Homeಕರ್ನಾಟಕಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಖಂಡಿಸಿ ಪ್ರತಿಭಟನೆಗೆ ಕರೆ: ಪೊಲೀಸರಿಂದ ತಪ್ಪಾಗಿದೆ ಎಂದ ಸಿಎಂ

ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಖಂಡಿಸಿ ಪ್ರತಿಭಟನೆಗೆ ಕರೆ: ಪೊಲೀಸರಿಂದ ತಪ್ಪಾಗಿದೆ ಎಂದ ಸಿಎಂ

- Advertisement -
- Advertisement -

ಬೆಂಗಳೂರಿನ ರಂಗಶಂಕರದಲ್ಲಿ ಪ್ಯಾಲೇಸ್ತೀನ್ ಪರ ಕಾರ್ಯಕ್ರಮ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿರುವುದು ಕಲಾವಿದರು, ಪ್ರಗತಿಪರ ಚಿಂತಕರು ಮತ್ತು ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇರುವಾಗಲೂ ಅನುಮತಿ ದೊರೆಯದೇ ಇದ್ದದಕ್ಕೆ ಕಲಾವಿದರು ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರ ನಡೆಯನ್ನು ಖಂಡಿಸಿ ಡಿಸೆಂಬರ್ 2 ಶನಿವಾರ ಸಂಜೆ 4.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಗತಿಪರ ಚಿಂತಕರು, ಹೋರಾಟಗಾರರು ‘ಸದಾಗ್ರಹ’ ಎಂಬ ಹೆಸರಿನಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನೆಗೆ ಕೂಡ ಪೊಲೀಸರ ಅನುಮತಿ ದೊರೆಯುವುದು ಅನುಮಾನವಾಗಿದೆ.

ಈ ಕುರಿತು ಮಾತನಾಡಿರುವ ಪ್ರತಿಭಟನೆಯ ಆಯೋಜಕರಲ್ಲೊಬ್ಬರಾದ ಡಾ. ಹೆಚ್‌.ವಿ ವಾಸು “ಡಿಸಿಪಿ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈಗ ಮುಖ್ಯಮಂತ್ರಿಯವರ ಹೇಳಿಕೆ ಬಂದ ನಂತರ ಏನು ಮಾಡುತ್ತಾರೆ ನೋಡಬೇಕು. ಆದರೆ, ಸದಾಗ್ರಹ ಸಭೆ ನಡೆಯುವುದಂತೂ ಖಚಿತ. 15,000 ಜನರ ಮಾರಣಹೋಮ ನಡೆದಿರುವಾಗ ಸುಮ್ಮನಿದ್ದರೆ ಕರ್ನಾಟಕಕ್ಕೇ ಅವಮಾನ” ಎಂದಿದ್ದಾರೆ.

ಪೊಲೀಸ್ ಅಧಿಕಾರಿಗಳಿಂದ ತಪ್ಪಾಗಿದೆ ಎಂದ ಸಿಎಂ :

ರಂಗಶಂಕರದಲ್ಲಿ ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ಕಲಾವಿದ ರಮಣೀಕ್ ಸಿಂಗ್, “ರಂಗಶಂಕರದಂತಹ ಸಂಸ್ಥೆಯನ್ನು ಬೆದರಿಸುವ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಮೇಲಿನ ತನ್ನ ಬದ್ಧತೆ ಕೊರತೆಯನ್ನು ಮತ್ತೊಮ್ಮೆ ತೋರಿಸಿದೆ” ಎಂದಿದ್ದರು. ಇದೀಗ ಪೊಲೀಸರ ನಡೆ ಖಂಡಿಸಿ ಪ್ರತಿಭಟನೆಯನ್ನೂ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟನೆ ಹೊರಡಿಸಿದ್ದಾರೆ.

“ರಾಜ್ಯ ಸರ್ಕಾರ ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಕೆಲಸವನ್ನೂ ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಇಂತಹ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯವ ಕೆಲಸ ಮಾಡುವುದಿಲ್ಲ. ನಾವು ಸಂವಿಧಾನ ಮೂಲ ಸ್ಪೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ. ಕೆಲ ಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳಿವಳಿಕೆಯ ಕಾರಣಕ್ಕೆ ಒಂದೆರಡು ಅನಾವಶ್ಯಕವಾದ ಗೊಂದಲಗಳು ನಿರ್ಮಾಣವಾಗಿದೆ ಎಂಬುವುದು ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಯಾವುದೇ ಗೊಂದಲಗಳು ಉಂಟಾಗದಂತೆ ನೋಡಿಕೊಳ್ಳಲು ನಾನು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆಗಳನ್ನು ನೀಡಿದ್ದೇನೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರ ಸದಾ ನಿಲ್ಲುತ್ತದೆ ಎಂಬುವುದನ್ನು ತಿಳಿಯಬಯಸುತ್ತೇನೆ. ಆದ್ದರಿಂದ ಯಾವುದೇ ಗೊಂದಲಗಳನ್ನು ಸೃಷ್ಟಿಸಬಾರದೆಂದು. ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತರಾಗಬಾರದೆಂದು ನಾಡ ಬಾಂಧವರಲ್ಲಿ ವಿನಂತಿಸುತ್ತೇನೆ” ಎಂದು ಸಿಎಂ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದ್ದಾರೆ.

ರಂಗಶಂಕರದಲ್ಲಿ ನವೆಂಬರ್ 29 ಸಂಜೆ 5:30ಕ್ಕೆ ಕಾವ್ಯಗೋಷ್ಠಿ, ಕಿರು ನಾಟಕ ಸೇರಿದಂತೆ ಪ್ಯಾಲೇಸ್ತೀನ್‌ನಲ್ಲಿ ನಡೆಯುತ್ತಿರುವ ಮಾರಣಹೋಮ ಖಂಡಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಲಾವಿದರಾದ ಎಂ.ಡಿ ಪಲ್ಲವಿ, ಶ್ವೇತಾಂಶು ಬೋರ, ರಮಣೀಕ್ ಸಿಂಗ್ ಇದರ ನೇತೃತ್ವ ವಹಿಸಿದ್ದರು. ಆದರೆ, ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆ ಕಾರ್ಯಕ್ರಮ ರದ್ದಾಗಿತ್ತು.

ಈ ಕುರಿತು ನಾನು ಗೌರಿ ಜೊತೆ ದೂರವಾಣಿ ಮೂಲಕ ಮಾತನಾಡಿದ್ದ ಗಾಯಕಿ ಎಂ.ಡಿ ಪಲ್ಲವಿ, “ರಂಗಶಂಕರದವರು ಕಾರ್ಯಕ್ರಮ ರದ್ದುಗೊಳಿಸುವಂತೆ ಹೇಳಿದ್ದಾರೆ. ಪೊಲೀಸರು ಇಂತಹ ಕಾರ್ಯಕ್ರಮಗಳಿಗೆ ಅನುಮತಿ ಇಲ್ಲ ಎಂದು ಅವರಿಗೆ ತಿಳಿಸಿದ್ದಾರಂತೆ. ನಮನ್ನು ನೇರವಾಗಿ ಪೊಲೀಸರು ಸಂಪರ್ಕಿಸಿಲ್ಲ” ಎಂದಿದ್ದರು.

ಇದನ್ನೂ ಓದಿ : ಶಾಲೆಗಳಿಗೆ ಬಾಂಬ್ ಬೆದರಿಕೆ: ಸೂಕ್ತ ಭದ್ರತೆ ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...