್‌ನಲ್ಲಿ ಬೆಂಬಲ ಹಾಗೂ ತೀವ್ರ ಟೀಕೆಗಳ ಸುರಿಮಳೆಯನ್ನೇ ಉಂಟುಮಾಡಿದೆ. ಕೊರೊನ ವೈರಸ್‌ ವಿರುದ್ಧ ಹೋರಾಡಲು ಟೆಸ್ಟಿಂಗ್‌ ಕಿಟ್‌ಗಳು, ವೈದ್ಯಕೀಯ ಸಲಕರಣೆಗಳು, ಸುಸಜ್ಜಿತ ಆಸ್ಪತ್ರೆಗಳ ಮೇಲೆ ಗಮನ ನೀಡುವುದನ್ನು ಬಿಟ್ಟು ಕೇವಲ ಹೇಳಿಕೆ-ಟಾಸ್ಕ್‌ಗಳನ್ನು ನೀಡುವಲ್ಲಿ ನಿರತರಾಗಿದ್ದಾರೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ.

ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು “ಪ್ರಧಾನ ಶೋ ಮ್ಯಾನ್‌ನ ಭಾಷಣ ಕೇಳಿದೆ,  ಜನರ ನೋವು, ಹೊರೆ ಮತ್ತು ಆರ್ಥಿಕ ಆತಂಕಗಳನ್ನು ಕಡಿಮೆ ಮಾಡಲು ಏನನ್ನೂ ಮಾಡಲಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತ ಸ್ವಾತಿ ಚತುರ್ವೇದಿ ಅವರು ’’ದೀಪಗಳ ಮೇಲೆ ಈ ಸ್ವಿಚ್ ಏನನ್ನು ಸಾಧಿಸಲಿದೆ? ನಮಗೆ ಹೆಚ್ಚಿನ ಪರೀಕ್ಷೆಗಳು, ಮುಖವಾಡಗಳು, ಆಸ್ಪತ್ರೆಗಳು ಮತ್ತು ರಕ್ಷಣಾ ಸಾಧನಗಳು ಬೇಕಾಗುತ್ತವೆ” ಎಂದು ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮ್ ಅವರು “ಕೊರೊನವನ್ನು ಒಟ್ಟಿಗೆ ಸೋಲಿಸೋಣ, ತಾಯಿ ಭಾರತಿ ಗೆಲ್ಲಲಿ. ಏಪ್ರಿಲ್ 5 ರ ಭಾನುವಾರದಂದು ನೆನಪಿಡಿ, ನಿಮ್ಮ ಬಾಲ್ಕನಿಯಲ್ಲಿ ಅಥವಾ ಬಾಗಿಲಿನ ಹೊರಗೆ 9 ನಿಮಿಷಗಳ ಕಾಲ ನಿಮ್ಮ ಕೈಯಲ್ಲಿ ಒಂದು ಬೆಳಕನ್ನು ಇರಿಸಿ ಮತ್ತು ಈ ಹೋರಾಟದಲ್ಲಿ ನಾವೆಲ್ಲರೂ ಒಟ್ಟಾಗಿರುವುದನ್ನು ನೆನಪಿಸಿ” ಎಂದು ಹೇಳಿದ್ದಾರೆ.

ಮೀಮ್ಸ್‌ಗಳಂತೂ ಕೆಲವೇ ಗಂಟೆಗಳಲ್ಲಿ ವೈರಲ್‌ ಆಗಿವೆ. ಕೆಲವೊಂದು ಇಲ್ಲಿವೆ

 

ಪತ್ರಕರ್ತ ಅತುಲ್ ಚೌರಾಸಿಯಾ ಕೂಡ ಪ್ರಧಾನಿ ವೈದ್ಯಕೀಯ ಸೌಲಭ್ಯ ಮತ್ತು ಭವಿಷ್ಯದ ವೈದ್ಯಕೀಯ ಯೋಜನೆಯ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ. “ಆದರೆ ಅವರು ಮತ್ತೊಂದು ನಾಟಕಕ್ಕಾಗಿ ಮನವಿ ಮಾಡುತ್ತಾರೆ” ಎಂದು ಹೇಳಿದ್ದಾರೆ.

ಇತಿಹಾಸಕಾರ ರಾಮಚಂದ್ರ ಗುಹಾ ಅವರು ಪ್ರಧಾನ ಮಂತ್ರಿಯ ಭಾಷಣವನ್ನು ‘ದುರಂತದ ಸಮಯದಲ್ಲಿ ಒಂದು ಪ್ರಹಸನ’ ಎಂದು ಬಣ್ಣಿಸಿದರು.

 

ಮೈಸೂರು ಸಂಸದರಾದ ಪ್ರತಾಪ್ ಸಿಂಹ ಅವರು ಪ್ರಧಾನಿಯ ಕರೆಯನ್ನು ಬೆಂಬಲಿಸಿ, “ಪ್ರಧಾನಿ ಮೋದೀಜಿಯವರ ಕರೆಯ ಹಿನ್ನೆಲೆಯಲ್ಲಿ ನಾಳೆ ಮೈಸೂರು ನಗರ ಅಧ್ಯಕ್ಷರಾದ ಶ್ರೀವತ್ಸ ಅವರ ನೇತೃತ್ವದಲ್ಲಿ ದೀಪ ಮತ್ತು ಕ್ಯಾಂಡಲುಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು” ಎಂದು ಟ್ವೀಟ್ ಮಾಡಿದ್ದಾರೆ.

ಸಂಘ ಪರಿವಾರದ ಸಾಮಾಜಿಕ ಮಾಧ್ಯಮ ತಪ್ಪು ಮಾಹಿತಿ ಅಭಿಯಾನದಲ್ಲಿ ತೊಡಗಿವೆ. 9 ನಿಮಿಷಗಳ ಬೆಳಕು ವೈರಸ್ ಅನ್ನು ಹೇಗೆ ಕೊಲ್ಲುತ್ತದೆ ಎಂಬುದರ ಕುರಿತು ನಾವು ಎಷ್ಟು ಬೇಗ ವಾಟ್ಸಾಪ್ ಫಾರ್ವರ್ಡ್‌ಗಳನ್ನು ಪಡೆಯುತ್ತೇವೆ ಎಂದು ಪತ್ರಕರ್ತ ರೋಹನ್ ವೆಂಕಟ್ ಆಶ್ಚರ್ಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...