Homeಮುಖಪುಟಜನತಾ ಕರ್ಫ್ಯೂ ಸಮಯದಲ್ಲಿ CAA, NPR, NRC ವಿರುದ್ಧ ಬಾಲ್ಕನಿಗಳಿಂದ ಪ್ರತಿಭಟನೆಗೆ ಕರೆ..

ಜನತಾ ಕರ್ಫ್ಯೂ ಸಮಯದಲ್ಲಿ CAA, NPR, NRC ವಿರುದ್ಧ ಬಾಲ್ಕನಿಗಳಿಂದ ಪ್ರತಿಭಟನೆಗೆ ಕರೆ..

- Advertisement -
- Advertisement -

ಭಾನುವಾರ ಸಂಜೆ 5 ಗಂಟೆಗೆ ದೇಶದ ಜನರೆಲ್ಲರೂ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರುದ್ಧ ತಮ್ಮ ಮನೆಗಳಲ್ಲಿನ ಕಿಟಿಕಿ-ಬಾಲ್ಕನಿ-ಗೇಟ್‌ಗಳಲ್ಲಿ ನಿಂತು ಪ್ರತಿಭಟನೆ ನಡೆಸಬೇಕೆಂದು ನಾಗರಿಕ ಸಮಾಜ ಗುಂಪು ಯುನೈಟೆಡ್ ಎಗೇನ್ಸ್ಟ್ ಹೇಟ್ ಕರೆ ನೀಡಿದೆ.

ಮಾರ್ಚ್‌ 22 ರಂದು ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಮನೆಯಲ್ಲಿಯೇ ಉಳಿದು, ಕಿಟಿಕಿ-ಬಾಲ್ಕನಿ-ಗೇಟ್‌ಗಳಲ್ಲಿ ಚಪ್ಪಾಳೆ ತಟ್ಟುವ ಮೂಲಕ ಜನತಾ ಕರ್ಫ್ಯೂ ಆಚರಿಸಬೇಕೆಂದು ಪ್ರಧಾನಿ ಮೋದಿಯವರು ಕರೆ ಕೊಟ್ಟ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ಪ್ರತಿಭಟನೆ ನಡೆಸುವ ಕರೆ ಕೇಳಿಬಂದಿದೆ.

ಆರೋಗ್ಯ ರಕ್ಷಣೆ ನೀಡುತ್ತಿರುವ ವೈದ್ಯಸಿಬ್ಬಂದಿಗೆ ಮತ್ತು ತುರ್ತು ಪರಿಸ್ಥಿತಿ ನಿರ್ವಹಿಸುತ್ತಿರುವವರಿಗೆ ಜನರು ಭಾನುವಾರ ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟಿ, ಗಂಟೆ ಬಾರಿಸುವ ಮೂಲಕ ಗೌರವ ಸಲ್ಲಿಸುತ್ತಾರೆ ಎಂದು ಮೋದಿ ಹೇಳಿದ್ದರು. ಕರೋನವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಎನ್‌ಪಿಆರ್ ನಡೆಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ಪ್ರಜ್ಞಾವಂತರೆಲ್ಲವೂ ತಮ್ಮ ಮನೆಗಳಿಂದ ಘೋಷಣೆಗಳನ್ನು ಕೂಗುತ್ತಾರೆ ಎಂದು ಯುನೈಟೈಡ್‌ ಎಗೇನ್ಸ್ಟ್ ಹೇಟ್ ಹೇಳಿಕೆಯಲ್ಲಿ ತಿಳಿಸಿದೆ.

“ಮೊದಲು ನಾವು ಸೋಂಕಿತರನ್ನು ನೋಡಿಕೊಳ್ಳುವ, ಅಗತ್ಯ ವಸ್ತುಗಳನ್ನು ಪೂರೈಸುವ ಕೆಲಸ ಮಾಡುತ್ತಿರುವ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಧನ್ಯವಾದ ಹೇಳುತ್ತೇವೆ … ತದನಂತರ ನಾವು ನಮ್ಮ ಬಾಲ್ಕನಿಗಳು ಮತ್ತು ಕಿಟಕಿಗಳಲ್ಲಿ ಎನ್ಆರ್‌ಸಿ, ಎನ್‌ಪಿಆರ್‌, ಸಿಎಎ ವಿರೋಧಿ ಫಲಕಗಳನ್ನು ಹಿಡಿದಿಟ್ಟುಕೊಳ್ಳುತ್ತೇವೆ. ಏಪ್ರಿಲ್ 1 ರಿಂದ ಎನ್‌ಪಿಆರ್‌ ಪ್ರಾರಂಭಿಸುವ ಸರ್ಕಾರದ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಯುನೈಟೆಡ್ ಎಗೇನ್ಸ್ಟ್ ಹೇಟ್‌ ಸಂಘಟನೆಯ ನದೀಮ್ ಖಾನ್ ತಿಳಿಸಿದ್ದಾರೆ.

