Homeಕರ್ನಾಟಕಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಖಂಡಿಸಿ ಪ್ರತಿಭಟನೆಗೆ ಕರೆ: ಪೊಲೀಸರಿಂದ ತಪ್ಪಾಗಿದೆ ಎಂದ ಸಿಎಂ

ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಖಂಡಿಸಿ ಪ್ರತಿಭಟನೆಗೆ ಕರೆ: ಪೊಲೀಸರಿಂದ ತಪ್ಪಾಗಿದೆ ಎಂದ ಸಿಎಂ

- Advertisement -
- Advertisement -

ಬೆಂಗಳೂರಿನ ರಂಗಶಂಕರದಲ್ಲಿ ಪ್ಯಾಲೇಸ್ತೀನ್ ಪರ ಕಾರ್ಯಕ್ರಮ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿರುವುದು ಕಲಾವಿದರು, ಪ್ರಗತಿಪರ ಚಿಂತಕರು ಮತ್ತು ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇರುವಾಗಲೂ ಅನುಮತಿ ದೊರೆಯದೇ ಇದ್ದದಕ್ಕೆ ಕಲಾವಿದರು ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರ ನಡೆಯನ್ನು ಖಂಡಿಸಿ ಡಿಸೆಂಬರ್ 2 ಶನಿವಾರ ಸಂಜೆ 4.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಗತಿಪರ ಚಿಂತಕರು, ಹೋರಾಟಗಾರರು ‘ಸದಾಗ್ರಹ’ ಎಂಬ ಹೆಸರಿನಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನೆಗೆ ಕೂಡ ಪೊಲೀಸರ ಅನುಮತಿ ದೊರೆಯುವುದು ಅನುಮಾನವಾಗಿದೆ.

ಈ ಕುರಿತು ಮಾತನಾಡಿರುವ ಪ್ರತಿಭಟನೆಯ ಆಯೋಜಕರಲ್ಲೊಬ್ಬರಾದ ಡಾ. ಹೆಚ್‌.ವಿ ವಾಸು “ಡಿಸಿಪಿ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈಗ ಮುಖ್ಯಮಂತ್ರಿಯವರ ಹೇಳಿಕೆ ಬಂದ ನಂತರ ಏನು ಮಾಡುತ್ತಾರೆ ನೋಡಬೇಕು. ಆದರೆ, ಸದಾಗ್ರಹ ಸಭೆ ನಡೆಯುವುದಂತೂ ಖಚಿತ. 15,000 ಜನರ ಮಾರಣಹೋಮ ನಡೆದಿರುವಾಗ ಸುಮ್ಮನಿದ್ದರೆ ಕರ್ನಾಟಕಕ್ಕೇ ಅವಮಾನ” ಎಂದಿದ್ದಾರೆ.

ಪೊಲೀಸ್ ಅಧಿಕಾರಿಗಳಿಂದ ತಪ್ಪಾಗಿದೆ ಎಂದ ಸಿಎಂ :

ರಂಗಶಂಕರದಲ್ಲಿ ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ಕಲಾವಿದ ರಮಣೀಕ್ ಸಿಂಗ್, “ರಂಗಶಂಕರದಂತಹ ಸಂಸ್ಥೆಯನ್ನು ಬೆದರಿಸುವ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಮೇಲಿನ ತನ್ನ ಬದ್ಧತೆ ಕೊರತೆಯನ್ನು ಮತ್ತೊಮ್ಮೆ ತೋರಿಸಿದೆ” ಎಂದಿದ್ದರು. ಇದೀಗ ಪೊಲೀಸರ ನಡೆ ಖಂಡಿಸಿ ಪ್ರತಿಭಟನೆಯನ್ನೂ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟನೆ ಹೊರಡಿಸಿದ್ದಾರೆ.

“ರಾಜ್ಯ ಸರ್ಕಾರ ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಕೆಲಸವನ್ನೂ ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಇಂತಹ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯವ ಕೆಲಸ ಮಾಡುವುದಿಲ್ಲ. ನಾವು ಸಂವಿಧಾನ ಮೂಲ ಸ್ಪೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ. ಕೆಲ ಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳಿವಳಿಕೆಯ ಕಾರಣಕ್ಕೆ ಒಂದೆರಡು ಅನಾವಶ್ಯಕವಾದ ಗೊಂದಲಗಳು ನಿರ್ಮಾಣವಾಗಿದೆ ಎಂಬುವುದು ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಯಾವುದೇ ಗೊಂದಲಗಳು ಉಂಟಾಗದಂತೆ ನೋಡಿಕೊಳ್ಳಲು ನಾನು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆಗಳನ್ನು ನೀಡಿದ್ದೇನೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರ ಸದಾ ನಿಲ್ಲುತ್ತದೆ ಎಂಬುವುದನ್ನು ತಿಳಿಯಬಯಸುತ್ತೇನೆ. ಆದ್ದರಿಂದ ಯಾವುದೇ ಗೊಂದಲಗಳನ್ನು ಸೃಷ್ಟಿಸಬಾರದೆಂದು. ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತರಾಗಬಾರದೆಂದು ನಾಡ ಬಾಂಧವರಲ್ಲಿ ವಿನಂತಿಸುತ್ತೇನೆ” ಎಂದು ಸಿಎಂ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದ್ದಾರೆ.

ರಂಗಶಂಕರದಲ್ಲಿ ನವೆಂಬರ್ 29 ಸಂಜೆ 5:30ಕ್ಕೆ ಕಾವ್ಯಗೋಷ್ಠಿ, ಕಿರು ನಾಟಕ ಸೇರಿದಂತೆ ಪ್ಯಾಲೇಸ್ತೀನ್‌ನಲ್ಲಿ ನಡೆಯುತ್ತಿರುವ ಮಾರಣಹೋಮ ಖಂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಲಾವಿದರಾದ ಎಂ.ಡಿ ಪಲ್ಲವಿ, ಶ್ವೇತಾಂಶು ಬೋರ, ರಮಣೀಕ್ ಸಿಂಗ್ ಇದರ ನೇತೃತ್ವ ವಹಿಸಿದ್ದರು. ಆದರೆ, ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆ ಕಾರ್ಯಕ್ರಮ ರದ್ದಾಗಿತ್ತು.

ಈ ಕುರಿತು ನಾನು ಗೌರಿ ಜೊತೆ ದೂರವಾಣಿ ಮೂಲಕ ಮಾತನಾಡಿದ್ದ ಗಾಯಕಿ ಎಂ.ಡಿ ಪಲ್ಲವಿ, “ರಂಗಶಂಕರದವರು ಕಾರ್ಯಕ್ರಮ ರದ್ದುಗೊಳಿಸುವಂತೆ ಹೇಳಿದ್ದಾರೆ. ಪೊಲೀಸರು ಇಂತಹ ಕಾರ್ಯಕ್ರಮಗಳಿಗೆ ಅನುಮತಿ ಇಲ್ಲ ಎಂದು ಅವರಿಗೆ ತಿಳಿಸಿದ್ದಾರಂತೆ. ನಮನ್ನು ನೇರವಾಗಿ ಪೊಲೀಸರು ಸಂಪರ್ಕಿಸಿಲ್ಲ” ಎಂದಿದ್ದರು.

ಇದನ್ನೂ ಓದಿ : ಶಾಲೆಗಳಿಗೆ ಬಾಂಬ್ ಬೆದರಿಕೆ: ಸೂಕ್ತ ಭದ್ರತೆ ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...