Homeಮುಖಪುಟಜನತಾ ಕರ್ಫ್ಯೂ ಸಮಯದಲ್ಲಿ CAA, NPR, NRC ವಿರುದ್ಧ ಬಾಲ್ಕನಿಗಳಿಂದ ಪ್ರತಿಭಟನೆಗೆ ಕರೆ..

ಜನತಾ ಕರ್ಫ್ಯೂ ಸಮಯದಲ್ಲಿ CAA, NPR, NRC ವಿರುದ್ಧ ಬಾಲ್ಕನಿಗಳಿಂದ ಪ್ರತಿಭಟನೆಗೆ ಕರೆ..

- Advertisement -
- Advertisement -

ಭಾನುವಾರ ಸಂಜೆ 5 ಗಂಟೆಗೆ ದೇಶದ ಜನರೆಲ್ಲರೂ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರುದ್ಧ ತಮ್ಮ ಮನೆಗಳಲ್ಲಿನ ಕಿಟಿಕಿ-ಬಾಲ್ಕನಿ-ಗೇಟ್‌ಗಳಲ್ಲಿ ನಿಂತು ಪ್ರತಿಭಟನೆ ನಡೆಸಬೇಕೆಂದು ನಾಗರಿಕ ಸಮಾಜ ಗುಂಪು ಯುನೈಟೆಡ್ ಎಗೇನ್ಸ್ಟ್ ಹೇಟ್ ಕರೆ ನೀಡಿದೆ.

ಮಾರ್ಚ್‌ 22 ರಂದು ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಮನೆಯಲ್ಲಿಯೇ ಉಳಿದು, ಕಿಟಿಕಿ-ಬಾಲ್ಕನಿ-ಗೇಟ್‌ಗಳಲ್ಲಿ ಚಪ್ಪಾಳೆ ತಟ್ಟುವ ಮೂಲಕ ಜನತಾ ಕರ್ಫ್ಯೂ ಆಚರಿಸಬೇಕೆಂದು ಪ್ರಧಾನಿ ಮೋದಿಯವರು ಕರೆ ಕೊಟ್ಟ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ಪ್ರತಿಭಟನೆ ನಡೆಸುವ ಕರೆ ಕೇಳಿಬಂದಿದೆ.

ಆರೋಗ್ಯ ರಕ್ಷಣೆ ನೀಡುತ್ತಿರುವ ವೈದ್ಯಸಿಬ್ಬಂದಿಗೆ ಮತ್ತು ತುರ್ತು ಪರಿಸ್ಥಿತಿ ನಿರ್ವಹಿಸುತ್ತಿರುವವರಿಗೆ ಜನರು ಭಾನುವಾರ ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟಿ, ಗಂಟೆ ಬಾರಿಸುವ ಮೂಲಕ ಗೌರವ ಸಲ್ಲಿಸುತ್ತಾರೆ ಎಂದು ಮೋದಿ ಹೇಳಿದ್ದರು. ಕರೋನವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಎನ್‌ಪಿಆರ್ ನಡೆಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ಪ್ರಜ್ಞಾವಂತರೆಲ್ಲವೂ ತಮ್ಮ ಮನೆಗಳಿಂದ ಘೋಷಣೆಗಳನ್ನು ಕೂಗುತ್ತಾರೆ ಎಂದು ಯುನೈಟೈಡ್‌ ಎಗೇನ್ಸ್ಟ್ ಹೇಟ್ ಹೇಳಿಕೆಯಲ್ಲಿ ತಿಳಿಸಿದೆ.

“ಮೊದಲು ನಾವು ಸೋಂಕಿತರನ್ನು ನೋಡಿಕೊಳ್ಳುವ, ಅಗತ್ಯ ವಸ್ತುಗಳನ್ನು ಪೂರೈಸುವ ಕೆಲಸ ಮಾಡುತ್ತಿರುವ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಧನ್ಯವಾದ ಹೇಳುತ್ತೇವೆ … ತದನಂತರ ನಾವು ನಮ್ಮ ಬಾಲ್ಕನಿಗಳು ಮತ್ತು ಕಿಟಕಿಗಳಲ್ಲಿ ಎನ್ಆರ್‌ಸಿ, ಎನ್‌ಪಿಆರ್‌, ಸಿಎಎ ವಿರೋಧಿ ಫಲಕಗಳನ್ನು ಹಿಡಿದಿಟ್ಟುಕೊಳ್ಳುತ್ತೇವೆ. ಏಪ್ರಿಲ್ 1 ರಿಂದ ಎನ್‌ಪಿಆರ್‌ ಪ್ರಾರಂಭಿಸುವ ಸರ್ಕಾರದ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಯುನೈಟೆಡ್ ಎಗೇನ್ಸ್ಟ್ ಹೇಟ್‌ ಸಂಘಟನೆಯ ನದೀಮ್ ಖಾನ್ ತಿಳಿಸಿದ್ದಾರೆ.

