Homeಮುಖಪುಟಜನತಾ ಕರ್ಫ್ಯೂ ಸಮಯದಲ್ಲಿ CAA, NPR, NRC ವಿರುದ್ಧ ಬಾಲ್ಕನಿಗಳಿಂದ ಪ್ರತಿಭಟನೆಗೆ ಕರೆ..

ಜನತಾ ಕರ್ಫ್ಯೂ ಸಮಯದಲ್ಲಿ CAA, NPR, NRC ವಿರುದ್ಧ ಬಾಲ್ಕನಿಗಳಿಂದ ಪ್ರತಿಭಟನೆಗೆ ಕರೆ..

- Advertisement -
- Advertisement -

ಭಾನುವಾರ ಸಂಜೆ 5 ಗಂಟೆಗೆ ದೇಶದ ಜನರೆಲ್ಲರೂ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರುದ್ಧ ತಮ್ಮ ಮನೆಗಳಲ್ಲಿನ ಕಿಟಿಕಿ-ಬಾಲ್ಕನಿ-ಗೇಟ್‌ಗಳಲ್ಲಿ ನಿಂತು ಪ್ರತಿಭಟನೆ ನಡೆಸಬೇಕೆಂದು ನಾಗರಿಕ ಸಮಾಜ ಗುಂಪು ಯುನೈಟೆಡ್ ಎಗೇನ್ಸ್ಟ್ ಹೇಟ್ ಕರೆ ನೀಡಿದೆ.

ಮಾರ್ಚ್‌ 22 ರಂದು ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಮನೆಯಲ್ಲಿಯೇ ಉಳಿದು, ಕಿಟಿಕಿ-ಬಾಲ್ಕನಿ-ಗೇಟ್‌ಗಳಲ್ಲಿ ಚಪ್ಪಾಳೆ ತಟ್ಟುವ ಮೂಲಕ ಜನತಾ ಕರ್ಫ್ಯೂ ಆಚರಿಸಬೇಕೆಂದು ಪ್ರಧಾನಿ ಮೋದಿಯವರು ಕರೆ ಕೊಟ್ಟ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ಪ್ರತಿಭಟನೆ ನಡೆಸುವ ಕರೆ ಕೇಳಿಬಂದಿದೆ.

ಆರೋಗ್ಯ ರಕ್ಷಣೆ ನೀಡುತ್ತಿರುವ ವೈದ್ಯಸಿಬ್ಬಂದಿಗೆ ಮತ್ತು ತುರ್ತು ಪರಿಸ್ಥಿತಿ ನಿರ್ವಹಿಸುತ್ತಿರುವವರಿಗೆ ಜನರು ಭಾನುವಾರ ಸಂಜೆ 5 ಗಂಟೆಗೆ ಚಪ್ಪಾಳೆ ತಟ್ಟಿ, ಗಂಟೆ ಬಾರಿಸುವ ಮೂಲಕ ಗೌರವ ಸಲ್ಲಿಸುತ್ತಾರೆ ಎಂದು ಮೋದಿ ಹೇಳಿದ್ದರು. ಕರೋನವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಎನ್‌ಪಿಆರ್ ನಡೆಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ಪ್ರಜ್ಞಾವಂತರೆಲ್ಲವೂ ತಮ್ಮ ಮನೆಗಳಿಂದ ಘೋಷಣೆಗಳನ್ನು ಕೂಗುತ್ತಾರೆ ಎಂದು ಯುನೈಟೈಡ್‌ ಎಗೇನ್ಸ್ಟ್ ಹೇಟ್ ಹೇಳಿಕೆಯಲ್ಲಿ ತಿಳಿಸಿದೆ.

“ಮೊದಲು ನಾವು ಸೋಂಕಿತರನ್ನು ನೋಡಿಕೊಳ್ಳುವ, ಅಗತ್ಯ ವಸ್ತುಗಳನ್ನು ಪೂರೈಸುವ ಕೆಲಸ ಮಾಡುತ್ತಿರುವ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಧನ್ಯವಾದ ಹೇಳುತ್ತೇವೆ … ತದನಂತರ ನಾವು ನಮ್ಮ ಬಾಲ್ಕನಿಗಳು ಮತ್ತು ಕಿಟಕಿಗಳಲ್ಲಿ ಎನ್ಆರ್‌ಸಿ, ಎನ್‌ಪಿಆರ್‌, ಸಿಎಎ ವಿರೋಧಿ ಫಲಕಗಳನ್ನು ಹಿಡಿದಿಟ್ಟುಕೊಳ್ಳುತ್ತೇವೆ. ಏಪ್ರಿಲ್ 1 ರಿಂದ ಎನ್‌ಪಿಆರ್‌ ಪ್ರಾರಂಭಿಸುವ ಸರ್ಕಾರದ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಯುನೈಟೆಡ್ ಎಗೇನ್ಸ್ಟ್ ಹೇಟ್‌ ಸಂಘಟನೆಯ ನದೀಮ್ ಖಾನ್ ತಿಳಿಸಿದ್ದಾರೆ.