ಕೊರೊನಾ ವೈರಸ್‌ ವಿರುದ್ಧ ಹೋರಾಡುತ್ತಿರುವ ಸರ್ಕಾರದ ಬದ್ಧತೆಗೆ ನಾವೆಲ್ಲರೂ ಜೊತೆಯಾಗಿದ್ದೇವೆ. ಭಾನುವಾರ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಜನರು ತಮ್ಮ ಮನೆಗಳ ಒಳಗೆ ಇರಬೇಕೆಂದು ಪ್ರಧಾನ ಮಂತ್ರಿ ಒತ್ತಾಯಿಸುತ್ತಿದ್ದರೆ, “ಈಶಾನ್ಯ ದೆಹಲಿಯಲ್ಲಿನ ಗಲಭೆಯಲ್ಲಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಶಿಬಿರಗಳಲ್ಲಿ ಇರುವ ಜನರಿಗೆ ಪುನರ್ವಸತಿ ಕಲ್ಪಿಸುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗಲಭೆಯಲ್ಲಿ ಮನೆಗಳನ್ನು ಕಳೆದುಕೊಂಡ ಸುಮಾರು 1,200 ಜನರು ಮುಸ್ತಾಬಾದ್‌ನಲ್ಲಿ ಅನೈರ್ಮಲ್ಯದ ಪರಿಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಪ್ರತಿಭಟನೆಯ ಭಾಗವಾಗಲಿರುವ ಇರ್ಕಾನ್ ಚೌಧರಿ ದೂರಿದ್ದಾರೆ.

“ಪ್ರಧಾನ ಮಂತ್ರಿ ಜನರು ತಮ್ಮ ಮನೆಗಳ ಒಳಗೆ ಇರಬೇಕೆಂದು ಕೇಳಿಕೊಂಡಿದ್ದಾರೆ. ಆದರೆ ನಮ್ಮ ಮನೆಗಳನ್ನು ಸುಟ್ಟು ಲೂಟಿ ಮಾಡಿದವರ ಬಗ್ಗೆ ಏನು ಹೇಳುವುದು? ಇಕ್ಕಟ್ಟಾದ, ಆರೋಗ್ಯಕರವಲ್ಲದ ನಿರಾಶ್ರಿತ ಶಿಬಿರಗಳಲ್ಲಿ ವಾಸಿಸುವುದನ್ನು ಬಿಟ್ಟು ಅವರಿಗೆ ಬೇರೆ ದಾರಿಯಿಲ್ಲ. ಸೋಂಕು ತಗುಲುವ ತೀವ್ರ ಅಪಾಯಗಳಿರುವ ಈ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದಾದರೂ ಹೇಗೆ ಎಂದು ಚೌಧರಿ ಪ್ರಶ್ನಿಸಿದ್ದಾರೆ.

ಇಡೀ ವಿಶ್ವವು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಮೊದಲು ಇದರ ಬಗ್ಗೆ ಗಮನ ಹರಿಸಬೇಕು ಎಂದು ಸಮಾಜ ಸೇವಕ ಪರ್ವೇಜ್ ಆಲಂ ಹೇಳಿದ್ದಾರೆ. “ನಾನು ಪ್ರಧಾನ ಮಂತ್ರಿಯ ಜನತಾ ಕರ್ಫ್ಯೂ ಕರೆಯನ್ನು ಸ್ವಾಗತಿಸಿ, ಅನುಸರಿಸುತ್ತೇನೆ. ಆದರೆ ನಾವು ಪಾತ್ರೆಗಳನ್ನು ಬಡಿದು ಎನ್‌ಪಿಆರ್ ಮತ್ತು ಸಿಎಎ ವಿರುದ್ಧ ಪ್ರತಿಭಟಿಸುತ್ತೇವೆ ” ಎಂದು ಅವರು ಹೇಳಿದ್ದಾರೆ.

ಕೃಪೆ: ದಿ ಫೆಡರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...