Homeಕರ್ನಾಟಕಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಖಂಡಿಸಿ ಪ್ರತಿಭಟನೆಗೆ ಕರೆ: ಪೊಲೀಸರಿಂದ ತಪ್ಪಾಗಿದೆ ಎಂದ ಸಿಎಂ

ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಖಂಡಿಸಿ ಪ್ರತಿಭಟನೆಗೆ ಕರೆ: ಪೊಲೀಸರಿಂದ ತಪ್ಪಾಗಿದೆ ಎಂದ ಸಿಎಂ

- Advertisement -
- Advertisement -

ಬೆಂಗಳೂರಿನ ರಂಗಶಂಕರದಲ್ಲಿ ಪ್ಯಾಲೇಸ್ತೀನ್ ಪರ ಕಾರ್ಯಕ್ರಮ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿರುವುದು ಕಲಾವಿದರು, ಪ್ರಗತಿಪರ ಚಿಂತಕರು ಮತ್ತು ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇರುವಾಗಲೂ ಅನುಮತಿ ದೊರೆಯದೇ ಇದ್ದದಕ್ಕೆ ಕಲಾವಿದರು ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರ ನಡೆಯನ್ನು ಖಂಡಿಸಿ ಡಿಸೆಂಬರ್ 2 ಶನಿವಾರ ಸಂಜೆ 4.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಗತಿಪರ ಚಿಂತಕರು, ಹೋರಾಟಗಾರರು ‘ಸದಾಗ್ರಹ’ ಎಂಬ ಹೆಸರಿನಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನೆಗೆ ಕೂಡ ಪೊಲೀಸರ ಅನುಮತಿ ದೊರೆಯುವುದು ಅನುಮಾನವಾಗಿದೆ.

ಈ ಕುರಿತು ಮಾತನಾಡಿರುವ ಪ್ರತಿಭಟನೆಯ ಆಯೋಜಕರಲ್ಲೊಬ್ಬರಾದ ಡಾ. ಹೆಚ್‌.ವಿ ವಾಸು “ಡಿಸಿಪಿ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈಗ ಮುಖ್ಯಮಂತ್ರಿಯವರ ಹೇಳಿಕೆ ಬಂದ ನಂತರ ಏನು ಮಾಡುತ್ತಾರೆ ನೋಡಬೇಕು. ಆದರೆ, ಸದಾಗ್ರಹ ಸಭೆ ನಡೆಯುವುದಂತೂ ಖಚಿತ. 15,000 ಜನರ ಮಾರಣಹೋಮ ನಡೆದಿರುವಾಗ ಸುಮ್ಮನಿದ್ದರೆ ಕರ್ನಾಟಕಕ್ಕೇ ಅವಮಾನ” ಎಂದಿದ್ದಾರೆ.

ಪೊಲೀಸ್ ಅಧಿಕಾರಿಗಳಿಂದ ತಪ್ಪಾಗಿದೆ ಎಂದ ಸಿಎಂ :

ರಂಗಶಂಕರದಲ್ಲಿ ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ಕಲಾವಿದ ರಮಣೀಕ್ ಸಿಂಗ್, “ರಂಗಶಂಕರದಂತಹ ಸಂಸ್ಥೆಯನ್ನು ಬೆದರಿಸುವ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಮೇಲಿನ ತನ್ನ ಬದ್ಧತೆ ಕೊರತೆಯನ್ನು ಮತ್ತೊಮ್ಮೆ ತೋರಿಸಿದೆ” ಎಂದಿದ್ದರು. ಇದೀಗ ಪೊಲೀಸರ ನಡೆ ಖಂಡಿಸಿ ಪ್ರತಿಭಟನೆಯನ್ನೂ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟನೆ ಹೊರಡಿಸಿದ್ದಾರೆ.

“ರಾಜ್ಯ ಸರ್ಕಾರ ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಕೆಲಸವನ್ನೂ ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಇಂತಹ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯವ ಕೆಲಸ ಮಾಡುವುದಿಲ್ಲ. ನಾವು ಸಂವಿಧಾನ ಮೂಲ ಸ್ಪೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ. ಕೆಲ ಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳಿವಳಿಕೆಯ ಕಾರಣಕ್ಕೆ ಒಂದೆರಡು ಅನಾವಶ್ಯಕವಾದ ಗೊಂದಲಗಳು ನಿರ್ಮಾಣವಾಗಿದೆ ಎಂಬುವುದು ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಯಾವುದೇ ಗೊಂದಲಗಳು ಉಂಟಾಗದಂತೆ ನೋಡಿಕೊಳ್ಳಲು ನಾನು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆಗಳನ್ನು ನೀಡಿದ್ದೇನೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರ ಸದಾ ನಿಲ್ಲುತ್ತದೆ ಎಂಬುವುದನ್ನು ತಿಳಿಯಬಯಸುತ್ತೇನೆ. ಆದ್ದರಿಂದ ಯಾವುದೇ ಗೊಂದಲಗಳನ್ನು ಸೃಷ್ಟಿಸಬಾರದೆಂದು. ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತರಾಗಬಾರದೆಂದು ನಾಡ ಬಾಂಧವರಲ್ಲಿ ವಿನಂತಿಸುತ್ತೇನೆ” ಎಂದು ಸಿಎಂ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದ್ದಾರೆ.

ರಂಗಶಂಕರದಲ್ಲಿ ನವೆಂಬರ್ 29 ಸಂಜೆ 5:30ಕ್ಕೆ ಕಾವ್ಯಗೋಷ್ಠಿ, ಕಿರು ನಾಟಕ ಸೇರಿದಂತೆ ಪ್ಯಾಲೇಸ್ತೀನ್‌ನಲ್ಲಿ ನಡೆಯುತ್ತಿರುವ ಮಾರಣಹೋಮ ಖಂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಲಾವಿದರಾದ ಎಂ.ಡಿ ಪಲ್ಲವಿ, ಶ್ವೇತಾಂಶು ಬೋರ, ರಮಣೀಕ್ ಸಿಂಗ್ ಇದರ ನೇತೃತ್ವ ವಹಿಸಿದ್ದರು. ಆದರೆ, ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆ ಕಾರ್ಯಕ್ರಮ ರದ್ದಾಗಿತ್ತು.

ಈ ಕುರಿತು ನಾನು ಗೌರಿ ಜೊತೆ ದೂರವಾಣಿ ಮೂಲಕ ಮಾತನಾಡಿದ್ದ ಗಾಯಕಿ ಎಂ.ಡಿ ಪಲ್ಲವಿ, “ರಂಗಶಂಕರದವರು ಕಾರ್ಯಕ್ರಮ ರದ್ದುಗೊಳಿಸುವಂತೆ ಹೇಳಿದ್ದಾರೆ. ಪೊಲೀಸರು ಇಂತಹ ಕಾರ್ಯಕ್ರಮಗಳಿಗೆ ಅನುಮತಿ ಇಲ್ಲ ಎಂದು ಅವರಿಗೆ ತಿಳಿಸಿದ್ದಾರಂತೆ. ನಮನ್ನು ನೇರವಾಗಿ ಪೊಲೀಸರು ಸಂಪರ್ಕಿಸಿಲ್ಲ” ಎಂದಿದ್ದರು.

ಇದನ್ನೂ ಓದಿ : ಶಾಲೆಗಳಿಗೆ ಬಾಂಬ್ ಬೆದರಿಕೆ: ಸೂಕ್ತ ಭದ್ರತೆ ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...