ಕೊರೊನಾ ವೈರಸ್‌ ವಿರುದ್ಧ ಹೋರಾಡುತ್ತಿರುವ ಸರ್ಕಾರದ ಬದ್ಧತೆಗೆ ನಾವೆಲ್ಲರೂ ಜೊತೆಯಾಗಿದ್ದೇವೆ. ಭಾನುವಾರ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಜನರು ತಮ್ಮ ಮನೆಗಳ ಒಳಗೆ ಇರಬೇಕೆಂದು ಪ್ರಧಾನ ಮಂತ್ರಿ ಒತ್ತಾಯಿಸುತ್ತಿದ್ದರೆ, “ಈಶಾನ್ಯ ದೆಹಲಿಯಲ್ಲಿನ ಗಲಭೆಯಲ್ಲಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತ ಶಿಬಿರಗಳಲ್ಲಿ ಇರುವ ಜನರಿಗೆ ಪುನರ್ವಸತಿ ಕಲ್ಪಿಸುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗಲಭೆಯಲ್ಲಿ ಮನೆಗಳನ್ನು ಕಳೆದುಕೊಂಡ ಸುಮಾರು 1,200 ಜನರು ಮುಸ್ತಾಬಾದ್‌ನಲ್ಲಿ ಅನೈರ್ಮಲ್ಯದ ಪರಿಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಪ್ರತಿಭಟನೆಯ ಭಾಗವಾಗಲಿರುವ ಇರ್ಕಾನ್ ಚೌಧರಿ ದೂರಿದ್ದಾರೆ.

“ಪ್ರಧಾನ ಮಂತ್ರಿ ಜನರು ತಮ್ಮ ಮನೆಗಳ ಒಳಗೆ ಇರಬೇಕೆಂದು ಕೇಳಿಕೊಂಡಿದ್ದಾರೆ. ಆದರೆ ನಮ್ಮ ಮನೆಗಳನ್ನು ಸುಟ್ಟು ಲೂಟಿ ಮಾಡಿದವರ ಬಗ್ಗೆ ಏನು ಹೇಳುವುದು? ಇಕ್ಕಟ್ಟಾದ, ಆರೋಗ್ಯಕರವಲ್ಲದ ನಿರಾಶ್ರಿತ ಶಿಬಿರಗಳಲ್ಲಿ ವಾಸಿಸುವುದನ್ನು ಬಿಟ್ಟು ಅವರಿಗೆ ಬೇರೆ ದಾರಿಯಿಲ್ಲ. ಸೋಂಕು ತಗುಲುವ ತೀವ್ರ ಅಪಾಯಗಳಿರುವ ಈ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದಾದರೂ ಹೇಗೆ ಎಂದು ಚೌಧರಿ ಪ್ರಶ್ನಿಸಿದ್ದಾರೆ.

ಇಡೀ ವಿಶ್ವವು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಮೊದಲು ಇದರ ಬಗ್ಗೆ ಗಮನ ಹರಿಸಬೇಕು ಎಂದು ಸಮಾಜ ಸೇವಕ ಪರ್ವೇಜ್ ಆಲಂ ಹೇಳಿದ್ದಾರೆ. “ನಾನು ಪ್ರಧಾನ ಮಂತ್ರಿಯ ಜನತಾ ಕರ್ಫ್ಯೂ ಕರೆಯನ್ನು ಸ್ವಾಗತಿಸಿ, ಅನುಸರಿಸುತ್ತೇನೆ. ಆದರೆ ನಾವು ಪಾತ್ರೆಗಳನ್ನು ಬಡಿದು ಎನ್‌ಪಿಆರ್ ಮತ್ತು ಸಿಎಎ ವಿರುದ್ಧ ಪ್ರತಿಭಟಿಸುತ್ತೇವೆ ” ಎಂದು ಅವರು ಹೇಳಿದ್ದಾರೆ.

ಕೃಪೆ: ದಿ ಫೆಡರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...