ಕೊರೊನಾ ವೈರಸ್‌ ವಿರುದ್ಧ ಹೋರಾಡುತ್ತಿರುವ ಸರ್ಕಾರದ ಬದ್ಧತೆಗೆ ನಾವೆಲ್ಲರೂ ಜೊತೆಯಾಗಿದ್ದೇವೆ. ಭಾನುವಾರ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಜನರು ತಮ್ಮ ಮನೆಗಳ ಒಳಗೆ ಇರಬೇಕೆಂದು ಪ್ರಧಾನ ಮಂತ್ರಿ ಒತ್ತಾಯಿಸುತ್ತಿದ್ದರೆ, “ಈಶಾನ್ಯ ದೆಹಲಿಯಲ್ಲಿನ ಗಲಭೆಯಲ್ಲಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಶಿಬಿರಗಳಲ್ಲಿ ಇರುವ ಜನರಿಗೆ ಪುನರ್ವಸತಿ ಕಲ್ಪಿಸುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗಲಭೆಯಲ್ಲಿ ಮನೆಗಳನ್ನು ಕಳೆದುಕೊಂಡ ಸುಮಾರು 1,200 ಜನರು ಮುಸ್ತಾಬಾದ್‌ನಲ್ಲಿ ಅನೈರ್ಮಲ್ಯದ ಪರಿಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಪ್ರತಿಭಟನೆಯ ಭಾಗವಾಗಲಿರುವ ಇರ್ಕಾನ್ ಚೌಧರಿ ದೂರಿದ್ದಾರೆ.

“ಪ್ರಧಾನ ಮಂತ್ರಿ ಜನರು ತಮ್ಮ ಮನೆಗಳ ಒಳಗೆ ಇರಬೇಕೆಂದು ಕೇಳಿಕೊಂಡಿದ್ದಾರೆ. ಆದರೆ ನಮ್ಮ ಮನೆಗಳನ್ನು ಸುಟ್ಟು ಲೂಟಿ ಮಾಡಿದವರ ಬಗ್ಗೆ ಏನು ಹೇಳುವುದು? ಇಕ್ಕಟ್ಟಾದ, ಆರೋಗ್ಯಕರವಲ್ಲದ ನಿರಾಶ್ರಿತ ಶಿಬಿರಗಳಲ್ಲಿ ವಾಸಿಸುವುದನ್ನು ಬಿಟ್ಟು ಅವರಿಗೆ ಬೇರೆ ದಾರಿಯಿಲ್ಲ. ಸೋಂಕು ತಗುಲುವ ತೀವ್ರ ಅಪಾಯಗಳಿರುವ ಈ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದಾದರೂ ಹೇಗೆ ಎಂದು ಚೌಧರಿ ಪ್ರಶ್ನಿಸಿದ್ದಾರೆ.

ಇಡೀ ವಿಶ್ವವು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಮೊದಲು ಇದರ ಬಗ್ಗೆ ಗಮನ ಹರಿಸಬೇಕು ಎಂದು ಸಮಾಜ ಸೇವಕ ಪರ್ವೇಜ್ ಆಲಂ ಹೇಳಿದ್ದಾರೆ. “ನಾನು ಪ್ರಧಾನ ಮಂತ್ರಿಯ ಜನತಾ ಕರ್ಫ್ಯೂ ಕರೆಯನ್ನು ಸ್ವಾಗತಿಸಿ, ಅನುಸರಿಸುತ್ತೇನೆ. ಆದರೆ ನಾವು ಪಾತ್ರೆಗಳನ್ನು ಬಡಿದು ಎನ್‌ಪಿಆರ್ ಮತ್ತು ಸಿಎಎ ವಿರುದ್ಧ ಪ್ರತಿಭಟಿಸುತ್ತೇವೆ ” ಎಂದು ಅವರು ಹೇಳಿದ್ದಾರೆ.

ಕೃಪೆ: ದಿ ಫೆಡರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...