Homeಮುಖಪುಟಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಬಳಿಕ ರಾಜಸ್ಥಾನದಲ್ಲಿ ಭುಗಿಲೆದ್ದ ಪ್ರತಿಭಟನೆ: ಬಂದ್‌ಗೆ ಕರೆ

ಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಬಳಿಕ ರಾಜಸ್ಥಾನದಲ್ಲಿ ಭುಗಿಲೆದ್ದ ಪ್ರತಿಭಟನೆ: ಬಂದ್‌ಗೆ ಕರೆ

- Advertisement -
- Advertisement -

ಬಲಪಂಥೀಯ ಸಂಘಟನೆಯಾದ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ನಿನ್ನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಘಟನೆ ಬೆನ್ನಲ್ಲೇ ರಾಜಸ್ಥಾನದ ವಿವಿಧೆಡೆ ಪ್ರತಿಭಟನೆ ಭುಗಿಲೆದ್ದಿದ್ದು, ಇಂದು ರಾಜಸ್ಥಾನ ಬಂದ್‌ಗೆ ಕರ್ಣಿ ಸೇನೆ ಕರೆ ನೀಡಿದೆ.

ರಾಜಸ್ಥಾನದಲ್ಲಿ ರಜಪೂತ ನಾಯಕನ ಹತ್ಯೆಯು ಬಳಿಕ ಪ್ರತಿಭಟನೆ ಭುಗಿಲೆದ್ದಿದೆ. ಸುಖದೇವ್ ಸಿಂಗ್ ಗೊಗಮೆಡಿ ಬೆಂಬಲಿಗರು ಜೈಪುರದ ಆಸ್ಪತ್ರೆಯ ಹೊರಭಾಗದಲ್ಲಿ ರಸ್ತೆ ತಡೆದು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪ್ರತಿಭಟಿಸಿದ್ದಾರೆ. ಚುರು, ಉದಯಪುರ, ಅಲ್ವಾರ್ ಮತ್ತು ಜೋಧ್‌ಪುರ ಜಿಲ್ಲೆಗಳಲ್ಲಿಯೂ ಪ್ರತಿಭಟನೆಗಳು ಭುಗಿಲೆದ್ದಿವೆ.

ಆರೋಪಿಗಳ ಅಡಗು ತಾಣಗಳ ಮೇಲೆ ದಾಳಿ ನಡೆಸಿ ಶೀಘ್ರವಾಗಿ ಬಂಧಿಸಲಾಗುವುದು. ಯಾರೂ ಅಹಿತಕರ ಘಟನೆಗೆ ಆಸ್ಪದ ಕೊಡಬಾರದು. ಎಲ್ಲರೂ ಶಾಂತಿ ಕಾಪಾಡುವಂತೆ ರಾಜಸ್ಥಾನದ ಪೊಲೀಸ್ ಮುಖ್ಯಸ್ಥ ಉಮೇಶ್ ಮಿಶ್ರಾ ಮನವಿ ಮಾಡಿದ್ದಾರೆ.

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲನ್ನು ಕಂಡ ಬಳಿಕ ಇದೀಗ ಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಸುಖದೇವ್ ಸಿಂಗ್ ಗೊಗಮೆಡಿ ಈ ಮೊದಲು ಮಾತನಾಡಿರುವ ವಿಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿಂದಿನ ಸಿಎಂ ಅಶೋಕ್ ಗೆಹ್ಲೂಟ್ ಅವರು ತಮ್ಮ ಭದ್ರತೆಯನ್ನು ಕಡಿತಗೊಳಿಸಿದ್ದಾರೆ ಎಂದು ವಿಡಿಯೊದಲ್ಲಿ ಗೊಗಮೆಡಿ ಹೇಳಿಕೊಂಡಿದ್ದರು.

ಮಾಜಿ ಸಿಎಂ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್, ರಾಜ್ಯವರ್ಧನ್ ರಾಥೋಡ್ ಸೇರಿದಂತೆ ಎಲ್ಲಾ ಪ್ರಮುಖ ರಾಜಕೀಯ ನಾಯಕರು ಹತ್ಯೆಯನ್ನು ಖಂಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ರಾಜಸ್ಥಾನ ಜಂಗಲ್ ರಾಜ್‌ಗೆ ಮರಳಿದೆ ಎಂದು ಹೇಳಿದ್ದಾರೆ.

ಮಂಗಳವಾರ ಮಧ್ಯಾಹ್ನ ಶ್ಯಾಮ್ ನಗರ ಪ್ರದೇಶದಲ್ಲಿ ಸುಖದೇವ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಾಥಮಿಕ ವರದಿಗಳ ಪ್ರಕಾರ, ಗೊಗಮೆಡಿ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಶೂಟೌಟ್‌ನ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಲಾಗಿದೆ. ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ರೋಹಿತ್ ಗೋಡಾರಾ ಕಪುರಿಸರ್ ಗೊಗಮೆಡಿ ಹತ್ಯೆಯ ಹೊಣೆ ಹೊತ್ತುಕೊಂಡಿದ್ದಾನೆ.

ಸುಖದೇವ್ ಸಿಂಗ್ ಗೊಗಮೆಡಿ ಅವರು ಲೋಕೇಂದ್ರ ಸಿಂಗ್ ಕಲ್ವಿಯವರ ರಜಪೂತ್ ಕರ್ಣಿ ಸೇನೆಯ ಭಾಗವಾಗಿದ್ದರು. ಈ ಸಂಘಟನೆ ಸಂಜಯ್ ಲೀಲಾ ಬನ್ಸಾಲಿಯವರ ‘ಪದ್ಮಾವತ್’ ಸಿನಿಮಾದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದಿತ್ತು. ನಂತರ ಆಂತರಿಕ ಗಲಾಟೆಯಿಂದ ಗೊಗಮೆಡಿ ತಮ್ಮದೇ ಪ್ರತ್ಯೇಕ ಕರ್ಣಿ ಸೇನೆಯನ್ನು ಕಟ್ಟಿದ್ದರು.

ದೀಪಿಕಾ ಪಡುಕೋಣೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡ ‘ಪದ್ಮಾವತ್’ ಸಿನಿಮಾ ವಿರೋಧಿಸಿ ಮತ್ತು ಗ್ಯಾಂಗ್‌ಸ್ಟರ್ ಆನಂದ್‌ಪಾಲ್ ಎನ್‌ಕೌಂಟರ್ ಪ್ರಕರಣದ ನಂತರ ರಾಜಸ್ಥಾನದಲ್ಲಿ ಪ್ರತಿಭಟನೆ ನಡೆಸುವ ಗೊಗಮೆಡಿ ಬೆಳಕಿಗೆ ಬಂದಿದ್ದರು.

ಇದನ್ನು ಓದಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣ: ಚೈತ್ರಾ ಸೇರಿ ಇಬ್ಬರಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...